AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಮತ್ತೊಂದು ಅವಘಡ: ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋದಿಂದ ಇಳಿಯುವಾಗ ಓರ್ವ ಪ್ರಯಾಣಿಕ ಆಯತಪ್ಪಿ ಬಿದ್ದಿದ್ದು, ಭದ್ರತಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಇಂದು ಮಧ್ಯಾಹ್ನ 1.13ರ ಸುಮಾರಿಗೆ ಹಸಿರು ಮಾರ್ಗದಲ್ಲಿ ನಡೆದಿದೆ. ಅವಘಡ ಹಿನ್ನಲೆ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತವಾಗಿತ್ತು.

ನಮ್ಮ ಮೆಟ್ರೋದಲ್ಲಿ ಮತ್ತೊಂದು ಅವಘಡ: ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರು
ನಮ್ಮ ಮೆಟ್ರೋನಲ್ಲಿ ಮತ್ತೊಂದು ಅವಘಡ: ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರು
Kiran Surya
| Edited By: |

Updated on: Aug 19, 2024 | 6:48 PM

Share

ಬೆಂಗಳೂರು, ಆಗಸ್ಟ್​ 19: ಮೆಟ್ರೋದಿಂದ (Metro) ಇಳಿಯುವಾಗ ಆಯತಪ್ಪಿ ರೈಲು ಹಳಿಗೆ ಬಿದ್ದ ವ್ಯಕ್ತಿ ಅದೃಷ್ಟವಶಾತ್ ಬಚಾವ್​ ಆಗಿರುವಂತಹ ಘಟನೆ ಮಧ್ಯಾಹ್ನ 1.13ರ ಸುಮಾರಿಗೆ ನಗರದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ನಡೆದಿದೆ. ಭದ್ರತಾ ಸಿಬ್ಬಂದಿ ತಕ್ಷಣ ಎಮರ್ಜೆನ್ಸಿ ಬಟನ್ ಉಪಯೋಗಿಸಿದ್ದರಿಂದ ಪ್ರಯಾಣಿಕ ಬಚಾವ್​ ಆಗಿದ್ದಾರೆ. ಘಟನೆಯಿಂದಾಗಿ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತವಾಗಿತ್ತು.

ಮೆಟ್ರೊ ಟ್ರ್ಯಾಕ್​ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಆಗಸ್ಟ್ 3 ರ ಸಂಜೆ 6 ಗಂಟೆಯ ಸಮಯದಲ್ಲಿ ದೊಡ್ಡಕಲ್ಲಸಂದ್ರ ಮೆಟ್ರೊ ಹಸಿರು ಮಾರ್ಗದ ನಿಲ್ದಾಣಕ್ಕೆ ಆಗಮಿಸಿದ್ದ 57 ವರ್ಷದ ಪಶ್ಚಿಮ ಬಂಗಾಳ ಮೂಲದ ನವೀನ್ ಅರೋರ ಎಂಬಾತ, ಪ್ರಯಾಣಿಕರಂತೆ ಮೆಟ್ರೊ ನಿಲ್ದಾಣದಲ್ಲಿ ನಿಂತಿದ್ದ. ಆದರೆ ಮೆಟ್ರೊ ಆಗಮಿಸ್ತಿದ್ದಂತೆ ಹಳಿ ಮೇಲೆ ಜಂಪ್ ಮಾಡಿದ್ದ. ಅಷ್ಟೇ ಮೆಟ್ರೋ ರೈಲಿನ ಎರಡು ಬೋಗಿ ಆತನ ಮೇಲೆಯೇ ಹರಿದಿ ಪರಿಣಾಮ ದೇಹ ಛಿದ್ರ ಛಿದ್ರವಾಗಿ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ.

ಇದನ್ನೂ ಓದಿ: ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ: ಈ ದಿನಗಳಂದು ಸಂಪೂರ್ಣ ಸ್ಥಗಿತ

ಹಸಿರು ಮಾರ್ಗದಲ್ಲಿ ರೈಲು ಸಂಚಾರ ಎರಡೂವರೆ ಗಂಟೆಗಳ ಕಾಲ ಬಂದ್ ಆಗಿತ್ತು. ಇದರಿಂದ ಮೆಟ್ರೊ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಚಾರ ಗೊತ್ತಾಗ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ಕೋಣನಕುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದರು. ಸ್ಥಳಕ್ಕಾಗಮಿಸಿದ್ದ ಸೋಕೊ ತಂಡ ಸಾಕ್ಷಿ ಕಲೆ ಹಾಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದರು.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; ನಾಗಸಂದ್ರ ಟು ಮಾದಾವರ ಮೆಟ್ರೋ ಟ್ರಯಲ್ ರನ್ ಆರಂಭ

ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು ಆತನ ಸಾವಿಗೆ ನಿಖರ ಕಾರಣ ಏನು ಅನ್ನೋದನ್ನ ಪತ್ತೆ ಮಾಡುತ್ತಿದ್ದಾರೆ. ಆತ್ಮಹತ್ಯೆಗೆ ಹಣಕಾಸಿನ ಸಮಸ್ಯೆ ಕಾರಣನಾ ಅಥವಾ ಕೌಟುಂಬಿಕ ಕಲಹನಾ ಅನ್ನೋದು ತನಿಖೆಯಿಂದ ಗೊತ್ತಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್