ರಾಯಚೂರಿನಲ್ಲಿ ಮತ್ತೊಂದು ಬಸ್ ಅಪಘಾತ: ಚಾಲಕ ಸಾವು, 9 ಜನರಿಗೆ ಗಾಯ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಸಾರಿಗೆ ಬಸ್​ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಚಾಲಕ ಸಾವನ್ನಪ್ಪಿದ್ದು, 9 ಜನರಿಗೆ ಗಾಯಗಳಾಗಿವೆ.

ರಾಯಚೂರಿನಲ್ಲಿ ಮತ್ತೊಂದು ಬಸ್ ಅಪಘಾತ: ಚಾಲಕ ಸಾವು, 9 ಜನರಿಗೆ ಗಾಯ
ರಾಯಚೂರಿನಲ್ಲಿ ಮತ್ತೊಂದು ಬಸ್ ಅಪಘಾತ: ಚಾಲಕ ಸಾವು, 9 ಜನರಿಗೆ ಗಾಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 08, 2024 | 6:18 PM

ರಾಯಚೂರು, ಸೆಪ್ಟೆಂಬರ್​​ 08: ಕೆಎಸ್​ಆರ್​ಟಿಸಿ ಬಸ್​​ಗೆ ಖಾಸಗಿ ಬಸ್​ ಡಿಕ್ಕಿ (bus accident) ಹೊಡೆದ ಪರಿಣಾಮ ಖಾಸಗಿ ಬಸ್​ ಚಾಲಕ ಸಾವನ್ನಪ್ಪಿದ್ದು, 9 ಪ್ರಯಾಣಿಕರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಹರಾಪೂರ ಗ್ರಾಮದ ಬಳಿ ನಡೆದಿದೆ. ಪುಂಡಲೀಕ್​ (36) ಮೃತ ಖಾಸಗಿ ಬಸ್​ ಚಾಲಕ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಕ್ಯಾಮರಾದಲ್ಲಿ ಸೆರೆ ಆಗಿದೆ. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಿಂದ ಯಾದಗಿರಿ ಕಡೆಗೆ ಕೆಎಸ್​ಆರ್​ಟಿಸಿ ಬಸ್​ ಹೊರಟಿತ್ತು. ಬೆಂಗಳೂರಿನಿಂದ ಕಲಬುರಗಿಯತ್ತ ಖಾಸಗಿ ಬಸ್ ಹೊರಟಿತ್ತು. ಈ ಹರಾಪೂರ ಗ್ರಾಮದ ಬಳಿ ಡಿಕ್ಕಿ ಹೊಡೆದಿವೆ. ಗಾಯಾಳುಗಳಿಗೆ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗುರ್ಲಾಪುರ ಕ್ರಾಸ್ ಬಳಿ ಲಾರಿ ಮತ್ತು ಬಸ್​ ನಡುವೆ ಮುಖಾಮುಖಿ ಡಿಕ್ಕಿ: ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಬೆಳಗಾವಿ: ಲಾರಿ ಮತ್ತು ಬಸ್​ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಬಳಿ ನಡೆದಿದೆ. ಸರ್ಕಾರಿ ಬಸ್​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ: 30ಕ್ಕೂ ಹೆಚ್ಚು ಜನರು ವಶಕ್ಕೆ

ಮಹಾಲಿಂಗಪುರದಿಂದ ಬೆಳಗಾವಿ ನಗರಕ್ಕೆ ಸರ್ಕಾರಿ ಬಸ್‌ ಹೊರಟಿತ್ತು. ಬಸ್​​ ಡಿಕ್ಕಿಯ ರಭಸಕ್ಕೆ ರಸ್ತೆ ಪಕ್ಕದ ಗುಂಡಿಗೆ ಲಾರಿ ಬಿದ್ದಿದೆ. ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜೊತೆಗೆ ಬಂದಿದ್ದವನಿಂದಲೇ ಚಾಕುವಿನಿಂದ ಇರಿದು ಕೊಲೆಗೆ ಯತ್ನ

ಕಲಬುರಗಿ: ಚಾಕುವಿನಿಂದ ಇರಿದು ಮಹಿಳೆಯ ಕೊಲೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮಡಕಿ ತಾಂಡಾದಲ್ಲಿ ನಡೆದಿದೆ. ಸವಿತಾ ಎಂಬುವರ ಕತ್ತು ಕೊಯ್ದು ಕೊಲೆಗೆ ದುಷ್ಕರ್ಮಿ ಯತ್ನಿಸಿದ್ದಾನೆ. ಹಲ್ಲೆಗೊಳಗಾದ ಸವಿತಾ ಕಮಲಾಪುರದ ಮರಮಂಚಿ ಗ್ರಾಮದ‌ ನಿವಾಸಿ.

ಇದನ್ನೂ ಓದಿ: ತರಬೇತಿ ವೇಳೆ ಬೋಟ್​ ಮಗುಚಿ ಇಬ್ಬರು ಕಮಾಂಡೋಗಳು ಸಾವು: ನಾಲ್ವರು ಪಾರು

ಬೆಳಗ್ಗೆ ಕ್ರೂಸರ್ ವಾಹನದಲ್ಲಿ ಸವಿತಾ ಮತ್ತು ವ್ಯಕ್ತಿ ಊರಿಗೆ ಹೊರಟಿದ್ದರು. ತಾಂಡಾ ಬಳಿ ಇಳಿದುಕೊಂಡಿದ್ದ ಸವಿತಾ, ಆಕೆಯ ಜೊತೆಗೆ ಬಂದಿದ್ದ ವ್ಯಕ್ತಿ. ಇಬ್ಬರ ನಡುವೆ ಗಲಾಟೆಯಾಗಿ ಕತ್ತು ಕೊಯ್ದು ಕೊಲೆಗೆ ಯತ್ನಿಸಲಾಗಿದೆ. ಸವಿತಾ ಪತಿ ಹೈದರಾಬಾದ್​​ನಲ್ಲಿ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.