ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎನ್ನಲಾಗುತ್ತಿದೆ.  

ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ
ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 14, 2024 | 5:17 PM

ರಾಯಚೂರು, ಅಕ್ಟೋಬರ್​ 14: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎನ್ನಲಾಗುತ್ತಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದಾನೆ. ಸ್ಥಳಕ್ಕೆ ಸಿರವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ-ಮಗಳು ಕೊಚ್ಚಿ ಹೋಗಿದ್ದ ಕೇಸ್​: ಇಂದು ಮಗಳ ಶವ ಪತ್ತೆ

ರಾಯಚೂರು ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ನಿನ್ನೆ ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ ಸುಜಾತಾ (27), ಮಗಳು ಶ್ರಾವಣಿ (10) ಕೊಚ್ಚಿ ಹೋಗಿದ್ದು, ಇಂದು ಕಾಲುವೆಯಲ್ಲಿ ಶ್ರಾವಣಿ ಶವ ಪತ್ತೆ ಆಗಿದೆ.

ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಹಿಂದಿನ ಅಸಲಿ ಕಾರಣ ಬಹಿರಂಗ

ನಿನ್ನೆ ಅಗ್ನಿಶಾಮಕ ದಳ ಹಾಗೂ ಪೊಲೀಸರ ಕಾರ್ಯಾಚರಣೆ ವೇಳೆ ತಾಯಿ ಸುಜಾತಾ ಶವ ಪತ್ತೆಯಾಗಿತ್ತು. ಇಂದು ಮಗಳು ಶ್ರಾವಣಿ ಮೃತದೇಹ ಪತ್ತೆ ಆಗಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನಿತ್ಯ ಬಟ್ಟೆ ತೊಳೆಯಲು ತಾಯಿ-ಮಗಳು ಹೋಗುತ್ತಿದ್ದರು. ಈ ವೇಳೆ ಕಾಲು ಜಾರಿ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದರು.  ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಟ್ಟಡದ ಮೇಲಿಂದ ಆಯತಪ್ಪಿ‌ ಬಿದ್ದು ಕಾರ್ಮಿಕ ಸಾವು

ಕೋಲಾರ: ಕಟ್ಟಡದ ಮೇಲಿಂದ ಆಯತಪ್ಪಿ‌ ಬಿದ್ದು ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಬಂಗಾರಪೇಟೆಯ ಕರ್ನಾಟಕ ರಾಜ್ಯದ ಉಗ್ರಾಣ‌ ನಿಗಮದ ಕಟ್ಟಡದಲ್ಲಿ ನಡೆದಿದೆ. ಕೆಜಿಎಫ್​ನ ಮಾದಮಂಗಲ ನಿವಾಸಿ ನಾರಾಯಣಸ್ವಾಮಿ(35) ಮೃತ ವ್ಯಕ್ತಿ.

ಉಗ್ರಾಣದ ಕಟ್ಟಡ ದುರಸ್ತಿ ಕಾರ್ಯ ವೇಳೆ ದುರಂತ ಸಂಭವಿಸಿದೆ. ಶೀಟ್​​ಗಳನ್ನು ಬದಲಾಯಿಸುವ ಕೆಲಸವನ್ನು ನಾರಾಯಣಸ್ವಾಮಿ ಮಾಡುತ್ತಿದ್ದ. ಶೀಟ್ ಮುರಿದು ಕೆಳಗೆ ಬಿದ್ದು ನಾರಾಯಣಸ್ವಾಮಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:57 pm, Mon, 14 October 24

ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್
ಹೆಬ್ಬಾಳದಲ್ಲಿ ಪ್ರತಿನಿತ್ಯ ಆಗುವ ಟ್ರಾಫಿಕ್ ಜಾಮ್​ಗಳಿಗೆ ಕೊನೆ ಯಾವತ್ತು?
ಹೆಬ್ಬಾಳದಲ್ಲಿ ಪ್ರತಿನಿತ್ಯ ಆಗುವ ಟ್ರಾಫಿಕ್ ಜಾಮ್​ಗಳಿಗೆ ಕೊನೆ ಯಾವತ್ತು?
ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!