AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್: ಸಾಗಾಣಿಕೆ ವೆಚ್ಚ 250 ಕೋಟಿ ರೂ. ಬಾಕಿ ಕೊಡದ ಸರ್ಕಾರ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಮತ್ತು ಮಹತ್ವದ ಅನ್ನಭಾಗ್ಯ ಯೋಜನೆಯ ಅಕ್ಕಿ ಮುಂದಿನ ತಿಂಗಳಿನಿಂದ ಬಡವರಿಗೆ ಸಿಗುವುದು ಅನುಮಾನವಾಗಿದೆ. ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಮಾಡುವ ಲಾರಿಗಳಿಗೆ ಪಾವತಿ ಮಾಡಬೇಕಿದ್ದ 250 ಕೋಟಿ ರೂ. ಸರ್ಕಾರ ಬಾಕಿ ಇರಿಸಿಕೊಂಡ ಕಾರಣ ಇದೀಗ ಅಕ್ಕಿ ಸಾಗಾಟ ಬಂದ್ ಆಗಿದೆ.

ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್: ಸಾಗಾಣಿಕೆ ವೆಚ್ಚ 250 ಕೋಟಿ ರೂ. ಬಾಕಿ ಕೊಡದ ಸರ್ಕಾರ
ಲಾರಿಗಳು ಸಾಗಾಟ ನಿಲ್ಲಿಸಿರುವುದು
Kiran Surya
| Edited By: |

Updated on:Jul 07, 2025 | 2:58 PM

Share

ಬೆಂಗಳೂರು, ಜುಲೈ 7: ಅನ್ನಭಾಗ್ಯ (Anna Bhagya) ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದು. ಅನ್ನಭಾಗ್ಯ ಯೋಜನೆಗೆ 10 ಕೆಜಿ ಅಕ್ಕಿ ಪಡೆದುಕೊಳ್ಳುತ್ತಿರುವ ಫಲಾನುಭವಿಗಳಿಗೆ ಈಗ ಶಾಕ್ ಎದುರಾಗಿದೆ. ಮುಂದಿನ ತಿಂಗಳು ಅಕ್ಕಿ ಸಿಗುತ್ತದೆಯೋ ಇಲ್ಲವೋ ಎಂಬಾತಾಗಿದೆ. ಯಾಕೆಂದರೆ, ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್ ಆಗಿದೆ. ಆಹಾರ ಧಾನ್ಯ ಸಾಗಾಣಿಕೆ ವೆಚ್ಚವನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವುದೇ ಇದಕ್ಕೆ ಕಾರಣ.

15 ದಿನಗಳ ಗಡುವಿಗೂ ಸ್ಪಂದಿಸದ ಸರ್ಕಾರ

ಅನ್ನಭಾಗ್ಯ ಆಹಾರ ಧಾನ್ಯಗಳನ್ನು ಸಾಗಿಸುವ ಲಾರಿಗಳಿಗೆ ಸರ್ಕಾರ ನೀಡಬೇಕಾಗಿದ್ದ ಹಣವನ್ನು ಪಾವತಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಲಾರಿ ಮಾಲೀಕರ ಸಂಘ 15 ದಿನ ಗಡುವು ನೀಡಿತ್ತು. ಆದಾಗ್ಯೂ ಸರ್ಕಾರ ಯಾವುದೇ ರೀತಿಯಲ್ಲೂ ಸ್ಪಂದಿಸಲಿಲ್ಲ. ಹೀಗಾಗಿ ಇಂದಿನಿಂದ ಅನ್ನಭಾಗ್ಯ ಆಹಾರ ಸಾಗಿಸುವ ಲಾರಿಗಳ ಸಂಚಾರ ಬಂದ್ ಮಾಡಲಾಗಿದೆ.

ಅನ್ನಭಾಗ್ಯಕ್ಕೆ ಸರ್ಕಾರವೇ ಕನ್ನ ಹಾಕುತ್ತಿದೆ: ವಿಜಯೇಂದ್ರ

ಈ ನಡುವೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಅನ್ನಭಾಗ್ಯದ ಯೋಜನೆಗೆ ಸರ್ಕಾರವೇ ಕನ್ನ ಹಾಕುತ್ತಿದೆ ಎಂದಿದ್ದಾರೆ. ಅಕ್ಕಿ ನೀಡುವ ಬದಲು ಇಂದಿರಾ ಕಿಟ್ ನೀಡಿ ಅನ್ನಭಾಗ್ಯ ದುಡ್ಡು ಉಳಿಸಲು ಹೊರಟಿದೆ ಎಂದಿದ್ದಾರೆ.

ಇದನ್ನೂ ಓದಿ
Image
ಎತ್ತಿನಹೊಳೆ‌ ಡ್ಯಾಂ ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ಜನರಿಂದಲೂ ವಿರೋಧ!
Image
ಸಚಿವ ಎಂಬಿ ಪಾಟೀಲ್​ಗೆ ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಟಾಂಗ್
Image
ಪಾರ್ಟಿಗಳಲ್ಲಿ ಡ್ರಗ್ಸ್ ಸಿಕ್ಕರೆ ರೆಸಾರ್ಟ್, ಹೋಂ ಸ್ಟೇ ಮಾಲೀಕರ ಮೇಲೆ ಕೇಸ್
Image
ಸಿಎಂ ಬದಲಾವಣೆ ಚರ್ಚೆಗೆ ಸ್ವಾಮೀಜಿಗಳೂ ಎಂಟ್ರಿ

ವಿಜಯೇಂದ್ರಗೆ ಯತೀಂದ್ರ ತಿರುಗೇಟು

ಮತ್ತೊಂದೆಡೆ, ‘ರಸ್ತೆ ಬೇಕಾ ಅನ್ನಭಾಗ್ಯದ ಅಕ್ಕಿ ಬೇಕಾ’ ಎಂದು ಕೇಳಿದ್ದ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ಬಿಜೆಪಿಗೆ ಅಸ್ತ್ರವಾಗಿದೆ. ಇದೇ ಹೇಳಿಕೆ ಮುಂದಿಟ್ಟು ವಾಗ್ದಾಳಿ ನಡೆಸಿರುವ ವಿಜಯೇಂದ್ರ, ಅಭಿವೃದ್ದಿಗೆ ಹಣವಿಲ್ಲ ಎಂದು ಗುಡುಗಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಕೊಟ್ಟೂ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲವೆಂದ ಗುಂಡೂರಾವ್: ಅಧಿಸೂಚಿತ ಖಾಯಿಲೆ ಎಂದು ಘೋಷಣೆ

ಬಸವರಾಜ ರಾಯರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಚಲುವರಾಯಸ್ವಾಮಿ ಗ್ಯಾರಂಟಿನೂ ಆಗುತ್ತೆ , ರಸ್ತೆನೂ ಆಗುತ್ತೆ ಎಂದಿದ್ದಾರೆ. ಈ ಮಧ್ಯೆ, ನಮ್ಮ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ. ನಾನು ತಮಾಷೆಯಾಗಿ ಮಾತನಾಡಿದೆ ಎಂದ ಶಾಸಕ ರಾಯರೆಡ್ಡಿ ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Mon, 7 July 25

ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್ 
ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್ 
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ