AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತನ ಶವ ನೀಡಲು 9 ಲಕ್ಷ ನೀಡುವಂತೆ ಒತ್ತಾಯ; ಸರ್ಕಾರದ ಆದೇಶಕ್ಕೆ ಖಾಸಗಿ ಆಸ್ಪತ್ರೆ ಡೋಂಟ್‌ಕೇರ್

ಶವ ನೀಡದೇ ಸತಾಯಿಸುವ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಕೊವಿಡ್ ಮೃತರ ಶವ ನೀಡುವಾಗ ಬಾಕಿ ಬಿಲ್‌ ಕಟ್ಟಲು ಒತ್ತಡ ಹೇರಬಾರದು ಎಂದು ಸರ್ಕಾರ ಹೇಳಿದೆ.

ಕೊರೊನಾ ಸೋಂಕಿತನ ಶವ ನೀಡಲು 9 ಲಕ್ಷ ನೀಡುವಂತೆ ಒತ್ತಾಯ; ಸರ್ಕಾರದ ಆದೇಶಕ್ಕೆ ಖಾಸಗಿ ಆಸ್ಪತ್ರೆ ಡೋಂಟ್‌ಕೇರ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 02, 2021 | 8:57 PM

Share

ಆನೇಕಲ್: ಕೊವಿಡ್ ಶವ ನೀಡಲು ಇಲ್ಲಿನ ಖಾಸಗಿ ಆಸ್ಪತ್ರೆಯೊಂದು 9 ಲಕ್ಷ ರೂಪಾಯಿ ನೀಡುವಂತೆ ಒತ್ತಾಯ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯದ ಅತ್ತಿಬೆಲೆ ಬಳಿಯ ಶ್ರೀ ಸಾಯಿ ಆಸ್ಪತ್ರೆ ಆಡಳಿತ ಮಂಡಳಿಯಿಂದ 9 ಲಕ್ಷ ಪಾವತಿಸುವಂತೆ ಒತ್ತಾಯಿಸಲಾಗಿದೆ. ಆಸ್ಪತ್ರೆ ಚಿಕಿತ್ಸೆಗೆ 15 ಲಕ್ಷ ಬಿಲ್​ ಮಾಡಿತ್ತು. ಅದರಲ್ಲಿ ಈಗಾಗಲೇ 6 ಲಕ್ಷ ವಸೂಲಿ ಮಾಡಿಕೊಂಡಿದ್ದು, ಉಳಿದ 9 ಲಕ್ಷ ಪಾವತಿಸಿ ಶವ ಪಡೆಯುವಂತೆ ಈಗ ಒತ್ತಾಯ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕೊರೊನಾಕ್ಕೆ ತುತ್ತಾಗಿದ್ದ ಅರೇಹಳ್ಳಿ ಮೂಲದ ಗಣೇಶ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಶವ ನೀಡಲು ಆಸ್ಪತ್ರೆ ನಿರಾಕರಿಸಿದೆ. ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶವ ನೀಡದೇ ಸತಾಯಿಸುವ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಕೊವಿಡ್ ಮೃತರ ಶವ ನೀಡುವಾಗ ಬಾಕಿ ಬಿಲ್‌ ಕಟ್ಟಲು ಒತ್ತಡ ಹೇರಬಾರದು ಎಂದು ಸರ್ಕಾರ ಹೇಳಿದೆ. ಒಂದು ವೇಳೆ ಹೀಗಾದರೆ, ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆಯನ್ನೂ ನೀಡಿದೆ. ಅಷ್ಟಾಗಿಯೂ ಸರ್ಕಾರದ ಆದೇಶಕ್ಕೆ ಶ್ರೀ ಸಾಯಿ ಆಸ್ಪತ್ರೆ ಡೋಂಟ್‌ಕೇರ್ ಎಂದಿದೆ.

ನೆಲಮಂಗಲ: ಬಿಲ್ ಪಾವತಿಸದಿದ್ದರೆ ಶವ ನೀಡುವುದಿಲ್ಲ ಬಿಲ್​ ಪಾವತಿಸದಿದ್ದರೆ ಕೊವಿಡ್​ ಬಾಡಿ ನೀಡುವುದಿಲ್ಲ ಎಂದ ಮತ್ತೊಂದು ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಸ್ವಾಸ್ಥ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದ ಸೋಂಕಿತರ ಸಾವು ಸಂಭವಿಸಿದೆ. 62 ಹಾಗೂ 43 ವರ್ಷದ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಈಗ ಬಿಲ್ ಪಾವತಿಸದಿದ್ದರೆ ಬಾಡಿ ನೀಡುವುದಿಲ್ಲವೆಂದು ಪಟ್ಟು ಹಿಡಿದಿರುವ ಸ್ವಾಸ್ಥ್ಯ ಆಸ್ಪತ್ರೆ ವಿರುದ್ಧ ಮೃತರ ಸಂಬಂಧಿಕರ ಆಕ್ರೋಶ ಹೊರಹಾಕಿದ್ದಾರೆ.

ಬಿಲ್ ಪಾವತಿ ವಿಚಾರದಲ್ಲಿ ಆಸ್ಪತ್ರೆ, ಕುಟುಂಬಸ್ಥರ ಗಲಾಟೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನೆಲಮಂಗಲ ತಹಶೀಲ್ದಾರ್​ ಮಂಜುನಾಥ್​ ಭೇಟಿ ನೀಡಿದ್ದಾರೆ. ಸರ್ಕಾರದ ಅಧಿಸೂಚನೆ ಬಗ್ಗೆ ಆಸ್ಪತ್ರೆಯವರಿಗೆ ಮನವರಿಕೆ ಮಾಡಿದ್ದಾರೆ. ಕೊರೊನಾ ಸೋಂಕಿತ ಮೃತಪಟ್ರೆ ಬಿಲ್ ಪಾವತಿಸುವಂತಿಲ್ಲ ಎಂದು ತಿಳಿಸಿ, ಸಂಬಂಧಿಕರಿಗೆ ಶವ ನೀಡುವಂತೆ ತಹಶೀಲ್ದಾರ್ ಸೂಚಿಸಿದ್ದಾರೆ.

ಇದನ್ನೂ ಓದಿ: Karnataka Lockdown: ಆರ್ಥಿಕ ಚಟುವಟಿಕೆ ಚುರುಕಿಗೆ ರಾಜ್ಯ ಸರ್ಕಾರ ಪ್ಲ್ಯಾನ್; ಲಾಕ್​ಡೌನ್ ನಿಯಮಾವಳಿ ಕೊಂಚ ಸಡಿಲಿಕೆ

ಹಳ್ಳಿಗಳಲ್ಲಿ ಕೊರೊನಾ ನಿಯಂತ್ರಿಸಲು ಹೆಚ್ಚಿನ ಗಮನ; ಲಾಕ್​ಡೌನ್ ಮುಂದುವರಿಕೆ ಬಗ್ಗೆ ಜೂನ್ 5ರಂದು ನಿರ್ಧಾರ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್