AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​ನ ಮೊದಲ ಕೊರೊನಾ ಪಾಸಿಟಿವ್ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸಾವು

ಆನೇಕಲ್: ಬೆಂಗಳೂರಿನಲ್ಲಿ 1,236ನೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ. ತಮಿಳುನಾಡಿನ ವೇಲೂರಿನಿಂದ ಬಂದಿದ್ದ ಸೋಂಕಿತ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈತ ಆನೇಕಲ್​ನಲ್ಲಿ ಮೊದಲ ಪಾಸಿಟೀವ್ ವ್ಯಕ್ತಿ. ಫಿಸಿಯೋಥೆರಪಿಸ್ಟ್ ಆಗಿದ್ದ ಮೃತ ಸೋಂಕಿತ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಮೇ 17ರಂದು ಆಸ್ಪತ್ರೆಗೆ ದಾಖಲಾಗಿದ್ದ. ಮೇ 18 ರಂದು ಈತನಿಗೆ ಕೊರೊನಾ ತಗುಲಿರುವುದು ದೃಢಪಟ್ಟಿತ್ತು. ಇಂದು P-1,236 ಮೃತಪಟ್ಟಿದ್ದಾರೆ. ಮೃತ ಸೋಂಕಿತ 6 ವರ್ಷದಿಂದ […]

ಆನೇಕಲ್​ನ ಮೊದಲ ಕೊರೊನಾ ಪಾಸಿಟಿವ್ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸಾವು
ಸಾಧು ಶ್ರೀನಾಥ್​
|

Updated on: May 20, 2020 | 3:06 PM

Share

ಆನೇಕಲ್: ಬೆಂಗಳೂರಿನಲ್ಲಿ 1,236ನೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ. ತಮಿಳುನಾಡಿನ ವೇಲೂರಿನಿಂದ ಬಂದಿದ್ದ ಸೋಂಕಿತ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈತ ಆನೇಕಲ್​ನಲ್ಲಿ ಮೊದಲ ಪಾಸಿಟೀವ್ ವ್ಯಕ್ತಿ.

ಫಿಸಿಯೋಥೆರಪಿಸ್ಟ್ ಆಗಿದ್ದ ಮೃತ ಸೋಂಕಿತ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಮೇ 17ರಂದು ಆಸ್ಪತ್ರೆಗೆ ದಾಖಲಾಗಿದ್ದ. ಮೇ 18 ರಂದು ಈತನಿಗೆ ಕೊರೊನಾ ತಗುಲಿರುವುದು ದೃಢಪಟ್ಟಿತ್ತು. ಇಂದು P-1,236 ಮೃತಪಟ್ಟಿದ್ದಾರೆ.

ಮೃತ ಸೋಂಕಿತ 6 ವರ್ಷದಿಂದ ಬೆಂಗಳೂರಿ​ನಲ್ಲಿ ಪತ್ನಿ ಹಾಗೂ ಮಗು ಜೊತೆ ವಾಸವಾಗಿದ್ದರು. ಮಾರ್ಚ್ 22ರಂದು ತಮಿಳುನಾಡಿನ ವೇಲೂರಿಗೆ ಈ ಕುಟುಂಬ ಹೋಗಿದೆ. ಲಾಕ್​ಡೌನ್ ಘೋಷಣೆಯಾದ ನಂತರ ಮೇ 6ರಂದು ಹೆಬ್ಬಗೋಡಿಯ ಅನಂತನಗರಕ್ಕೆ ಬಂದಿದ್ರು.

ಚಂದಾಪುರದ ಜಿಪಿಆರ್ ಬಡಾವಣೆ ಸೇರಿದಂತೆ ಹಲವು ಕಡೆ ಈತ ಸುತ್ತಾಡಿದ್ದ. ಅಪಾರ್ಟ್​ಮೆಂಟ್​ನಲ್ಲಿದ್ದಾಗ ತನ್ನ ಸ್ನೇಹಿತ, ಮನೆಯಲ್ಲಿ ಕೆಲಸ ಮಾಡುವಾಕೆ ಹಾಗೂ ಸೆಕ್ಯೂರಿಟಿ ಜೊತೆ ಸಂಪರ್ಕ ಹೊಂದಿದ್ದ. ಈತನಿಗೆ ಸೋಂಕು ದೃಢವಾಗುತ್ತಿದ್ದಂತೆ ಅಪಾರ್ಟ್​ಮೆಂಟ್​, ಏರಿಯಾ ಸೀಲ್​ಡೌನ್ ಮಾಡಲಾಗಿತ್ತು. ಆತನ ಪತ್ನಿ ಸೇರಿದಂತೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇಂದು ನಾರಾಯಣ ಹೆಲ್ತ್ ಕೇರ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ.

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ