AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕೋಲಾ ಶಿರೂರು ಹೆದ್ದಾರಿ ಬಂದ್​: ಮಡಗಾಂವ್ ಜಂಕ್ಷನ್-ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು ವ್ಯವಸ್ಥೆ

ಮಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ರೈಲು ಸೇವೆ ವ್ಯವಸ್ಥೆ ಮಾಡಲಾಗಿದ್ದು, ಜುಲೈ 20, 21, 22 ರಂದು 2 ಕೇಂದ್ರಗಳ ನಡುವೆ ಮೂರು ದಿನಗಳ ಕಾಲ ರೈಲು ಸಂಚರಿಸಲಿದೆ. ಬೆಳಿಗ್ಗೆ ಮಡಗಾಂವ್ ಜಂಕ್ಷನ್​ನಿಂದ 6 ಗಂಟೆಗೆ ವಿಶೇಷ ಕೊಂಕಣ ರೈಲು ಹೊರಡಲಿದ್ದು, ಮಧ್ಯಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. 

ಅಂಕೋಲಾ ಶಿರೂರು ಹೆದ್ದಾರಿ ಬಂದ್​: ಮಡಗಾಂವ್ ಜಂಕ್ಷನ್-ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು ವ್ಯವಸ್ಥೆ
ಅಂಕೋಲಾ ಶಿರೂರು ಹೆದ್ದಾರಿ ಬಂದ್​: ಮಡಗಾಂವ್ ಜಂಕ್ಷನ್-ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು ವ್ಯವಸ್ಥೆ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jul 20, 2024 | 3:46 PM

Share

ಉಡುಪಿ, ಜುಲೈ 20: ಅಂಕೋಲಾ ಶಿರೂರು (Shiroor) ಗುಡ್ಡ ಕುಸಿದು ನಿನ್ನೆಗೆ ಐದು ದಿನ ಕಳೆದಿದೆ. ನಿರಂತರವಾಗಿ ಕುಡ್ಡ ಕುಸಿತ ಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಹೆದ್ದಾರಿಯ ಮೇಲೆ ಗುಡ್ಡ ಕುಸಿತದಿಂದಾಗಿ ಹೆದ್ದಾರಿ ಬಂದ್ ಆಗಿದೆ. ಹೀಗಾಗಿ ಹೆಚ್ಚುವರಿ ಕೊಂಕಣ ರೈಲು (train) ವ್ಯವಸ್ಥೆ ಮಾಡಲಾಗಿದೆ. ಗೋವಾಕ್ಕೆ ತೆರಳುವ ಮುಖ್ಯ ಮಾರ್ಗ ಬಂದಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಮೂರು ದಿನಗಳ ಕಾಲ ಹೆಚ್ಚುವರಿ ರೈಲು ಸೇವೆ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಕೊಂಕಣ ರೈಲು ವ್ಯವಸ್ಥೆ 

ಮಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ರೈಲು ಸೇವೆ ವ್ಯವಸ್ಥೆ ಮಾಡಲಾಗಿದ್ದು, ಜುಲೈ 20, 21, 22 ರಂದು 2 ಕೇಂದ್ರಗಳ ನಡುವೆ ಮೂರು ದಿನಗಳ ಕಾಲ ರೈಲು ಸಂಚರಿಸಲಿದೆ. ಬೆಳಿಗ್ಗೆ ಮಡಗಾಂವ್ ಜಂಕ್ಷನ್​ನಿಂದ 6 ಗಂಟೆಗೆ ವಿಶೇಷ ಕೊಂಕಣ ರೈಲು ಹೊರಡಲಿದ್ದು, ಮಧ್ಯಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಇದನ್ನೂ ಓದಿ: KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್​ಆರ್​ಟಿಸಿಯಿಂದ ಊಟ ಸಹಿತ ಟೂರ್​ ಪ್ಯಾಕೇಜ್​, ಇಲ್ಲಿದೆ ಸಮಯ, ದರ ವಿವರ

ಮರು ಪ್ರಯಾಣದಲ್ಲಿ ಮಧ್ಯಾಹ್ನ 12:40ಕ್ಕೆ ಮಂಗಳೂರು ಜಂಕ್ಷನ್​ನಿಂದ ಹೊರಟು 7 ಗಂಟೆಗೆ ಮಡಗಾಂವ್ ಕಾರವಾರ, ಹರ್ವಾಡ, ಅಂಕೋಲ ಜೊತೆ ಬಹುತೇಕ ಎಲ್ಲಾ ಸ್ಟೇಷನ್​​ಗಳಲ್ಲೂ ನಿಲುಗಡೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಗೋವಾದ ಕೊಂಕಣ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ಜುಲೈ 10ರಂದು ಹಲವು ರೈಲುಗಳ ಸಂಚಾರದಲ್ಲಿ ಇತ್ತೀಚೆಗಷ್ಟೇ ವ್ಯತ್ಯಯ ಉಂಟಾಗಿತ್ತು. ಬಳಿಕ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಸೇರಿದಂತೆ ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಸಮಸ್ಯೆ ಎದುರಾದ ಪರಿಣಾಮ 14 ಗಂಟೆಗಳ ಕಾಲ ಹಲವು ರೈಲು ಸೇವೆ ರದ್ದಾಗಿದ್ದವು. ಹಾಗಾಗಿ ಸಾಕಷ್ಟು ಪ್ರಯಾಣಿಕರು ಬೇರೆ ಬೇರೆ ಕಡೆಗಳಿಗೆ ತೆರಳಲಾಗದೆ ಪರದಾಡಿದ್ದರು.

ಇದನ್ನೂ ಓದಿ: ಭಾರೀ ಮಳೆ ಕೊಂಕಣ ರೈಲ್ವೆ ಸೇವೆ ಸ್ಥಗಿತ; ಮಂಗಳೂರು ಎಕ್ಸ್‌ಪ್ರೆಸ್, ಮತ್ಸ್ಯ ಗಂಧ ರೈಲು ಸಂಚಾರ ಬಂದ್

ಶಿರಾಡಿ ಫಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದ್ದಾಗಿ ಮಂಗಳೂರು ಮತ್ತು ಬೆಂಗಳೂರು ಸಂಪರ್ಕ ರಸ್ತೆ ಕಡಿತಗೊಂಡಿದೆ. ಹೀಗಾಗಿ ಮಂಗಳೂರು ಬೆಂಗಳೂರು ಮಧ್ಯೆ ಎರಡು ವಿಶೇಷ ರೈಲು ಸೇವೆಯನ್ನು ಇತ್ತೀಚೆಗೆ ಘೋಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:45 pm, Sat, 20 July 24

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು