AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಕಸಾಯಿಖಾನೆ ಬಂದ್ ಮಾಡಲು ಅಗತ್ಯ ಕ್ರಮ, ಗಾಂಧಿ ಜಯಂತಿಗೆ ಜಿಲ್ಲೆಗೊಂದು ಗೋಶಾಲೆ: ಸಚಿವ ಪ್ರಭು ಚವ್ಹಾಣ್

ಬಕ್ರೀದ್ ಸಮಯದಲ್ಲಿ ಸುಮಾರು 6000ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದ್ದು ಈ ಕಾರ್ಯಕ್ಕೆ ಸಹಕರಿಸಿದ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರು, ಗೃಹ ಇಲಾಖೆಯ ಸಿಬ್ಬಂದಿ ಹಾಗೂ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಅಭಿನಂದನೆ ತಿಳಿಸಿದ್ದಾರೆ.

ಅಕ್ರಮ ಕಸಾಯಿಖಾನೆ ಬಂದ್ ಮಾಡಲು ಅಗತ್ಯ ಕ್ರಮ, ಗಾಂಧಿ ಜಯಂತಿಗೆ ಜಿಲ್ಲೆಗೊಂದು ಗೋಶಾಲೆ: ಸಚಿವ ಪ್ರಭು ಚವ್ಹಾಣ್
ಪ್ರಭು ಚೌಹಾಣ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 12, 2021 | 7:43 PM

Share

ಬೆಂಗಳೂರು: ಕರ್ನಾಟಕದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ ಹಾಗೂ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡಲು ಕ್ರಮಕೈಗೊಳ್ಳುತ್ತೇನೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಕ್ಟೋಬರ್ 2 ಗಾಂಧಿ ಜಯಂತಿಯ ಸಮಯದಲ್ಲಿ ಜಿಲ್ಲೆಗೊಂದು ಗೋಶಾಲೆ ತೆರೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಬೇಕಾಗಿರುವುದರಿಂದ ಕೆಲಸವನ್ನು ಆದಷ್ಟು ವೇಗವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಲಹೆ ನೀಡಿದರು.

ವಿಕಾಸಸೌಧದಲ್ಲಿ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹಲವಾರು ಗೋಪ್ರಿಯರು ಅಕ್ರಮ ಕಸಾಯಿಖಾನೆಗಳು ನಡೆಯುತ್ತಿರುವ ಕುರಿತು ಕರೆ ಮಾಡುತ್ತಿದ್ದಾರೆ. ಗೃಹ ಇಲಾಖೆಯ ಸಹಯೋಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಾಜ್ಯಾದ್ಯಂತ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಬಕ್ರೀದ್ ಸಮಯದಲ್ಲಿ ಸುಮಾರು 6000ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದ್ದು ಈ ಕಾರ್ಯಕ್ಕೆ ಸಹಕರಿಸಿದ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರು, ಗೃಹ ಇಲಾಖೆಯ ಸಿಬ್ಬಂದಿ ಹಾಗೂ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಅಭಿನಂದನೆ ತಿಳಿಸಿದ್ದಾರೆ.

ಪಶುಲೋಕ ಸ್ಥಾಪನೆಗೆ ಕ್ರಮ  ದೇಶದಲ್ಲಿಯೇ ಅತ್ಯಂತ ವಿಶಿಷ್ಟವಾದ ಪಶುಲೋಕ ಸ್ಥಾಪನೆ ಕರ್ನಾಟಕದಲ್ಲಿ ನಿರ್ಮಾಣ ಮಾಡಲು ಕಳೆದ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದ್ದು ಈ ಕುರಿತಾಗಿ ಐದು ತಿಂಗಳು ಕಳೆದರೂ ಯಾವುದೇ ಪ್ರಗತಿಯಾಗಿಲ್ಲ. ಈ ಕುರಿತು ಸಚಿವ ಪ್ರಭು ಚವ್ಹಾಣ್ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇಲಾಖೆ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾದರೆ ಸಹಿಸುವುದಿಲ್ಲ ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪಶು ಸಂಜೀವಿನಿ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು ಇನ್ನು 15 ಜಿಲ್ಲೆಗಳಿಗೆ ಪಶುಶಸ್ತ್ರ ಚಿಕಿತ್ಸಾವಾಹನ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಅತೀ ಶೀಘ್ರದಲ್ಲೇ ಉಳಿದ ಜಿಲ್ಲೆಗಳಿಗೆ ಮತ್ತು ಬೆಂಗಳೂರು ಸೇರಿ 25 ಪಶುಸಂಜೀವಿನಿ ನೀಡಲು ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಸೂಚಿಸಿದ್ದಾರೆ.

ಎನ್.ಜಿ.ಓ ಗಳು ಪಶುವೈದ್ಯರ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಲಾಖೆಯ ವೈದ್ಯರು ಹಾಗೂ ಅಧಿಕಾರಿಗಳು ಧೈರ್ಯದಿಂದ ಕೆಲಸಮಾಡಬೇಕು ಯಾವುದಕ್ಕೂ ಹೆದರುವ ಅಗತ್ಯವಿಲ್ಲ. ಅನಾವಶ್ಯಕವಾಗಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಸಚಿವರು ಕಿಡಿ ಕಾರಿದ್ದಾರೆ. ಪಶುಸಂಗೋಪನೆ ಇಲಾಖೆಯಲ್ಲಿ ಇನ್ನೂ ಹಲವು ವಿನೂತನ ಯೋಜನೆಗಳನ್ನು ಪರಿಚಯಿಸುವ ಮಹತ್ವಾಕಾಂಕ್ಷೆ ಇದ್ದು ಸದ್ಯದಲ್ಲಿಯೇ ಇಲಾಖಾ ಹಂತದಲ್ಲಿ ಚರ್ಚೆ ನಡೆಸಿ ರೈತರ ಪರ ಯೋಜನೆಗಳನ್ನು ರೂಪಿಸುವುದಾಗಿ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: 

ಗದ್ದೆಯಲ್ಲಿ ಟ್ರ್ಯಾಕ್ಟರ್​ ಓಡಿಸುತ್ತಾ ಕೃಷಿಯಲ್ಲಿ ಬ್ಯುಸಿಯಾದ ನಟಿ ಅದಿತಿ ಪ್ರಭುದೇವ; ತೋಟ ಮಾಡುವ ಕನಸು ಕಂಡ ನಟಿ

ಪ್ರಜಾಪ್ರಭುತ್ವ ಜನರಿಂದ ನಡೆಯುತ್ತದೆಯೇ ಹೊರತು ಮಠಾಧೀಶರಿಂದಲ್ಲ ಎಂದ ಮಾಜಿ ಸಚಿವ ಬಿ ಸಿ ಪಾಟೀಲ್

(Animal Husbandry minister Prabhu Chauhan says will take Measures to curb illegal slaughterhouse in Karnataka)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?