AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಡಿಎಸ್ ಪಡಿತರ ವಿತರಕರಿಗೆ ಗುಡ್​ನ್ಯೂಸ್: 1 ಕೆಜಿ ಅಕ್ಕಿಯ ಕಮಿಷನ್ ಮೊತ್ತ 1.5 ರೂ.ಗೆ ಹೆಚ್ಚಳ

ಪಿಡಿಎಸ್ ವಿತರಕರ ಬಹುಕಾಲದ ಬೇಡಿಕೆಯಾಗಿರುವ ಕಮಿಷನ್ ಮೊತ್ತ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಈಡೇರಿಸಿದೆ. ಒಂದು ಕೆಜಿ ಅಕ್ಕಿಯ ಪಿಡಿಎಸ್ ವಿತರಕರ ಕಮಿಷನ್ ಮೊತ್ತವನ್ನು 1.24 ರೂ.ನಿಂದ 1.5 ರೂಪಾಯಿಗೆ ಹೆಚ್ಚಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಪಿಡಿಎಸ್ ಪಡಿತರ ವಿತರಕರಿಗೆ ಗುಡ್​ನ್ಯೂಸ್: 1 ಕೆಜಿ ಅಕ್ಕಿಯ ಕಮಿಷನ್ ಮೊತ್ತ 1.5 ರೂ.ಗೆ ಹೆಚ್ಚಳ
ಪಿಡಿಎಸ್ ಪಡಿತರ ವಿತರಕರಿಗೆ ಗುಡ್​ನ್ಯೂಸ್: 1 ಕೆಜಿ ಅಕ್ಕಿಯ ಕಮನಿಷನ್ ಮೊತ್ತ 1.5 ರೂ. ಹೆಚ್ಚಳ
TV9 Web
| Edited By: Rakesh Nayak Manchi|

Updated on:Mar 01, 2024 | 10:00 AM

Share

ಬೆಂಗಳೂರು, ಮಾ.1: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಫಲಾನುಭವಿಗಳಿಗೆ ನೀಡುವ ಒಂದು ಕೆಜಿ ಅಕ್ಕಿಯ ಪಿಡಿಎಸ್ ವಿತರಕರ ಕಮಿಷನ್ ಮೊತ್ತವನ್ನು 1.24 ರೂಪಾಯಿಯಿಂದ 1.5 ರೂಪಾಯಿಗೆ ಹೆಚ್ಚಿಸುವುದಾಗಿ ಗುರುವಾರ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅನ್ನಭಾಗ್ಯ (Anna Bhagya) ಯೋಜನೆಯ 10 ವರ್ಷಗಳ ಸಂಭ್ರಮಾಚರಣೆಯ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ವಿತರಕರ ಬಹುಕಾಲದ ಬೇಡಿಕೆಯಾಗಿರುವ ಈ ಘೋಷಣೆಯನ್ನು ಮಾಡಿದರು.

ಈ ಯೋಜನೆಯನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ಘೋಷಿಸಿದ್ದರು. ಕರ್ನಾಟಕವನ್ನು ಹಸಿವು ಮುಕ್ತಗೊಳಿಸುವುದೇ ಈ ಯೋಜನೆಯ ಉದ್ದೇಶವಾಗಿದೆ ಎಂದ ಮುಖ್ಯಮಂತ್ರಿ, ಪ್ರತಿಪಕ್ಷ ಬಿಜೆಪಿಯು ಬಡವರಿಗಾಗಿ ಉದ್ದೇಶಿಸಿರುವ ಯೋಜನೆಯನ್ನು ಲೇವಡಿ ಮಾಡಿರುವುದು ದುರಂತ ಎಂದು ಹೇಳಿದರು. ಬಿಜೆಪಿ ಭಾರತವನ್ನು ‘ಕಾಂಗ್ರೆಸ್ ಮುಕ್ತ’ ಮಾಡಲು ಬಯಸುತ್ತದೆ, ಆದರೆ ಕಾಂಗ್ರೆಸ್ ಭಾರತ ‘ಹಸಿವು ಮುಕ್ತ’ ಮಾಡಲು ಬಯಸುತ್ತದೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಸಚಿವ ಸಂಪುಟ ಸಭೆ: ಬರ, ಆರೋಗ್ಯ ಸೇರಿ ಮಹತ್ವದ ನಿರ್ಣಯಗಳಿಗೆ ಅನುಮೋದನೆ

ಬಸವೇಶ್ವರರು ಪ್ರಚಾರ ಮಾಡಿದ ಅನ್ನ ದಾಸೋಹದ ಪರಿಕಲ್ಪನೆಯಿಂದ ಈ ಯೋಜನೆಯು ಪ್ರೇರಿತವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿಯನ್ನು ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಹೀಗಾಗಿ ನಾವು ಫಲಾನುಭವಿಗಳಿಗೆ ಐದು ಕೆಜಿ ಹೆಚ್ಚುವರಿ ಅಕ್ಕಿಯ ಹಣ ನೀಡುತ್ತಿದ್ದೇವೆ. ನೀವು ಮತ ಹಾಕಿದಾಗ ಬಡವರ ಪರವಾಗಿ ಯಾರು ಇದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:53 am, Fri, 1 March 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ