AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಮತ್ತೊಂದು ಅವಘಡ: ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋದಿಂದ ಇಳಿಯುವಾಗ ಓರ್ವ ಪ್ರಯಾಣಿಕ ಆಯತಪ್ಪಿ ಬಿದ್ದಿದ್ದು, ಭದ್ರತಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಇಂದು ಮಧ್ಯಾಹ್ನ 1.13ರ ಸುಮಾರಿಗೆ ಹಸಿರು ಮಾರ್ಗದಲ್ಲಿ ನಡೆದಿದೆ. ಅವಘಡ ಹಿನ್ನಲೆ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತವಾಗಿತ್ತು.

ನಮ್ಮ ಮೆಟ್ರೋದಲ್ಲಿ ಮತ್ತೊಂದು ಅವಘಡ: ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರು
ನಮ್ಮ ಮೆಟ್ರೋನಲ್ಲಿ ಮತ್ತೊಂದು ಅವಘಡ: ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರು
ಕಿರಣ್​ ಸೂರ್ಯ
| Edited By: |

Updated on: Aug 19, 2024 | 6:48 PM

Share

ಬೆಂಗಳೂರು, ಆಗಸ್ಟ್​ 19: ಮೆಟ್ರೋದಿಂದ (Metro) ಇಳಿಯುವಾಗ ಆಯತಪ್ಪಿ ರೈಲು ಹಳಿಗೆ ಬಿದ್ದ ವ್ಯಕ್ತಿ ಅದೃಷ್ಟವಶಾತ್ ಬಚಾವ್​ ಆಗಿರುವಂತಹ ಘಟನೆ ಮಧ್ಯಾಹ್ನ 1.13ರ ಸುಮಾರಿಗೆ ನಗರದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ನಡೆದಿದೆ. ಭದ್ರತಾ ಸಿಬ್ಬಂದಿ ತಕ್ಷಣ ಎಮರ್ಜೆನ್ಸಿ ಬಟನ್ ಉಪಯೋಗಿಸಿದ್ದರಿಂದ ಪ್ರಯಾಣಿಕ ಬಚಾವ್​ ಆಗಿದ್ದಾರೆ. ಘಟನೆಯಿಂದಾಗಿ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತವಾಗಿತ್ತು.

ಮೆಟ್ರೊ ಟ್ರ್ಯಾಕ್​ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಆಗಸ್ಟ್ 3 ರ ಸಂಜೆ 6 ಗಂಟೆಯ ಸಮಯದಲ್ಲಿ ದೊಡ್ಡಕಲ್ಲಸಂದ್ರ ಮೆಟ್ರೊ ಹಸಿರು ಮಾರ್ಗದ ನಿಲ್ದಾಣಕ್ಕೆ ಆಗಮಿಸಿದ್ದ 57 ವರ್ಷದ ಪಶ್ಚಿಮ ಬಂಗಾಳ ಮೂಲದ ನವೀನ್ ಅರೋರ ಎಂಬಾತ, ಪ್ರಯಾಣಿಕರಂತೆ ಮೆಟ್ರೊ ನಿಲ್ದಾಣದಲ್ಲಿ ನಿಂತಿದ್ದ. ಆದರೆ ಮೆಟ್ರೊ ಆಗಮಿಸ್ತಿದ್ದಂತೆ ಹಳಿ ಮೇಲೆ ಜಂಪ್ ಮಾಡಿದ್ದ. ಅಷ್ಟೇ ಮೆಟ್ರೋ ರೈಲಿನ ಎರಡು ಬೋಗಿ ಆತನ ಮೇಲೆಯೇ ಹರಿದಿ ಪರಿಣಾಮ ದೇಹ ಛಿದ್ರ ಛಿದ್ರವಾಗಿ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ.

ಇದನ್ನೂ ಓದಿ: ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ: ಈ ದಿನಗಳಂದು ಸಂಪೂರ್ಣ ಸ್ಥಗಿತ

ಹಸಿರು ಮಾರ್ಗದಲ್ಲಿ ರೈಲು ಸಂಚಾರ ಎರಡೂವರೆ ಗಂಟೆಗಳ ಕಾಲ ಬಂದ್ ಆಗಿತ್ತು. ಇದರಿಂದ ಮೆಟ್ರೊ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಚಾರ ಗೊತ್ತಾಗ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ಕೋಣನಕುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದರು. ಸ್ಥಳಕ್ಕಾಗಮಿಸಿದ್ದ ಸೋಕೊ ತಂಡ ಸಾಕ್ಷಿ ಕಲೆ ಹಾಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದರು.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; ನಾಗಸಂದ್ರ ಟು ಮಾದಾವರ ಮೆಟ್ರೋ ಟ್ರಯಲ್ ರನ್ ಆರಂಭ

ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು ಆತನ ಸಾವಿಗೆ ನಿಖರ ಕಾರಣ ಏನು ಅನ್ನೋದನ್ನ ಪತ್ತೆ ಮಾಡುತ್ತಿದ್ದಾರೆ. ಆತ್ಮಹತ್ಯೆಗೆ ಹಣಕಾಸಿನ ಸಮಸ್ಯೆ ಕಾರಣನಾ ಅಥವಾ ಕೌಟುಂಬಿಕ ಕಲಹನಾ ಅನ್ನೋದು ತನಿಖೆಯಿಂದ ಗೊತ್ತಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್