AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಯ್ದಿರಿಸಿದ್ದ ಜಾಗದ ಮೇಲೆ BWSSB ಕಣ್ಣು: ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ ನೀಡಿದ ವಿಶೇಷ ಚೇತನರು

ಕರ್ನಾಟಕ ಹೆಲನ್ ಕೆಲರ್ ಅಂಗವಿಕಲರ ಸಂಘ ಸದಸ್ಯರಿಗೆ ಸೈಟ್​ಗಳು ಮಂಜೂರಾಗಿದ್ದವು. ಗೊಟ್ಟಿಗೆರೆಯ ಸರ್ವೇ ನಂ-131 ರಲ್ಲಿ ನಿವೇಶನಗಳು ಮಂಜೂರಾಗಿದ್ದವು. ಸೈಟ್​​ಗಳು ವಿಶೇಷ ಚೇತನರ ಹೆಸರಿಗೆ ಗೊಟ್ಟಿಗೆರೆ ಗ್ರಾಮ ಪಂಚಾಯತಿಯಲ್ಲಿ ಖಾತಾ ಆಗಿ ಕಂದಾಯ ಕೂಡ ಪಾವತಿ ಮಾಡಲಾಗಿದೆ. ಆದರೆ ಗ್ರಾಮ ಪಂಚಾಯತಿ ಬಿಬಿಎಂಪಿ ವ್ಯಾಪ್ತಿಗೆ ಸೇರಿದ ಬಳಿಕ ಕಿರಿಕಿರಿ ಶುರು ಮಾಡಲಾಗಿದೆ.

ಕಾಯ್ದಿರಿಸಿದ್ದ ಜಾಗದ ಮೇಲೆ BWSSB ಕಣ್ಣು: ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ ನೀಡಿದ ವಿಶೇಷ ಚೇತನರು
ಕಾಯ್ದಿರಿಸಿದ್ದ ಜಾಗದ ಮೇಲೆ BWSSB ಕಣ್ಣು: ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ ನೀಡಿದ ವಿಶೇಷ ಚೇತನರು
ರಾಮು, ಆನೇಕಲ್​
| Edited By: |

Updated on: May 27, 2024 | 4:43 PM

Share

ಆನೇಕಲ್​, ಮೇ 27: ಬೆಂಗಳೂರು ದಕ್ಷಿಣ ತಾಲ್ಲೂಕಿನ ಗೊಟ್ಟಿಗೆರೆಯಲ್ಲಿ 2003 ರಲ್ಲಿ 31 ಮಂದಿ ವಿಶೇಷ ಚೇತನರಿಗೆ 20-40 ವಿಸ್ತೀರ್ಣದ ಸೈಟ್​ಗಳು ಮಂಜೂರು ಮಾಡಲಾಗಿದೆ. ಆದರೆ ವಿಶೇಷ ಚೇತನರಿಗೆ (special handicap) ಕಾಯ್ದಿರಿಸಿದ್ದ ಜಾಗದ ಮೇಲೆ ಇದೀಗ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಣ್ಣು ಬಿದ್ದಿದೆ. ಡ್ರೈನೇಜ್ ಪೈಪ್ ಲೈನ್ ಮಾಡಲು ಮುಂದಾದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವಿರುದ್ಧ ಆಕ್ರೋಶಗೊಂಡಿದ್ದು, ಕಾಮಗಾರಿ ನಿಲ್ಲಿಸದಿದ್ದರೆ ಸರ್ಕಾರಕ್ಕೆ ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಹೆಲನ್ ಕೆಲರ್ ಅಂಗವಿಕಲರ ಸಂಘ ಸದಸ್ಯರಿಗೆ ಸೈಟ್​ಗಳು ಮಂಜೂರಾಗಿದ್ದವು. ಗೊಟ್ಟಿಗೆರೆಯ ಸರ್ವೇ ನಂ-131 ರಲ್ಲಿ ನಿವೇಶನಗಳು ಮಂಜೂರಾಗಿದ್ದವು. ಸೈಟ್​​ಗಳು ವಿಶೇಷ ಚೇತನರ ಹೆಸರಿಗೆ ಗೊಟ್ಟಿಗೆರೆ ಗ್ರಾಮ ಪಂಚಾಯತಿಯಲ್ಲಿ ಖಾತಾ ಆಗಿ ಕಂದಾಯ ಕೂಡ ಪಾವತಿ ಮಾಡಲಾಗಿದೆ. ಆದರೆ ಗ್ರಾಮ ಪಂಚಾಯತಿ ಬಿಬಿಎಂಪಿ ವ್ಯಾಪ್ತಿಗೆ ಸೇರಿದ ಬಳಿಕ ಕಿರಿಕಿರಿ ಶುರು ಮಾಡಲಾಗಿದೆ.

ಇದನ್ನೂ ಓದಿ: ಟಿವಿ9 ವರದಿ ಬಳಿಕ ಎಚ್ಚೆತ್ತ ಬಿಬಿಎಂಪಿ: ರಸ್ತೆಗುಂಡಿ ಮುಚ್ಚಲು ಡೆಡ್‌ಲೈನ್‌, ಟಾಸ್ಕ್​ ಪೋರ್ಸ್ ರಚನೆ

ವಿಶೇಷ ಚೇತನರಿಗೆ ಖಾತಾ ಮಾಡದೇ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕಳ್ಳಾಟ ನಡೆಸಿದ್ದಾರೆ. ಕಳೆದ 21 ವರ್ಷದ ಹಿಂದೆ ಮಂಜೂರಾದ ಜಾಗವನ್ನ ಹದ್ದುಬಸ್ತು ಕೂಡ ಮಾಡಿಕೊಟ್ಟಿಲ್ಲ. ರಸ್ತೆ, ನೀರು, ಚರಂಡಿ, ಮೂಲಭೂತ ಸೌಕರ್ಯಗಳನ್ನು ಬಿಬಿಎಂಪಿ ನೀಡಿಲ್ಲ.

ಇದನ್ನೂ ಓದಿ: ಸೆಕ್ಯೂರಿಟಿ ಕಂಪನಿಗೆ ಶಿಕ್ಷಕರ ನೇಮಕಾತಿ ಟೆಂಡರ್! ಸುರೇಶ್​ ಕುಮಾರ್​ ಆಕ್ರೋಶ

ಇದೀಗ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಖ್ಯಾತೆ ತೆಗೆದಿದ್ದು, ಈ ಜಾಗ ಸರ್ಕಾರಿ ಗೋಮಾಳ ಎಂದು ಡ್ರೈನೇಜ್ ಪೈಪ್ ಲೈನ್ ಮಾಡಲು ಮುಂದಾಗಿದೆ. ಖಾಸಗಿ ಅಪಾರ್ಟ್ಮೆಂಟ್, ಲೇಔಟ್​ಗಳ ಡ್ರೈನೇಜ್ ಪೈಪ್ ಲೈನ್ ಮಾಡಲು ಹಿಟಾಚಿ ಮೂಲಕ ಕಾಮಗಾರಿ ಮಾಡಲು ನಡೆಸಿದ್ದಾರೆ. ಹೀಗಾಗಿ ವಿಶೇಷ ಚೇತನರಿಂದ ಆಹೋ ರಾತ್ರಿ ಧರಣಿ ಮಾಡಿದ್ದು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಮಗಾರಿ ಕೈಬಿಡಬೇಕೆಂದು ವಿಶೇಷ ಚೇತನರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ