AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್ ವಲಯ ಪೊಲೀಸರ ಭರ್ಜರಿ ಕಾರ್ಯಾಚರಣೆ; 56 ಆರೋಪಿಗಳ ಬಂಧನ

ಇನ್ನು ಸೂರ್ಯನಗರ ಪೊಲೀಸ್ ಠಾಣೆಗೆ ಸಂಬಧಿಸಿದಂತೆ 1 ಕೆ.ಜಿ.30 ಗ್ರಾಂ ಚಿನ್ನ ಸೇರಿದಂತೆ 59 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅತ್ತಿಬೆಲೆ ಪೊಲೀಸ್ ಠಾಣೆ 25 ಮೊಬೈಲ್ ,9 ದ್ವಿಚಕ್ರ ವಾಹನ,1 ಸುಲಿಗೆ ಪ್ರಕರಣದಲ್ಲಿ ಒಟ್ಟು 5 ಲಕ್ಷ 25 ಸಾವಿರ ರೂಗಳ ಮಾಲನ್ನು ವಶಕ್ಕೆ ಪಡೆಯಲಾಗಿದೆ.

ಆನೇಕಲ್ ವಲಯ ಪೊಲೀಸರ ಭರ್ಜರಿ ಕಾರ್ಯಾಚರಣೆ; 56 ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 14, 2021 | 12:44 PM

Share

ಆನೇಕಲ್: (ಜುಲೈ 14) ಆನೇಕಲ್ ವಲಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 56 ಆರೋಪಿಗಳನ್ನ ಬಂಧಿಸಿದ್ದಾರೆ. 37 ಪ್ರಕರಣಗಳನ್ನು ಭೇದಿಸಿದ ಪೊಲೀಸರು, 1 ಕೋಟಿ 74 ಲಕ್ಷ ರೂಪಾಯಿ ಮೌಲ್ಯದ ಕಳವು ಮಾಲನ್ನ ಜಪ್ತಿಮಾಡಿದ್ದಾರೆ. ಜಪ್ತಿ ಮಾಡಿದ್ದ ಬೈಕ್, ಮೊಬೈಲ್, ಚಿನ್ನಾಭರಣವನ್ನು ವಾರಸುದಾರರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ.

ಆನೇಕಲ್ ಉಪವಿಭಾಗದ 7 ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಒಟ್ಟು 37 ಪ್ರಕರಣಗಳನ್ನು ಭೇದಿಸಿ 56 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಕಳ್ಳತನ ಮಾಡಿದ ಒಟ್ಟು 100 ಬೈಕ್​ಗಳನ್ನ ಪತ್ತೆ ಹಚ್ಚಲಾಗಿದೆ. ಹೆಬ್ಬಗೋಡಿ ಠಾಣೆ ವ್ಯಾಪ್ತಿಯಲ್ಲಿ ನಡೆದ, 3 ಸುಲಿಗೆ, ಮೂರು ಮನೆ ಕಳ್ಳತನ, 25 ದ್ವಿಚಕ್ರ ವಾಹನ ಸೇರಿ ಒಟ್ಟು 51 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಜಿಗಣಿ ಠಾಣೆ 100 ಮೊಬೈಲ್, 15 ದ್ವಿಚಕ್ರ ವಾಹನ, 2 ಸುಲಿಗೆ, 2 ಡಕಾಯಿತಿ, 2 ಮನೆ ಕಳ್ಳತನ ಪ್ರಕರಣದಲ್ಲಿ ಒಟ್ಟು 47 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ಸೂರ್ಯನಗರ ಪೊಲೀಸ್ ಠಾಣೆಗೆ ಸಂಬಧಿಸಿದಂತೆ 1 ಕೆ.ಜಿ.30 ಗ್ರಾಂ ಚಿನ್ನ ಸೇರಿದಂತೆ 59 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅತ್ತಿಬೆಲೆ ಪೊಲೀಸ್ ಠಾಣೆ 25 ಮೊಬೈಲ್ ,9 ದ್ವಿಚಕ್ರ ವಾಹನ,1 ಸುಲಿಗೆ ಪ್ರಕರಣದಲ್ಲಿ ಒಟ್ಟು 5 ಲಕ್ಷ 25 ಸಾವಿರ ರೂಗಳ ಮಾಲನ್ನು ವಶಕ್ಕೆ ಪಡೆಯಲಾಗಿದೆ.

ಬನ್ನೇರುಘಟ್ಟ ಪೊಲೀಸ್ ಠಾಣೆ 2 ದ್ವಿಚಕ್ರ ವಾಹನ, 1 ಮನೆ ಕಳ್ಳತನ ಪ್ರಕರಣದಲ್ಲಿ ಒಟ್ಟು ಆರು ಲಕ್ಷ ರೂ.ಗಳ ಮಾಲನ್ನು ವಶಕ್ಕೆ ಪಡೆದಿದ್ದು, ಸರ್ಜಾಪುರ ಪೊಲೀಸ್ ಠಾಣೆ 11 ಲಕ್ಷ ವಶಪಡಿಸಿಕೊಳ್ಳಲಾಗಿದೆ.

ಪೊಲೀಸರ ಕಾರ್ಯಾಚರಣೆಯಿಂದ ವಶಕ್ಕೆ ಪಡೆದ ವಸ್ತುಗಳನ್ನು ಕೇಂದ್ರ ವಲಯದ ಐ.ಜಿ.ಚಂದ್ರಶೇಖರ್, ಎಸ್​ಪಿ ವಂಶಿ ಕೃಷ್ಣ ಸಮ್ಮುಖದಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಗಿದ್ದು, ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದ ಪೊಲೀಸರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ

ಕೊವಿಡ್ ವೇಳೆ ಕ್ರೈಂ ರೇಟ್ ಕಡಿಮೆಯಾಗಿತ್ತು, ಲಾಕ್​ಡೌನ್​ ತೆರವು ಬಳಿಕ ಜಾಸ್ತಿಯಾಗ್ತಿದೆ: ಗೃಹ ಸಚಿವ ಬಸರಾಜ ಬೊಮ್ಮಾಯಿ

ಕಾರಿನ ಬಾನೆಟ್​ ಮೇಲೆ ಕುಳಿತು ಕಲ್ಯಾಣ ಮಂಟಪಕ್ಕೆ ಬಂದ ವಧು; ವಿಡಿಯೋ ನೋಡಿ ಕೇಸ್ ಜಡಿದ ಪೊಲೀಸರು

(Anekal Police arrests 56 culprits in a massive attack today)

Published On - 12:44 pm, Wed, 14 July 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್