Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತನ ಶವ ನೀಡಲು 9 ಲಕ್ಷ ನೀಡುವಂತೆ ಒತ್ತಾಯ; ಸರ್ಕಾರದ ಆದೇಶಕ್ಕೆ ಖಾಸಗಿ ಆಸ್ಪತ್ರೆ ಡೋಂಟ್‌ಕೇರ್

ಶವ ನೀಡದೇ ಸತಾಯಿಸುವ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಕೊವಿಡ್ ಮೃತರ ಶವ ನೀಡುವಾಗ ಬಾಕಿ ಬಿಲ್‌ ಕಟ್ಟಲು ಒತ್ತಡ ಹೇರಬಾರದು ಎಂದು ಸರ್ಕಾರ ಹೇಳಿದೆ.

ಕೊರೊನಾ ಸೋಂಕಿತನ ಶವ ನೀಡಲು 9 ಲಕ್ಷ ನೀಡುವಂತೆ ಒತ್ತಾಯ; ಸರ್ಕಾರದ ಆದೇಶಕ್ಕೆ ಖಾಸಗಿ ಆಸ್ಪತ್ರೆ ಡೋಂಟ್‌ಕೇರ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Jun 02, 2021 | 8:57 PM

ಆನೇಕಲ್: ಕೊವಿಡ್ ಶವ ನೀಡಲು ಇಲ್ಲಿನ ಖಾಸಗಿ ಆಸ್ಪತ್ರೆಯೊಂದು 9 ಲಕ್ಷ ರೂಪಾಯಿ ನೀಡುವಂತೆ ಒತ್ತಾಯ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯದ ಅತ್ತಿಬೆಲೆ ಬಳಿಯ ಶ್ರೀ ಸಾಯಿ ಆಸ್ಪತ್ರೆ ಆಡಳಿತ ಮಂಡಳಿಯಿಂದ 9 ಲಕ್ಷ ಪಾವತಿಸುವಂತೆ ಒತ್ತಾಯಿಸಲಾಗಿದೆ. ಆಸ್ಪತ್ರೆ ಚಿಕಿತ್ಸೆಗೆ 15 ಲಕ್ಷ ಬಿಲ್​ ಮಾಡಿತ್ತು. ಅದರಲ್ಲಿ ಈಗಾಗಲೇ 6 ಲಕ್ಷ ವಸೂಲಿ ಮಾಡಿಕೊಂಡಿದ್ದು, ಉಳಿದ 9 ಲಕ್ಷ ಪಾವತಿಸಿ ಶವ ಪಡೆಯುವಂತೆ ಈಗ ಒತ್ತಾಯ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕೊರೊನಾಕ್ಕೆ ತುತ್ತಾಗಿದ್ದ ಅರೇಹಳ್ಳಿ ಮೂಲದ ಗಣೇಶ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಶವ ನೀಡಲು ಆಸ್ಪತ್ರೆ ನಿರಾಕರಿಸಿದೆ. ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶವ ನೀಡದೇ ಸತಾಯಿಸುವ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಕೊವಿಡ್ ಮೃತರ ಶವ ನೀಡುವಾಗ ಬಾಕಿ ಬಿಲ್‌ ಕಟ್ಟಲು ಒತ್ತಡ ಹೇರಬಾರದು ಎಂದು ಸರ್ಕಾರ ಹೇಳಿದೆ. ಒಂದು ವೇಳೆ ಹೀಗಾದರೆ, ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆಯನ್ನೂ ನೀಡಿದೆ. ಅಷ್ಟಾಗಿಯೂ ಸರ್ಕಾರದ ಆದೇಶಕ್ಕೆ ಶ್ರೀ ಸಾಯಿ ಆಸ್ಪತ್ರೆ ಡೋಂಟ್‌ಕೇರ್ ಎಂದಿದೆ.

ನೆಲಮಂಗಲ: ಬಿಲ್ ಪಾವತಿಸದಿದ್ದರೆ ಶವ ನೀಡುವುದಿಲ್ಲ ಬಿಲ್​ ಪಾವತಿಸದಿದ್ದರೆ ಕೊವಿಡ್​ ಬಾಡಿ ನೀಡುವುದಿಲ್ಲ ಎಂದ ಮತ್ತೊಂದು ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಸ್ವಾಸ್ಥ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದ ಸೋಂಕಿತರ ಸಾವು ಸಂಭವಿಸಿದೆ. 62 ಹಾಗೂ 43 ವರ್ಷದ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಈಗ ಬಿಲ್ ಪಾವತಿಸದಿದ್ದರೆ ಬಾಡಿ ನೀಡುವುದಿಲ್ಲವೆಂದು ಪಟ್ಟು ಹಿಡಿದಿರುವ ಸ್ವಾಸ್ಥ್ಯ ಆಸ್ಪತ್ರೆ ವಿರುದ್ಧ ಮೃತರ ಸಂಬಂಧಿಕರ ಆಕ್ರೋಶ ಹೊರಹಾಕಿದ್ದಾರೆ.

ಬಿಲ್ ಪಾವತಿ ವಿಚಾರದಲ್ಲಿ ಆಸ್ಪತ್ರೆ, ಕುಟುಂಬಸ್ಥರ ಗಲಾಟೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನೆಲಮಂಗಲ ತಹಶೀಲ್ದಾರ್​ ಮಂಜುನಾಥ್​ ಭೇಟಿ ನೀಡಿದ್ದಾರೆ. ಸರ್ಕಾರದ ಅಧಿಸೂಚನೆ ಬಗ್ಗೆ ಆಸ್ಪತ್ರೆಯವರಿಗೆ ಮನವರಿಕೆ ಮಾಡಿದ್ದಾರೆ. ಕೊರೊನಾ ಸೋಂಕಿತ ಮೃತಪಟ್ರೆ ಬಿಲ್ ಪಾವತಿಸುವಂತಿಲ್ಲ ಎಂದು ತಿಳಿಸಿ, ಸಂಬಂಧಿಕರಿಗೆ ಶವ ನೀಡುವಂತೆ ತಹಶೀಲ್ದಾರ್ ಸೂಚಿಸಿದ್ದಾರೆ.

ಇದನ್ನೂ ಓದಿ: Karnataka Lockdown: ಆರ್ಥಿಕ ಚಟುವಟಿಕೆ ಚುರುಕಿಗೆ ರಾಜ್ಯ ಸರ್ಕಾರ ಪ್ಲ್ಯಾನ್; ಲಾಕ್​ಡೌನ್ ನಿಯಮಾವಳಿ ಕೊಂಚ ಸಡಿಲಿಕೆ

ಹಳ್ಳಿಗಳಲ್ಲಿ ಕೊರೊನಾ ನಿಯಂತ್ರಿಸಲು ಹೆಚ್ಚಿನ ಗಮನ; ಲಾಕ್​ಡೌನ್ ಮುಂದುವರಿಕೆ ಬಗ್ಗೆ ಜೂನ್ 5ರಂದು ನಿರ್ಧಾರ

2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್