AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎನ್ನಲಾಗುತ್ತಿದೆ.  

ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ
ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ
ಭೀಮೇಶ್​​ ಪೂಜಾರ್
| Edited By: |

Updated on:Oct 14, 2024 | 5:17 PM

Share

ರಾಯಚೂರು, ಅಕ್ಟೋಬರ್​ 14: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎನ್ನಲಾಗುತ್ತಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದಾನೆ. ಸ್ಥಳಕ್ಕೆ ಸಿರವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ-ಮಗಳು ಕೊಚ್ಚಿ ಹೋಗಿದ್ದ ಕೇಸ್​: ಇಂದು ಮಗಳ ಶವ ಪತ್ತೆ

ರಾಯಚೂರು ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ನಿನ್ನೆ ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ ಸುಜಾತಾ (27), ಮಗಳು ಶ್ರಾವಣಿ (10) ಕೊಚ್ಚಿ ಹೋಗಿದ್ದು, ಇಂದು ಕಾಲುವೆಯಲ್ಲಿ ಶ್ರಾವಣಿ ಶವ ಪತ್ತೆ ಆಗಿದೆ.

ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಹಿಂದಿನ ಅಸಲಿ ಕಾರಣ ಬಹಿರಂಗ

ನಿನ್ನೆ ಅಗ್ನಿಶಾಮಕ ದಳ ಹಾಗೂ ಪೊಲೀಸರ ಕಾರ್ಯಾಚರಣೆ ವೇಳೆ ತಾಯಿ ಸುಜಾತಾ ಶವ ಪತ್ತೆಯಾಗಿತ್ತು. ಇಂದು ಮಗಳು ಶ್ರಾವಣಿ ಮೃತದೇಹ ಪತ್ತೆ ಆಗಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನಿತ್ಯ ಬಟ್ಟೆ ತೊಳೆಯಲು ತಾಯಿ-ಮಗಳು ಹೋಗುತ್ತಿದ್ದರು. ಈ ವೇಳೆ ಕಾಲು ಜಾರಿ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದರು.  ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಟ್ಟಡದ ಮೇಲಿಂದ ಆಯತಪ್ಪಿ‌ ಬಿದ್ದು ಕಾರ್ಮಿಕ ಸಾವು

ಕೋಲಾರ: ಕಟ್ಟಡದ ಮೇಲಿಂದ ಆಯತಪ್ಪಿ‌ ಬಿದ್ದು ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಬಂಗಾರಪೇಟೆಯ ಕರ್ನಾಟಕ ರಾಜ್ಯದ ಉಗ್ರಾಣ‌ ನಿಗಮದ ಕಟ್ಟಡದಲ್ಲಿ ನಡೆದಿದೆ. ಕೆಜಿಎಫ್​ನ ಮಾದಮಂಗಲ ನಿವಾಸಿ ನಾರಾಯಣಸ್ವಾಮಿ(35) ಮೃತ ವ್ಯಕ್ತಿ.

ಉಗ್ರಾಣದ ಕಟ್ಟಡ ದುರಸ್ತಿ ಕಾರ್ಯ ವೇಳೆ ದುರಂತ ಸಂಭವಿಸಿದೆ. ಶೀಟ್​​ಗಳನ್ನು ಬದಲಾಯಿಸುವ ಕೆಲಸವನ್ನು ನಾರಾಯಣಸ್ವಾಮಿ ಮಾಡುತ್ತಿದ್ದ. ಶೀಟ್ ಮುರಿದು ಕೆಳಗೆ ಬಿದ್ದು ನಾರಾಯಣಸ್ವಾಮಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:57 pm, Mon, 14 October 24

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ