Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಮಾದರಿಯಲ್ಲೇ ಆಂಧ್ರದಲ್ಲೂ ಶಕ್ತಿ ಯೋಜನೆ ಜಾರಿಗೆ ಚಿಂತನೆ, ಬೆಂಗಳೂರಿನಲ್ಲಿ ಅಧ್ಯಯನ

ಕರ್ನಾಟಕದಲ್ಲಿ ಬಸ್ ಟಿಕೆಟ್ ದರ ಏರಿಕೆ ಬಿಸಿ ನಡುವೆ, ಶಕ್ತಿ ಯೋಜನೆಗೆ ಪ್ರಶಂಸೆ ವ್ಯಕ್ತವಾಗಿದೆ. ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ರಾಜ್ಯದಲ್ಲೂ ಸಹ ಈ ಯೋಜನೆ ಜಾರಿಗೆ ತರಲು ಮುಂದಾಗಿದೆ. ಇದರಿಂದ ಇಂದು ಆಂಧ್ರದ ಸಚಿವರ ನಿಯೋಗ ಕರ್ನಾಟಕದಲ್ಲಿ ಅಧ್ಯಯನ ನಡೆಸಿದ್ದು, ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದೆ.

ಕರ್ನಾಟಕದ ಮಾದರಿಯಲ್ಲೇ ಆಂಧ್ರದಲ್ಲೂ ಶಕ್ತಿ ಯೋಜನೆ ಜಾರಿಗೆ ಚಿಂತನೆ, ಬೆಂಗಳೂರಿನಲ್ಲಿ ಅಧ್ಯಯನ
Shakti Scheme
Follow us
Anil Kalkere
| Updated By: ರಮೇಶ್ ಬಿ. ಜವಳಗೇರಾ

Updated on:Jan 03, 2025 | 8:45 PM

ಬೆಂಗಳೂರು, (ಜನವರಿ 03): ಐದು ಕಾಂಗ್ರೆಸ್ ಸರ್ಕಾರ ಮಹತ್ವಪೂರ್ಣ ಕಾಂಗ್ರೆಸ್ ಗ್ಯಾರೆಂಟಿಗಳ ಪೈಕಿ ಶಕ್ತಿ ಯೋಜನೆಯೂ ಒಂದಾಗಿದ್ದು, ರಾಜ್ಯದ ಮಹಿಳೆಯರನ್ನಷ್ಟೇ ಅಲ್ಲದೇ ಪಕ್ಕದ ರಾಜ್ಯ ಆಂಧ್ರ ಪ್ರದೇಶದ ಗಮನವನ್ನೂ ಸೆಳೆದಿದೆ. ಚುನಾವಣೆ ಪೂರ್ವದಲ್ಲಿ ಚಂದ್ರಬಾಬು ನಾಯ್ಡು ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಉಚಿತ‌ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದರು. ಹೀಗಾಗಿ ಇಂದು (ಜನವರಿ 03) ಕರ್ನಾಟಕದಲ್ಲಿ ಜಾರಿಯಲ್ಲಿರುವ ಶಕ್ತಿ ಯೋಜನೆ ಕುರಿತು ಅಧಿಕಾರಿಗಳು ಹಾಗೂ ಸಾರಿಗೆ ಸಚಿವರಿಂದ ಆಂಧ್ರಪ್ರದೇಶದ ಸಚಿವರುಗಳು ಮಾಹಿತಿ ಪಡೆದಿದ್ದಾರೆ.

ಆಂಧ್ರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ‌ ಸಚಿವೆ ಗುಮ್ಮಿದಿ ಸಂಧ್ಯಾ ರಾಣಿ, ಗೃಹ ಸಚಿವೆ ವಂಗಲಪುಡಿ ಅನಿತಾ ಹಾಗೂ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ‌ ನೇತೃತ್ವದ 3 ಸಚಿವರ ತಂಡ‌ ಅಧ್ಯಯನ ನಡೆಸಿ ತೆರಳಿದೆ. ಶಾಂತಿನಗರದ KSRTC ಡಿಪೋಗೆ ತೆರಳಿ ವಿಶೇಷ ಬಸ್ ಗಳ ವೀಕ್ಷಣೆ ಮಾಡಿದರು. ಇದರ ಜೊತೆಗೆ ಉಚಿತ ಬಸ್ ಪ್ರಯಾಣದ ಮಾನದಂಡಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿದ್ದಾರೆ.

ಇದನ್ನೂ ಓದಿ: ಜ.5ರಿಂದಲೇ KSRTC, BMTC ಟಿಕೆಟ್ ದರ ಹೆಚ್ಚಳ ಜಾರಿ: ನಿಮ್ಮ ಊರಿಗೆ ಎಷ್ಟು ರೇಟ್ ?

ಆಂಧ್ರ ಪ್ರದೇಶದ ಸಚಿವರ ನಿಯೋಗ‌ ರಾಜ್ಯದ ಶಕ್ತಿ ಯೋಜನೆಯ ಸಾಧಕ ಬಾಧಕಗಳನ್ನ ಬಗ್ಗೆ ಚರ್ಚೆ ನಡೆಸಿದೆ. ಆರ್ಥಿಕ ಇಲಾಖೆಯ ಆಗುಹೋಗುಗಳ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ಕರ್ನಾಟಕ ಮಾದರಿಯಲ್ಲೇ‌ ಆಂಧ್ರಪ್ರದೇಶದಲ್ಲೂ ಮಹಿಳೆಯರಿಗೆ‌ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸುವ ಚಿಂತನೆಯಲ್ಲಿದೆ. ಕರ್ನಾಟಕದ ಮಾಹಿತಿಗಳನ್ನ ಕ್ರೋಢೀಕರಿಸಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಮಾಹಿತಿ ನೀಡಲಿದ್ದಾರೆ. ಸದ್ಯ ಕರ್ನಾಟಕದಲ್ಲಿ ಮಹಿಳಾ ಪ್ರಯಾಣಿಕರ ಪ್ರಶಂಸೆ ಬೆನ್ನಲ್ಲೇ ಆಂಧ್ರಪ್ರದೇಶ ಸಚಿವರುಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದ್ಯ ಪ್ರಧಾನಿ ಮೋದಿ‌ ಸೇರಿದಂತೆ ಬಹುತೇಕ NDA ನಾಯಕರು ಕಾಂಗ್ರೆಸ್ ನ ಗ್ಯಾರೆಂಟಿ ಯೋಜನೆಗಳನ್ನ ಟೀಕೆ ಮಾಡಿದ್ರು. ಇದೀಗ ಕಾಂಗ್ರೆಸ್ ನ ಶಕ್ತಿ ಯೋಜನೆಗೆ ಬಗ್ಗೆ ಪ್ರಶಂಸೆ ವ್ಯಕ್ತಿಪಡಿಸಿದ್ದು, ತಮ್ಮ ರಾಜ್ಯಗಳಲ್ಲೂ ಜಾರಿಗೆ ಮುಂದಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:44 pm, Fri, 3 January 25

ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು