ನರಗುಂದದಲ್ಲಿ ಮತ್ತೆ ಭೂಕುಸಿತ, 5 ಮಂದಿ ಪ್ರಾಣಾಪಾಯದಿಂದ ಪಾರು

ಗದಗ: ನರಗುಂದದಲ್ಲಿ ಭೂಕುಸಿತ ಮುಂದುವರೆದಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ರಾತ್ರಿ ಭೂಕುಸಿತದಿಂದ ಮನೆಯೊಂದರ ಗೋಡೆ ಬಿದ್ದಿದೆ. ರಾತ್ರಿ ಮಲಗಿದ್ದಾಗ ಮಣ್ಣು ಉದುರುತ್ತಿದ್ದದ್ದು ಭಾಸವಾಗಿ ಕಾಶಪ್ಪ ಗುಡಗಾನೂರ ಕುಟುಂಬದ 5 ಮಂದಿ, ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಭೂಕುಸಿತದಿಂದ ಮನೆ ಗೋಡೆ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಆ ಐವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಇದೇ ತಿಂಗಳಲ್ಲಿ 9 ಬಾರಿ ಭೂಕುಸಿತವಾಗಿದೆ. ಈ ರೀತಿ ಪದೇ […]

ನರಗುಂದದಲ್ಲಿ ಮತ್ತೆ ಭೂಕುಸಿತ, 5 ಮಂದಿ ಪ್ರಾಣಾಪಾಯದಿಂದ ಪಾರು
ಸಾಧು ಶ್ರೀನಾಥ್​

Updated on: Nov 22, 2019 | 12:24 PM

ಗದಗ: ನರಗುಂದದಲ್ಲಿ ಭೂಕುಸಿತ ಮುಂದುವರೆದಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ರಾತ್ರಿ ಭೂಕುಸಿತದಿಂದ ಮನೆಯೊಂದರ ಗೋಡೆ ಬಿದ್ದಿದೆ. ರಾತ್ರಿ ಮಲಗಿದ್ದಾಗ ಮಣ್ಣು ಉದುರುತ್ತಿದ್ದದ್ದು ಭಾಸವಾಗಿ ಕಾಶಪ್ಪ ಗುಡಗಾನೂರ ಕುಟುಂಬದ 5 ಮಂದಿ, ಮನೆಯಿಂದ ಹೊರಬಂದಿದ್ದಾರೆ.

ಈ ವೇಳೆ ಭೂಕುಸಿತದಿಂದ ಮನೆ ಗೋಡೆ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಆ ಐವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಇದೇ ತಿಂಗಳಲ್ಲಿ 9 ಬಾರಿ ಭೂಕುಸಿತವಾಗಿದೆ. ಈ ರೀತಿ ಪದೇ ಪದೇ ಭೂಮಿ ಕುಸಿಯುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

Published On - 12:22 pm, Fri, 22 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us