AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಡಿಎಸ್ ಪಡಿತರ ವಿತರಕರಿಗೆ ಗುಡ್​ನ್ಯೂಸ್: 1 ಕೆಜಿ ಅಕ್ಕಿಯ ಕಮಿಷನ್ ಮೊತ್ತ 1.5 ರೂ.ಗೆ ಹೆಚ್ಚಳ

ಪಿಡಿಎಸ್ ವಿತರಕರ ಬಹುಕಾಲದ ಬೇಡಿಕೆಯಾಗಿರುವ ಕಮಿಷನ್ ಮೊತ್ತ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಈಡೇರಿಸಿದೆ. ಒಂದು ಕೆಜಿ ಅಕ್ಕಿಯ ಪಿಡಿಎಸ್ ವಿತರಕರ ಕಮಿಷನ್ ಮೊತ್ತವನ್ನು 1.24 ರೂ.ನಿಂದ 1.5 ರೂಪಾಯಿಗೆ ಹೆಚ್ಚಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಪಿಡಿಎಸ್ ಪಡಿತರ ವಿತರಕರಿಗೆ ಗುಡ್​ನ್ಯೂಸ್: 1 ಕೆಜಿ ಅಕ್ಕಿಯ ಕಮಿಷನ್ ಮೊತ್ತ 1.5 ರೂ.ಗೆ ಹೆಚ್ಚಳ
ಪಿಡಿಎಸ್ ಪಡಿತರ ವಿತರಕರಿಗೆ ಗುಡ್​ನ್ಯೂಸ್: 1 ಕೆಜಿ ಅಕ್ಕಿಯ ಕಮನಿಷನ್ ಮೊತ್ತ 1.5 ರೂ. ಹೆಚ್ಚಳ
TV9 Web
| Edited By: Rakesh Nayak Manchi|

Updated on:Mar 01, 2024 | 10:00 AM

Share

ಬೆಂಗಳೂರು, ಮಾ.1: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಫಲಾನುಭವಿಗಳಿಗೆ ನೀಡುವ ಒಂದು ಕೆಜಿ ಅಕ್ಕಿಯ ಪಿಡಿಎಸ್ ವಿತರಕರ ಕಮಿಷನ್ ಮೊತ್ತವನ್ನು 1.24 ರೂಪಾಯಿಯಿಂದ 1.5 ರೂಪಾಯಿಗೆ ಹೆಚ್ಚಿಸುವುದಾಗಿ ಗುರುವಾರ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅನ್ನಭಾಗ್ಯ (Anna Bhagya) ಯೋಜನೆಯ 10 ವರ್ಷಗಳ ಸಂಭ್ರಮಾಚರಣೆಯ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ವಿತರಕರ ಬಹುಕಾಲದ ಬೇಡಿಕೆಯಾಗಿರುವ ಈ ಘೋಷಣೆಯನ್ನು ಮಾಡಿದರು.

ಈ ಯೋಜನೆಯನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ಘೋಷಿಸಿದ್ದರು. ಕರ್ನಾಟಕವನ್ನು ಹಸಿವು ಮುಕ್ತಗೊಳಿಸುವುದೇ ಈ ಯೋಜನೆಯ ಉದ್ದೇಶವಾಗಿದೆ ಎಂದ ಮುಖ್ಯಮಂತ್ರಿ, ಪ್ರತಿಪಕ್ಷ ಬಿಜೆಪಿಯು ಬಡವರಿಗಾಗಿ ಉದ್ದೇಶಿಸಿರುವ ಯೋಜನೆಯನ್ನು ಲೇವಡಿ ಮಾಡಿರುವುದು ದುರಂತ ಎಂದು ಹೇಳಿದರು. ಬಿಜೆಪಿ ಭಾರತವನ್ನು ‘ಕಾಂಗ್ರೆಸ್ ಮುಕ್ತ’ ಮಾಡಲು ಬಯಸುತ್ತದೆ, ಆದರೆ ಕಾಂಗ್ರೆಸ್ ಭಾರತ ‘ಹಸಿವು ಮುಕ್ತ’ ಮಾಡಲು ಬಯಸುತ್ತದೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಸಚಿವ ಸಂಪುಟ ಸಭೆ: ಬರ, ಆರೋಗ್ಯ ಸೇರಿ ಮಹತ್ವದ ನಿರ್ಣಯಗಳಿಗೆ ಅನುಮೋದನೆ

ಬಸವೇಶ್ವರರು ಪ್ರಚಾರ ಮಾಡಿದ ಅನ್ನ ದಾಸೋಹದ ಪರಿಕಲ್ಪನೆಯಿಂದ ಈ ಯೋಜನೆಯು ಪ್ರೇರಿತವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿಯನ್ನು ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಹೀಗಾಗಿ ನಾವು ಫಲಾನುಭವಿಗಳಿಗೆ ಐದು ಕೆಜಿ ಹೆಚ್ಚುವರಿ ಅಕ್ಕಿಯ ಹಣ ನೀಡುತ್ತಿದ್ದೇವೆ. ನೀವು ಮತ ಹಾಕಿದಾಗ ಬಡವರ ಪರವಾಗಿ ಯಾರು ಇದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:53 am, Fri, 1 March 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ