AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಡಿಎಸ್ ಪಡಿತರ ವಿತರಕರಿಗೆ ಗುಡ್​ನ್ಯೂಸ್: 1 ಕೆಜಿ ಅಕ್ಕಿಯ ಕಮಿಷನ್ ಮೊತ್ತ 1.5 ರೂ.ಗೆ ಹೆಚ್ಚಳ

ಪಿಡಿಎಸ್ ವಿತರಕರ ಬಹುಕಾಲದ ಬೇಡಿಕೆಯಾಗಿರುವ ಕಮಿಷನ್ ಮೊತ್ತ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಈಡೇರಿಸಿದೆ. ಒಂದು ಕೆಜಿ ಅಕ್ಕಿಯ ಪಿಡಿಎಸ್ ವಿತರಕರ ಕಮಿಷನ್ ಮೊತ್ತವನ್ನು 1.24 ರೂ.ನಿಂದ 1.5 ರೂಪಾಯಿಗೆ ಹೆಚ್ಚಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಪಿಡಿಎಸ್ ಪಡಿತರ ವಿತರಕರಿಗೆ ಗುಡ್​ನ್ಯೂಸ್: 1 ಕೆಜಿ ಅಕ್ಕಿಯ ಕಮಿಷನ್ ಮೊತ್ತ 1.5 ರೂ.ಗೆ ಹೆಚ್ಚಳ
ಪಿಡಿಎಸ್ ಪಡಿತರ ವಿತರಕರಿಗೆ ಗುಡ್​ನ್ಯೂಸ್: 1 ಕೆಜಿ ಅಕ್ಕಿಯ ಕಮನಿಷನ್ ಮೊತ್ತ 1.5 ರೂ. ಹೆಚ್ಚಳ
TV9 Web
| Edited By: |

Updated on:Mar 01, 2024 | 10:00 AM

Share

ಬೆಂಗಳೂರು, ಮಾ.1: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಫಲಾನುಭವಿಗಳಿಗೆ ನೀಡುವ ಒಂದು ಕೆಜಿ ಅಕ್ಕಿಯ ಪಿಡಿಎಸ್ ವಿತರಕರ ಕಮಿಷನ್ ಮೊತ್ತವನ್ನು 1.24 ರೂಪಾಯಿಯಿಂದ 1.5 ರೂಪಾಯಿಗೆ ಹೆಚ್ಚಿಸುವುದಾಗಿ ಗುರುವಾರ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅನ್ನಭಾಗ್ಯ (Anna Bhagya) ಯೋಜನೆಯ 10 ವರ್ಷಗಳ ಸಂಭ್ರಮಾಚರಣೆಯ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ವಿತರಕರ ಬಹುಕಾಲದ ಬೇಡಿಕೆಯಾಗಿರುವ ಈ ಘೋಷಣೆಯನ್ನು ಮಾಡಿದರು.

ಈ ಯೋಜನೆಯನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ಘೋಷಿಸಿದ್ದರು. ಕರ್ನಾಟಕವನ್ನು ಹಸಿವು ಮುಕ್ತಗೊಳಿಸುವುದೇ ಈ ಯೋಜನೆಯ ಉದ್ದೇಶವಾಗಿದೆ ಎಂದ ಮುಖ್ಯಮಂತ್ರಿ, ಪ್ರತಿಪಕ್ಷ ಬಿಜೆಪಿಯು ಬಡವರಿಗಾಗಿ ಉದ್ದೇಶಿಸಿರುವ ಯೋಜನೆಯನ್ನು ಲೇವಡಿ ಮಾಡಿರುವುದು ದುರಂತ ಎಂದು ಹೇಳಿದರು. ಬಿಜೆಪಿ ಭಾರತವನ್ನು ‘ಕಾಂಗ್ರೆಸ್ ಮುಕ್ತ’ ಮಾಡಲು ಬಯಸುತ್ತದೆ, ಆದರೆ ಕಾಂಗ್ರೆಸ್ ಭಾರತ ‘ಹಸಿವು ಮುಕ್ತ’ ಮಾಡಲು ಬಯಸುತ್ತದೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಸಚಿವ ಸಂಪುಟ ಸಭೆ: ಬರ, ಆರೋಗ್ಯ ಸೇರಿ ಮಹತ್ವದ ನಿರ್ಣಯಗಳಿಗೆ ಅನುಮೋದನೆ

ಬಸವೇಶ್ವರರು ಪ್ರಚಾರ ಮಾಡಿದ ಅನ್ನ ದಾಸೋಹದ ಪರಿಕಲ್ಪನೆಯಿಂದ ಈ ಯೋಜನೆಯು ಪ್ರೇರಿತವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿಯನ್ನು ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಹೀಗಾಗಿ ನಾವು ಫಲಾನುಭವಿಗಳಿಗೆ ಐದು ಕೆಜಿ ಹೆಚ್ಚುವರಿ ಅಕ್ಕಿಯ ಹಣ ನೀಡುತ್ತಿದ್ದೇವೆ. ನೀವು ಮತ ಹಾಕಿದಾಗ ಬಡವರ ಪರವಾಗಿ ಯಾರು ಇದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:53 am, Fri, 1 March 24

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?