AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟ ಮಾತು ತಪ್ಪಿದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮತ್ತೆ ಪ್ರತಿಭಟನೆಗೆ ಇಳಿದ ಅಂಗನವಾಡಿ ಕಾರ್ಯಕರ್ತೆಯರು.. ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ

ಬಜೆಟ್‌ನಲ್ಲಿ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಲಿದೆ.

ಕೊಟ್ಟ ಮಾತು ತಪ್ಪಿದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮತ್ತೆ ಪ್ರತಿಭಟನೆಗೆ ಇಳಿದ ಅಂಗನವಾಡಿ ಕಾರ್ಯಕರ್ತೆಯರು.. ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Mar 15, 2021 | 8:46 AM

Share

ಬೆಂಗಳೂರು: ರಾಜ್ಯಾದ್ಯಂತ ಇಂದು ಅಂಗನವಾಡಿಗಳು ಬಂದ್ ಆಗಲಿವೆ. ಬಜೆಟ್‌ನಲ್ಲಿ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆಯವರೆಗೆ ಪ್ರತಿಭಟನೆ ನಡೆಯಲಿದ್ದು ಧರಣಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಜಮಾಯಿಸಲಿದ್ದಾರೆ.

ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಫೆಬ್ರವರಿ 2 ರಂದು ಫ್ರೀಡಂ ಪಾರ್ಕ್​ನಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಬೃಹತ್ ಪ್ರತಿಭಟನೆ ಮಾಡಿದ್ದರು. ಆದ್ರೆ ಇವರಿಗೆ ಮತ್ತೊಮ್ಮೆ ಸರ್ಕಾರ ಮೋಸ ಮಾಡಿದೆ. ಈ ಬಾರಿಯ ಬಜೆಟ್‌ನಲ್ಲಿ ನಿಮ್ಮ ಬೇಡಿಕೆಗಳನ್ನು ಈಡೆರಿಸುವುದಾಗಿ ಸಚಿವರು ಮತ್ತು ಅಧಿಕಾರಿಗಳು ಭರವಸೆ ನೀಡಿದ್ದರು. ಆದ್ರೆ ಅದು ಯಾವುದೂ ಇಡೇರಿಲ್ಲ. ಈ ಬಾರಿಯ ಬಜೆಟ್​ನಲ್ಲಿ ಕೊಟ್ಟ ಯಾವುದೇ ಭರವಸೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಇಂದು ಮಹಿಳಾ ವಿರೋಧಿ ಬಜೆಟ್ ಅಂತ ಪ್ರತಿಭಟನೆ ಮಾಡಲು ಅಂಗನವಾಡಿ ಕಾರ್ಯಕರ್ತೆಯರು ಮುಂದಾಗಿದ್ದಾರೆ.

ಬೇಡಿಕೆಗಳೇನು? ಸೇವಾ ಹಿರಿತನದ ಆಧಾರದಲ್ಲಿ ಗೌರವಧನ ಹೆಚ್ಚಳ ಮಾಡಬೇಕು. ಹಾಗೇ ಉಚಿತ ವೈದ್ಯಕೀಯ ಸೌಲಭ್ಯ ಅಥವಾ ಇಎಸ್‌ಐ ಸೌಲಭ್ಯ ನೀಡಬೇಕು. LKG, UKGಯನ್ನು ಅಂಗನವಾಡಿಯಲ್ಲೇ ಆರಂಭಿಸಬೇಕು. ಮಿನಿ ಅಂಗನವಾಡಿಗಳನ್ನ ಉನ್ನತೀಕರಿಸುವ ಜೊತೆಗೆ ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನ ನೇಮಕಾತಿ ಮಾಡಬೇಕು. ಪಿಂಚಣಿ ಸೌಲಭ್ಯ, ಕೊವಿಡ್ 19 ರ ಪರಿಹಾರವನ್ನ ನೀಡಬೇಕು. ಖಾಯಂ ನೌಕರಿ ನೀಡಬೇಕು. ಮಾಸಿಕ 24 ಸಾವಿರ ರೂ. ಸಮಾನ ಕನಿಷ್ಠ ವೇತನ ನೀಡಬೇಕು ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹ.

ಇದನ್ನೂ ಓದಿ: ಬೆಂಗಳೂರಿಗಿಂದು ಪ್ರತಿಭಟನೆ ಶಾಕ್.. ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್