AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಮತ್ತೊಂದು ಅವಘಡ: ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋದಿಂದ ಇಳಿಯುವಾಗ ಓರ್ವ ಪ್ರಯಾಣಿಕ ಆಯತಪ್ಪಿ ಬಿದ್ದಿದ್ದು, ಭದ್ರತಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಇಂದು ಮಧ್ಯಾಹ್ನ 1.13ರ ಸುಮಾರಿಗೆ ಹಸಿರು ಮಾರ್ಗದಲ್ಲಿ ನಡೆದಿದೆ. ಅವಘಡ ಹಿನ್ನಲೆ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತವಾಗಿತ್ತು.

ನಮ್ಮ ಮೆಟ್ರೋದಲ್ಲಿ ಮತ್ತೊಂದು ಅವಘಡ: ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರು
ನಮ್ಮ ಮೆಟ್ರೋನಲ್ಲಿ ಮತ್ತೊಂದು ಅವಘಡ: ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರು
ಕಿರಣ್​ ಸೂರ್ಯ
| Edited By: |

Updated on: Aug 19, 2024 | 6:48 PM

Share

ಬೆಂಗಳೂರು, ಆಗಸ್ಟ್​ 19: ಮೆಟ್ರೋದಿಂದ (Metro) ಇಳಿಯುವಾಗ ಆಯತಪ್ಪಿ ರೈಲು ಹಳಿಗೆ ಬಿದ್ದ ವ್ಯಕ್ತಿ ಅದೃಷ್ಟವಶಾತ್ ಬಚಾವ್​ ಆಗಿರುವಂತಹ ಘಟನೆ ಮಧ್ಯಾಹ್ನ 1.13ರ ಸುಮಾರಿಗೆ ನಗರದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ನಡೆದಿದೆ. ಭದ್ರತಾ ಸಿಬ್ಬಂದಿ ತಕ್ಷಣ ಎಮರ್ಜೆನ್ಸಿ ಬಟನ್ ಉಪಯೋಗಿಸಿದ್ದರಿಂದ ಪ್ರಯಾಣಿಕ ಬಚಾವ್​ ಆಗಿದ್ದಾರೆ. ಘಟನೆಯಿಂದಾಗಿ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತವಾಗಿತ್ತು.

ಮೆಟ್ರೊ ಟ್ರ್ಯಾಕ್​ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಆಗಸ್ಟ್ 3 ರ ಸಂಜೆ 6 ಗಂಟೆಯ ಸಮಯದಲ್ಲಿ ದೊಡ್ಡಕಲ್ಲಸಂದ್ರ ಮೆಟ್ರೊ ಹಸಿರು ಮಾರ್ಗದ ನಿಲ್ದಾಣಕ್ಕೆ ಆಗಮಿಸಿದ್ದ 57 ವರ್ಷದ ಪಶ್ಚಿಮ ಬಂಗಾಳ ಮೂಲದ ನವೀನ್ ಅರೋರ ಎಂಬಾತ, ಪ್ರಯಾಣಿಕರಂತೆ ಮೆಟ್ರೊ ನಿಲ್ದಾಣದಲ್ಲಿ ನಿಂತಿದ್ದ. ಆದರೆ ಮೆಟ್ರೊ ಆಗಮಿಸ್ತಿದ್ದಂತೆ ಹಳಿ ಮೇಲೆ ಜಂಪ್ ಮಾಡಿದ್ದ. ಅಷ್ಟೇ ಮೆಟ್ರೋ ರೈಲಿನ ಎರಡು ಬೋಗಿ ಆತನ ಮೇಲೆಯೇ ಹರಿದಿ ಪರಿಣಾಮ ದೇಹ ಛಿದ್ರ ಛಿದ್ರವಾಗಿ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ.

ಇದನ್ನೂ ಓದಿ: ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ: ಈ ದಿನಗಳಂದು ಸಂಪೂರ್ಣ ಸ್ಥಗಿತ

ಹಸಿರು ಮಾರ್ಗದಲ್ಲಿ ರೈಲು ಸಂಚಾರ ಎರಡೂವರೆ ಗಂಟೆಗಳ ಕಾಲ ಬಂದ್ ಆಗಿತ್ತು. ಇದರಿಂದ ಮೆಟ್ರೊ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಚಾರ ಗೊತ್ತಾಗ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ಕೋಣನಕುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದರು. ಸ್ಥಳಕ್ಕಾಗಮಿಸಿದ್ದ ಸೋಕೊ ತಂಡ ಸಾಕ್ಷಿ ಕಲೆ ಹಾಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದರು.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; ನಾಗಸಂದ್ರ ಟು ಮಾದಾವರ ಮೆಟ್ರೋ ಟ್ರಯಲ್ ರನ್ ಆರಂಭ

ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು ಆತನ ಸಾವಿಗೆ ನಿಖರ ಕಾರಣ ಏನು ಅನ್ನೋದನ್ನ ಪತ್ತೆ ಮಾಡುತ್ತಿದ್ದಾರೆ. ಆತ್ಮಹತ್ಯೆಗೆ ಹಣಕಾಸಿನ ಸಮಸ್ಯೆ ಕಾರಣನಾ ಅಥವಾ ಕೌಟುಂಬಿಕ ಕಲಹನಾ ಅನ್ನೋದು ತನಿಖೆಯಿಂದ ಗೊತ್ತಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ