AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​ನ ಮೊದಲ ಕೊರೊನಾ ಪಾಸಿಟಿವ್ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸಾವು

ಆನೇಕಲ್: ಬೆಂಗಳೂರಿನಲ್ಲಿ 1,236ನೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ. ತಮಿಳುನಾಡಿನ ವೇಲೂರಿನಿಂದ ಬಂದಿದ್ದ ಸೋಂಕಿತ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈತ ಆನೇಕಲ್​ನಲ್ಲಿ ಮೊದಲ ಪಾಸಿಟೀವ್ ವ್ಯಕ್ತಿ. ಫಿಸಿಯೋಥೆರಪಿಸ್ಟ್ ಆಗಿದ್ದ ಮೃತ ಸೋಂಕಿತ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಮೇ 17ರಂದು ಆಸ್ಪತ್ರೆಗೆ ದಾಖಲಾಗಿದ್ದ. ಮೇ 18 ರಂದು ಈತನಿಗೆ ಕೊರೊನಾ ತಗುಲಿರುವುದು ದೃಢಪಟ್ಟಿತ್ತು. ಇಂದು P-1,236 ಮೃತಪಟ್ಟಿದ್ದಾರೆ. ಮೃತ ಸೋಂಕಿತ 6 ವರ್ಷದಿಂದ […]

ಆನೇಕಲ್​ನ ಮೊದಲ ಕೊರೊನಾ ಪಾಸಿಟಿವ್ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸಾವು
ಸಾಧು ಶ್ರೀನಾಥ್​
|

Updated on: May 20, 2020 | 3:06 PM

Share

ಆನೇಕಲ್: ಬೆಂಗಳೂರಿನಲ್ಲಿ 1,236ನೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ. ತಮಿಳುನಾಡಿನ ವೇಲೂರಿನಿಂದ ಬಂದಿದ್ದ ಸೋಂಕಿತ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈತ ಆನೇಕಲ್​ನಲ್ಲಿ ಮೊದಲ ಪಾಸಿಟೀವ್ ವ್ಯಕ್ತಿ.

ಫಿಸಿಯೋಥೆರಪಿಸ್ಟ್ ಆಗಿದ್ದ ಮೃತ ಸೋಂಕಿತ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಮೇ 17ರಂದು ಆಸ್ಪತ್ರೆಗೆ ದಾಖಲಾಗಿದ್ದ. ಮೇ 18 ರಂದು ಈತನಿಗೆ ಕೊರೊನಾ ತಗುಲಿರುವುದು ದೃಢಪಟ್ಟಿತ್ತು. ಇಂದು P-1,236 ಮೃತಪಟ್ಟಿದ್ದಾರೆ.

ಮೃತ ಸೋಂಕಿತ 6 ವರ್ಷದಿಂದ ಬೆಂಗಳೂರಿ​ನಲ್ಲಿ ಪತ್ನಿ ಹಾಗೂ ಮಗು ಜೊತೆ ವಾಸವಾಗಿದ್ದರು. ಮಾರ್ಚ್ 22ರಂದು ತಮಿಳುನಾಡಿನ ವೇಲೂರಿಗೆ ಈ ಕುಟುಂಬ ಹೋಗಿದೆ. ಲಾಕ್​ಡೌನ್ ಘೋಷಣೆಯಾದ ನಂತರ ಮೇ 6ರಂದು ಹೆಬ್ಬಗೋಡಿಯ ಅನಂತನಗರಕ್ಕೆ ಬಂದಿದ್ರು.

ಚಂದಾಪುರದ ಜಿಪಿಆರ್ ಬಡಾವಣೆ ಸೇರಿದಂತೆ ಹಲವು ಕಡೆ ಈತ ಸುತ್ತಾಡಿದ್ದ. ಅಪಾರ್ಟ್​ಮೆಂಟ್​ನಲ್ಲಿದ್ದಾಗ ತನ್ನ ಸ್ನೇಹಿತ, ಮನೆಯಲ್ಲಿ ಕೆಲಸ ಮಾಡುವಾಕೆ ಹಾಗೂ ಸೆಕ್ಯೂರಿಟಿ ಜೊತೆ ಸಂಪರ್ಕ ಹೊಂದಿದ್ದ. ಈತನಿಗೆ ಸೋಂಕು ದೃಢವಾಗುತ್ತಿದ್ದಂತೆ ಅಪಾರ್ಟ್​ಮೆಂಟ್​, ಏರಿಯಾ ಸೀಲ್​ಡೌನ್ ಮಾಡಲಾಗಿತ್ತು. ಆತನ ಪತ್ನಿ ಸೇರಿದಂತೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇಂದು ನಾರಾಯಣ ಹೆಲ್ತ್ ಕೇರ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ.

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ