AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಮೇಟೆಡ್ ವಿಡಿಯೋ ಟ್ವೀಟ್ ಪ್ರಕರಣ: ಬೆಂಗಳೂರು ಪೊಲೀಸರ ನೋಟಿಸ್​ ಸ್ವೀಕರಿಸದ ಅಮಿತ್ ಮಾಳವೀಯ

ಟ್ವಿಟರ್​​ನಲ್ಲಿ ಸಮುದಾಯಗಳಿಗೆ ಸಂಬಂಧಿಸಿ ಪೋಸ್ಟ್ ಮಾಡಿದ್ದ ಆರೋಪವನ್ನು ಮಾಳವೀಯ ಎದುರಿಸುತ್ತಿದ್ದಾರೆ. ಟ್ವಿಟರ್​​ನಲ್ಲಿ ಕರ್ನಾಟಕ ಬಿಜೆಪಿ ಘಟಕ ವಿಡಿಯೋ ಪೋಸ್ಟ್ ಮಾಡಿತ್ತು. ಅದರಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಮುಸ್ಲಿಮರು ಎಂಬಂತೆ ಬಿಂಬಿಸಲಾಗಿತ್ತು.

ಅನಿಮೇಟೆಡ್ ವಿಡಿಯೋ ಟ್ವೀಟ್ ಪ್ರಕರಣ: ಬೆಂಗಳೂರು ಪೊಲೀಸರ ನೋಟಿಸ್​ ಸ್ವೀಕರಿಸದ ಅಮಿತ್ ಮಾಳವೀಯ
ಅಮಿತ್ ಮಾಳವೀಯ
Jagadisha B
| Edited By: |

Updated on:May 11, 2024 | 11:53 AM

Share

ಬೆಂಗಳೂರು, ಮೇ 11: ಮುಸ್ಲಿಂ ಮೀಸಲಾತಿ (Muslim Reservation) ಕುರಿತಾದ ಅನಿಮೇಟೆಡ್ ವಿಡಿಯೋ ಟ್ವೀಟ್ ವಿಚಾರಕ್ಕೆ ಸಂಬಂಧಿಸಿ ಹೈಗ್ರೌಂಡ್ಸ್​​ ಠಾಣೆ ಪೊಲೀಸರು (Bengaluru Police) ನೀಡಿದ ನೋಟಿಸನ್ನು ಸ್ವೀಕರಿಸಲು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ನಿರಾಕರಿಸಿದ್ದಾರೆ. ಪಶ್ಚಿಮ ಬಂಗಾಳದ ಕೃಷ್ಣನಗರ ಹೋಟೆಲ್​ನಲ್ಲಿ ಅಮಿತ್ ಮಾಳವೀಯಾರನ್ನು ಭೇಟಿಯಾದ ಬೆಂಗಳೂರಿನ ಹೈಗ್ರೌಂಡ್ಸ್​​ ಠಾಣೆ ಪೊಲೀಸರು ನೋಟಿಸ್ ನೀಡಲು ಮುಂದಾದರು. ಆದರೆ, ಪೊಲೀಸರು ತಂದಿದ್ದ ನೋಟಿಸ್ ಸ್ವೀಕರಿಸದ ಅಮಿತ್ ಮಾಳವೀಯಾ, ಈಗಾಗಲೇ ಇ-ಮೇಲ್ ಮೂಲಕ ನನಗೆ ನೋಟಿಸ್ ಬಂದಿದೆ. ನೋಟಿಸ್​ಗೆ ಉತ್ತರ ನೀಡಲು ಏಳು ದಿನಗಳ ಕಾಲ ಅವಕಾಶ ಇದೆ ಎಂದರು.

ನೋಟಿಸ್​ಗೆ ನಮ್ಮ ವಕೀಲರು ಉತ್ತರ ನೀಡುತ್ತಾರೆ ಎಂದು ಮಾಳವೀಯಾ ಹೇಳಿದರು. ಹೀಗಾಗಿ ನೋಟಿಸ್​ ನೀಡಲು ಹೋಗಿದ್ದ ಹೈಗ್ರೌಂಡ್ಸ್ ಠಾಣೆ ಪೊಲೀಸರು ವಾಪಸಾಗಿದ್ದಾರೆ.

ಟ್ವಿಟರ್​​ನಲ್ಲಿ ಸಮುದಾಯಗಳಿಗೆ ಸಂಬಂಧಿಸಿ ಪೋಸ್ಟ್ ಮಾಡಿದ್ದ ಆರೋಪವನ್ನು ಮಾಳವೀಯ ಎದುರಿಸುತ್ತಿದ್ದಾರೆ. ಟ್ವಿಟರ್​​ನಲ್ಲಿ ಕರ್ನಾಟಕ ಬಿಜೆಪಿ ಘಟಕ ವಿಡಿಯೋ ಪೋಸ್ಟ್ ಮಾಡಿತ್ತು. ಅದರಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಮುಸ್ಲಿಮರು ಎಂಬಂತೆ ಬಿಂಬಿಸಲಾಗಿತ್ತು.

ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದ್ದ ಅನಿಮೇಷನ್ ವಿಡಿಯೋದಲ್ಲಿ ಒಂದು ಗೂಡಿನಲ್ಲಿ 3 ಮೊಟ್ಟೆಗಳಿರುತ್ತವೆ. ಆ ಮೊಟ್ಟೆಗಳನ್ನು SC, ST ಮತ್ತು OBC ಎಂದು ಟ್ಯಾಗ್ ಮಾಡಲಾಗಿದೆ. ಮುಸ್ಲಿಮರನ್ನು ಪ್ರತಿನಿಧಿಸುವ ಮತ್ತೊಂದು ಮೊಟ್ಟೆಯನ್ನು ಆ ಗೂಡಿಗೆ ಸೇರಿಸಲಾಗುತ್ತದೆ. ಆ ಮೊಟ್ಟೆಯೊಡೆದ ನಂತರ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಕೋಳಿಗೆ ಮಾತ್ರ ಆಹಾರ ನೀಡುತ್ತಿರುವುದು ಒಂದು ಸಮುದಾಯದ ಕಡೆಗೆ ಒಲವು ತೋರುತ್ತಿದೆ ಎಂಬುದರ ಸಂಕೇತವಾಗಿತ್ತು.

ಇದನ್ನೂ ಓದಿ: ಕೂಡಲೇ ಕರ್ನಾಟಕ ಬಿಜೆಪಿಯ ಅನಿಮೇಟೆಡ್ ವಿಡಿಯೋ ಡಿಲೀಟ್ ಮಾಡಿ; ಎಕ್ಸ್​ಗೆ ಚುನಾವಣಾ ಆಯೋಗ ಸೂಚನೆ

ಈ ಪೋಸ್ಟ್ ವಿರುದ್ಧ ಕೆಪಿಸಿಸಿ ಕಾನೂನು ಘಟಕದ ರಮೇಶ್ ಬಾಬು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದರು.

ವಿಡಿಯೋವನ್ನು ತಕ್ಷಣ ತೆಗೆದುಹಾಕುವಂತೆ ಚುನಾವಣಾ ಆಯೋಗ ಕಳೆದ ವಾರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ಗೆ (ಟ್ವಿಟ್ಟರ್​) ಸೂಚಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:52 am, Sat, 11 May 24

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!