AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೊಂದು ವಿವಾದ: ಅ 15ರಂದು ಉಗ್ರ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್​ ಕರೆ

ಮಂಗಳೂರಿನಲ್ಲಿ ದ್ವೇಷ ಭಾಷಣ ಆರೋಪದಡಿ ಪ್ರಾಧ್ಯಾಪಕನ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಸದ್ಯ ಈ ವಿಚಾರವಾಗಿ ಅ.15ಕ್ಕೆ ನಗರದಲ್ಲಿ ಬೃಹತ್ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್ ಕರೆನೀಡಿದೆ. ಹಿಂದೂಗಳನ್ನು ಗುರಿಯಾಗಿಸಿ ಕೇಸ್​ ದಾಖಲಿಸಲಾಗಿದೆ. ಡಾ.ಅರುಣ್ ಉಳ್ಳಾಲ್ ಪರವಾಗಿ ವಿಹೆಚ್​ಪಿ‌ ನಿಲ್ಲುತ್ತದೆ ಎಂದು ಶಿವಾನಂದ ಮೆಂಡನ್​ ಹೇಳಿದ್ದಾರೆ.

ಮಂಗಳೂರಿನಲ್ಲಿ ಮತ್ತೊಂದು ವಿವಾದ: ಅ 15ರಂದು ಉಗ್ರ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್​ ಕರೆ
ಮಂಗಳೂರಿನಲ್ಲಿ ಮತ್ತೊಂದು ವಿವಾದ: ಅ 15ರಂದು ಉಗ್ರ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್​ ಕರೆ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Oct 10, 2024 | 6:26 PM

Share

ಮಂಗಳೂರು, ಅಕ್ಟೋಬರ್​ 10: ದ್ವೇಷ ಭಾಷಣ ಆರೋಪದಡಿ ನಗರದ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರುಣ್ ಉಳ್ಳಾಲ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಸದ್ಯ ಈ ಕೇಸ್​​ ದಾಖಲಿಸಿದ್ದನ್ನು ಖಂಡಿಸಿ ಅ.15ಕ್ಕೆ ಮಂಗಳೂರಲ್ಲಿ ಬೃಹತ್ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಕರೆ ನೀಡಿದೆ.

ಡಾ.ಅರುಣ್ ಉಳ್ಳಾಲ್ ಪರವಾಗಿ ವಿಹೆಚ್​ಪಿ‌ ನಿಲ್ಲುತ್ತದೆ: ಶಿವಾನಂದ ಮೆಂಡನ್

ಈ ಬಗ್ಗೆ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಹೆಚ್​ಪಿ ಮುಖಂಡ ಶಿವಾನಂದ ಮೆಂಡನ್​, ಹಿಂದೂಗಳನ್ನು ಗುರಿಯಾಗಿಸಿ ಅರುಣ್ ವಿರುದ್ಧ ಕೇಸ್ ದಾಖಲಿಸಲಾಗಿದೆ.​ ಡಾ.ಅರುಣ್ ಉಳ್ಳಾಲ್ ಪರವಾಗಿ ವಿಹೆಚ್​ಪಿ‌ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು: ಧರ್ಮ ದ್ವೇಷದ ಭಾಷಣ ಆರೋಪ; ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲು

ದ್ವೇಷ ಭಾಷಣ ಮಾಡಿದ್ದಾರೆ ಎಂದು ಡಾ ಅರುಣ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಡಾ ಅರುಣ್ ಉಪನ್ಯಾಸಕರಾಗಿದ್ದ ಸಂತ ಆಗ್ನೆಸ್ ಶಿಕ್ಷಣ ಸಂಸ್ಥೆಯಿಂದ ವಜಾ ಮಾಡಲಾಗಿದೆ. ಅವರು ತಮ್ಮ ಫ್ರೀ ಸಮಯದಲ್ಲಿ ಧರ್ಮ‌ ಶಿಕ್ಷಣ ನೀಡುತ್ತಿದ್ದರು. ಇದನ್ನು ನೆಪ ಮಾಡಿ ಸಂತ ಆಗ್ನೆಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಡಾ ಅರುಣ್ ಅವರನ್ನು ವಜಾ ಮಾಡಿದೆ. ಇದೇ ರೀತಿ ಹಲವಾರು ಹಿಂದೂ ಉಪನ್ಯಾಸಕರನ್ನು ಕೂಡ ಸಂತ ಆಗ್ನೆಸ್ ಶಿಕ್ಷಣ ಸಂಸ್ಥೆ ವಜಾ ಮಾಡಿದೆ ಎಂದಿದ್ದಾರೆ.

ಸಂತ ಆಗ್ನೆಸ್ ಶಿಕ್ಷಣ ಸಂಸ್ಥೆ ತಾರತಮ್ಯ ಧೋರಣೆ ಅನುಸರಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ನ್ಯಾಯ ಸಿಗುತ್ತಿಲ್ಲ. ರಾಜ್ಯದಲ್ಲಿ ಹಿಂದೂ ವಿರೋಧಿ ಸರಕಾರ ಇದೆ. ಇತ್ತೀಚೆಗೆ ರಾಜ್ಯಪಾಲರ ವಿರುದ್ಧ ಎಂಎಲ್​ಸಿ ಐವನ್ ಡಿಸೋಜಾ ಬಾಂಗ್ಲಾ ಮಾದರಿ ದಾಳಿ ಮಾಡುವ ಎಚ್ಚರಿಕೆ ನೀಡಿದ್ದರು. ಅವರ ವಿರುದ್ದ ಈವರೆಗೂ ಎಫ್​ಐ‌ಆರ್​ ಆಗಿಲ್ಲ. ರಾಜ್ಯ ಸರಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಪ್ಯಾಲಿಸ್ತೀನ್ ಪರ ಒಲವು: ಬಸ್​ಗೆ ಇಸ್ರೇಲ್ ಟ್ರಾವೆಲ್ಸ್ ಎಂದು ಹೆಸರಿಟ್ಟ ಖಾಸಗಿ ಬಸ್ ಮಾಲೀಕ

ಅಲ್ಪಸಂಖ್ಯಾತರ ಓಲೈಕೆಗೋಸ್ಕರ ರಾಜ್ಯ ಸರಕಾರ ಹಿಂದೂಗಳನ್ನು ಗುರಿಯಾಗಿಸುತ್ತಿದೆ. ಈ ಎಲ್ಲಾ ವಿಚಾರ ಮುಂದಿಟ್ಟು ಅಕ್ಟೋಬರ್ 15ಕ್ಕೆ ಮಂಗಳೂರಿನಲ್ಲಿ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ವಿಹೆಚ್​ಪಿ ಮುಖಂಡ ಶಿವಾನಂದ ಮೆಂಡನ್ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More