AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಇಲ್ಲದ 2.93 ಕೋಟಿ ರೂ. ಪತ್ತೆ: ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಸಿಎಂಎಸ್ ಏಜೆನ್ಸಿಗೆ ಸೇರಿದ ವಾಹನದಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿದ್ದ ಸಾಗಿಸುತ್ತಿದ್ದ 2.93 ಕೋಟಿ ರೂ. ಅನ್ನು ಹೆಬ್ಬಗೋಡಿ ಪೊಲೀಸರು ಸೀಜ್​ ಮಾಡಿದ್ದಾರೆ. ಹಣದ ಬಗ್ಗೆ ಚುನಾವಣಾ ಆಯೋಗ ಮತ್ತು ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ದಾಖಲೆ ಇಲ್ಲದ 2.93 ಕೋಟಿ ರೂ. ಪತ್ತೆ: ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ
ಸೀಜ್ ಮಾಡಿರುವ 2.93 ಕೋಟಿ ರೂ.
ರಾಮು, ಆನೇಕಲ್​
| Edited By: |

Updated on: Apr 15, 2024 | 5:34 PM

Share

ಆನೇಕಲ್, ಏಪ್ರಿಲ್​​ 15: ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿದ್ದ ಸಾಗಿಸುತ್ತಿದ್ದ 2.93 ಕೋಟಿ ರೂ. ಅನ್ನು ಹೆಬ್ಬಗೋಡಿ ಪೊಲೀಸರು ಸೀಜ್ (seize)​ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಸಿಎಂಎಸ್ ಏಜೆನ್ಸಿಗೆ ಸೇರಿದ ವಾಹನದಲ್ಲಿ ಎಟಿಎಂಗೆ ಹಣ ಸಾಗಿಸುವಾಗ ವಶಕ್ಕೆ ಪಡೆಯಲಾಗಿದೆ. ಹೆಬ್ಬಗೋಡಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ವಾಹನ ಪರಿಶೀಲನೆ ಮಾಡಿದ್ದು, ಬಂದೂಕು ಸಹಿತ ಸೆಕ್ಯೂರಿಟಿ ಗಾರ್ಡ್ ಇಲ್ಲದೆ ಹಣ ಸಾಗಿಸುತ್ತಿರುವುದು ಪತ್ತೆ ಆಗಿದೆ. ಅನುಮಾನಗೊಂಡು ಪರಿಶೀಲಿಸಿದಾಗ ದಾಖಲೆ ಇಲ್ಲದ ಹಣ ಪತ್ತೆ ಆಗಿದ್ದು, ಹಣದ ಬಗ್ಗೆ ಚುನಾವಣಾ ಆಯೋಗ ಮತ್ತು ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ 30 ಲಕ್ಷ ರೂ. ವಶಕ್ಕೆ 

ಕೊಪ್ಪಳ: ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ 30 ಲಕ್ಷ ರೂ. ಹಣವನ್ನು ಪೊಲೀಸರು ಮತ್ತು ತಹಶಿಲ್ದಾರ್ ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಕೆಡೆಬಾಗಿಲು ಬಳಿ ಚೆಕ್ ಪೋಸ್ಟ್​ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾಗ, ಕಾರ್​ನಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾರೊಂದರಿಂದ ಕೋಟ್ಯಾಂತರ ಹಣ ಜಪ್ತು, ಹಣ ಸಾಗಿಸುತ್ತಿದ್ದವರು ಪರಾರಿ

ಬಳ್ಳಾರಿ ಜಿಲ್ಲೆಯ ಶಿರಗುಪ್ಪಾ ತಾಲೂಕಿನ ನಡವಿಯಿಂದ ಹೊಸಪೇಟ್​ಗೆ ಪೀರಸಾಭ್ ಎಂಬುವವರ ಹಣ ಸಾಗಿಸುತ್ತಿದ್ದರು. ಹಣಕ್ಕೆ ಯಾವುದೇ ದಾಖಲಾತಿಗಳು ಇಲ್ಲದೇ ಇರೋದರಿಂದ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಬಸ್​​​ನಲ್ಲಿ ಸಾಗಿಸುತ್ತಿದ್ದ 30 ಲಕ್ಷ ರೂ. ಹಣ ವಶಕ್ಕೆ

ಕರ್ನಾಟಕ ಗಡಿಗೆ ಹೊಂದಿರುವ ತಮಿಳುನಾಡಿನ ಜೂಜುವಾಡಿ ಚೆಕ್​​ಪೋಸ್ಟ್​ನಲ್ಲಿ 30.5 ಲಕ್ಷ ರೂ. ಹಣವನ್ನ ಸೀಜ್​ ಮಾಡಲಾಗಿದೆ. ಖಾಸಗಿ ಬಸ್​​​ನಲ್ಲಿ 30.5 ಲಕ್ಷ ರೂ. ಹಣ, 500 ಗ್ರಾಮ್​ ಚಿನ್ನಾಭರಣವನ್ನ ರಾಜ್​​​ಕುಮಾರ್ ಎಂಬಾತ ಸಾಗಿಸುತ್ತಿದ್ದ. ಆದರೆ ಸೂಕ್ತ ದಾಖಲೆ ಇಲ್ಲದೆ ಇದಿದ್ರಿಂದ ಹಣವನ್ನ ವಶಕ್ಕೆ ಪಡೆಯಲಾಗಿತ್ತು.

98.56 ಕೋಟಿ ಮೌಲ್ಯದ ಬಿಯರ್, ಕಚ್ಚಾ ವಸ್ತು ವಶಕ್ಕೆ

ಇತ್ತೀಚೆಗೆ ಇತಿಹಾಸದಲ್ಲೇ ಮೊದಲ ಬಾರಿಗೆ 98.56 ಕೋಟಿ ರೂ. ಮೊತ್ತದ ಮದ್ಯ ವಶಪಡಿಸಿಕೊಳ್ಳಲಾಗಿತ್ತು. ಮೈಸೂರು ಜಿಲ್ಲೆಯ ನಂಜನಗೂಡಿನ‌ ಯುಬಿ ತಯಾರಿಕಾ ಘಟಕದ ಮೇಲೆ ಚಾಮರಾಜನಗರ ಅಬಕಾರಿ ಅಧಿಕಾರಿಗಳ ದಾಳಿ ನಡೆಸಿದ್ದರು. ಘಟಕದಲ್ಲಿ ನಿಗದಿಗಿಂತ ಹೆಚ್ಚುವರಿ ಬಿಯರ್ ತಯಾರಿಸಿ, ಕೇರಳಕ್ಕೆ ಸಾಗಾಟ ಮಾಡುತ್ತಿದ್ದರು. ದಾಳಿ ವೇಳೆ 17 ಆರೋಪಿಗಳ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು