AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರ್ಮಕಾಂಡ ಬೆನ್ನಲ್ಲೇ ಅಧೀಕ್ಷಕರ ಎತ್ತಂಗಡಿ: ಹೊಸಬರ ನೇಮಕ

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿಗೆ ಹೊಸ ಮುಖ್ಯ‌ ಅಧೀಕ್ಷಕರಾಗಿ ಅಂಶುಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಅಧೀಕ್ಷಕರಾಗಿದ್ದ ಕೆ. ಸುರೇಶ್‌ರನ್ನು ವರ್ಗಾವಣೆಗೊಳಿಸಿ, ಆ ಸ್ಥಾನಕ್ಕೆ ಅಂಶುಕುಮಾರ್‌ರನ್ನು ನಿಯೋಜಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರ್ಮಕಾಂಡ ಬೆನ್ನಲ್ಲೇ ಅಧೀಕ್ಷಕರ ಎತ್ತಂಗಡಿ: ಹೊಸಬರ ನೇಮಕ
ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲು
ಹರೀಶ್ ಜಿ.ಆರ್​.
| Edited By: |

Updated on:Nov 28, 2025 | 8:54 PM

Share

ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಜೈಲು (Parappana Agrahara jail) ಅನ್ನೋದು ಐಷಾರಾಮಿ ಸೌಲಭ್ಯಗಳ ತಾಣವಾಗಿದೆ. ಇಲ್ಲಿನ ಹೈಫೈ ಲೈಫ್‌ನ ವಿಡಿಯೋಗಳು ದಿನಕ್ಕೊಂದರಂತೆ ರಿವೀಲ್ ಆಗುತ್ತಿವೆ. ಅಷ್ಟೇ ಅಲ್ಲದೆ ಜೈಲಿನ ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಇದರ ಬೆನ್ನಲ್ಲೇ ಇದೀಗ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿಗೆ ಮುಖ್ಯ‌ ಅಧೀಕ್ಷರಾಗಿ ಅಂಶುಕುಮಾರ್ (Anshu Kumar) ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯ ಅಧೀಕ್ಷಕ ಸುರೇಶ್‌ರನ್ನ ವರ್ಗಾವಣೆ ಮಾಡಿರುವ ಸರ್ಕಾರ, ಆ ಜಾಗಕ್ಕೆ ಐಪಿಎಸ್ ಅಧಿಕಾರಿಗಳನ್ನು ನೇಮಕ ಮಾಡುವುದಾಗಿ ತಿಳಿತ್ತು. ಇದೀಗ ಹೊಸ ಮುಖ್ಯ‌ ಅಧೀಕ್ಷರ ನೇಮಕವಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಂಶುಕುಮಾರ್​ರನ್ನು ನೇಮಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಜೈಲುಗಳ ಸುರಕ್ಷತೆ ವಿಚಾರದಲ್ಲಿ SOP ಅನುಷ್ಠಾನ ಮಾಡಿ: ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಶೊಭಾ ಕರಂದ್ಲಾಜೆ ಪತ್ರ

ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಇಂದು ಕಾರಾಗೃಹ ಇಲಾಖೆ ಎಡಿಜಿಪಿ ಬಿ. ದಯಾನಂದ್‌ ಅನುಪಸ್ಥಿತಿಯಲ್ಲೇ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ಮಾಡಿದ್ದರು. ವೈರಲ್ ಆಗಿರುವ ಫೋಟೋ, ವಿಡಿಯೋಗಳನ್ನೇ ತೋರಿಸಿ ಜೈಲು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದರು. ಅಷ್ಟೇ ಅಲ್ಲ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರನ್ನ ಸಸ್ಪೆಂಡ್‌ ಮಾಡಲಾಗಿದೆ.

ಇದನ್ನೂ ಓದಿ: ಜೈಲಲ್ಲಿ ಎಣ್ಣೆ ಪಾರ್ಟಿ ಕೇಸ್​ಗೆ ಸ್ಫೋಟಕ ಟ್ವಿಸ್ಟ್​: ಬಾಟಲಿಯಲ್ಲಿ ಇದ್ದಿದ್ದು ಮದ್ಯವಲ್ಲ, ಮೂತ್ರ?

ಕಾರಾಗೃಹ ಮುಖ್ಯ ಅಧೀಕ್ಷಕ ಸುರೇಶ್‌ರನ್ನ ತಕ್ಷಣಕ್ಕೆ ಎತ್ತಂಗಡಿ ಮಾಡಿರುವ ಸರ್ಕಾರ, ಕಾರಾಗೃಹ ಸೂಪರಿಂಟೆಂಡೆಂಟ್ ಇಮಾಮ್‌ಸಾಬ್‌ ಮ್ಯಾಗೇರಿ ಮತ್ತು ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿಯನ್ನ ಸಸ್ಪೆಂಡ್ ಮಾಡಲಾಗಿದೆ.

ಹೈಫೈ ಸೌಲಭ್ಯದ ವಿಡಿಯೋ ವೈರಲ್‌: ನಾಲ್ಕು ಕೇಸ್‌!

ಜೈಲಿನಲ್ಲಿ ಕೈದಿಗಳ ಡ್ಯಾನ್ಸ್ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ 3 NCR, 1 ಎಫ್ಐಆರ್ ದಾಖಲಾಗಿದೆ. ಸದ್ಯ ಸಸ್ಪೆಂಡ್ ಆಗಿರುವ ಜೈಲಿನ ಅಧೀಕ್ಷಕ ಇಮಾಮ್‌ಸಾಬ್‌ ಮ್ಯಾಗೇರಿ, ಅಮಾನತಿಗೂ ಮುನ್ನ ನೀಡಿದ ದೂರಿನ ಅನ್ವಯ ಎಫ್​ಐಆರ್​​ ದಾಖಲಾಗಿದೆ. ಸಜಾ ಕೈದಿ ಪ್ಯಾಟ್ರಿಕ್ ಟೀಂನಿಂದಲೇ ಮೋಜುಮಸ್ತಿ ನಡೆದಿದ್ದು, ಪ್ಯಾಟ್ರಿಕ್‌ ಟೀಂ ವಿರುದ್ಧ ಕೇಸ್‌ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:33 pm, Mon, 10 November 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ