AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ, ಬೀಳಗಿ, ಹೊಳಲ್ಕೆರೆಯಲ್ಲಿ ಎಸಿಬಿ ದಾಳಿ: ಬಲೆಗೆ ಬಿದ್ದರು ಮೂವರು ಭ್ರಷ್ಟರು

ಬೆಳಗಾವಿ, ಬೀಳಗಿ ಮತ್ತು ಹೊಳಲ್ಕೆರೆ ಪಟ್ಟಣಗಳಲ್ಲಿ ಗುರುವಾರ (ಮಾರ್ಚ್ 18) ಭ್ರಷ್ಟಾಚಾರ ನಿಗ್ರಹ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಭ್ರಷ್ಟರನ್ನು ಬಲೆಗೆ ಕೆಡವಿದ್ದಾರೆ. ದಾಳಿ ವೇಳೆ ಲಕ್ಷಾಂತರ ರೂಪಾಯಿ ಅಕ್ರಮ ಹಣ ಪತ್ತೆಯಾಗಿದೆ.

ಬೆಳಗಾವಿ, ಬೀಳಗಿ, ಹೊಳಲ್ಕೆರೆಯಲ್ಲಿ ಎಸಿಬಿ ದಾಳಿ: ಬಲೆಗೆ ಬಿದ್ದರು ಮೂವರು ಭ್ರಷ್ಟರು
ಸಾಂದರ್ಭಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 18, 2021 | 10:32 PM

Share

ಬೆಂಗಳೂರು: ಬೆಳಗಾವಿ, ಬೀಳಗಿ ಮತ್ತು ಹೊಳಲ್ಕೆರೆ ಪಟ್ಟಣಗಳಲ್ಲಿ ಗುರುವಾರ (ಮಾರ್ಚ್ 18) ಭ್ರಷ್ಟಾಚಾರ ನಿಗ್ರಹ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಭ್ರಷ್ಟರನ್ನು ಬಲೆಗೆ ಕೆಡವಿದ್ದಾರೆ. ದಾಳಿ ವೇಳೆ ಲಕ್ಷಾಂತರ ರೂಪಾಯಿ ಅಕ್ರಮ ಹಣ ಪತ್ತೆಯಾಗಿದೆ.

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್​ನ ಟೆಕ್ನಿಕಲ್​ ಜನರಲ್ ಮ್ಯಾನೇಜರ್​ ಸಿದ್ದನಾಯ್ಕ ಪ್ರಾಜೆಕ್ಟ್ ಮ್ಯಾನೇಜರ್ ಸಂಜೀವ್ ಕುಮಾರ್​ರಿಂದ ₹ 60,000 ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದರು. ಬೆಳಗಾವಿ ಸಿಟಿ ಬಸ್ ನಿಲ್ದಾಣದ ಕಾಮಗಾರಿ ಬಿಲ್​ ಮಂಜೂರು ಮಾಡಲು ಲಂಚ ಕೇಳಿದ್ದರು ಎನ್ನಲಾಗಿದೆ. ಮನೆಯಲ್ಲಿ ಲಂಚಪಡೆಯುವಾಗಲೇ ಎಸಿಬಿ ಕಾರ್ಯಾಚರಣೆ ನಡೆಸಿ, ಬಲೆಗೆ ಕೆಡವಿತು. ಮನೆಯಲ್ಲಿ ಶೋಧ ನಡೆಸಿದ ವೇಳೆ ₹ 23.56 ಲಕ್ಷ ಅಕ್ರಮ ಹಣ ಪತ್ತೆಯಾಗಿತ್ತು. ಎಸಿಬಿ ಎಸ್​ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ಕಾಱಚರಣೆ ನಡೆಯಿತು.

ಬಾಗಲಕೋಟೆ ಜಿಲ್ಲೆ ಬೀಳಗಿ ಪಟ್ಟಣದಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮದ (ಕೆಬಿಜೆಎನ್​ಎಲ್) ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಹುಸೇನ್ ಲಿಂಗನ್ನವರ್ ಎಸಿಬಿ ಬಲೆಗೆ ಬಿದ್ದರು. ತಾಲ್ಲೂಕಿನ ಗುಡದಿನ್ನಿಯಲ್ಲಿರುವ ಪುನರ್ವಸತಿ ಕೇಂದ್ರದ ನಿವೇಶನ ದಾಖಲೆಯಲ್ಲಿ ಮರೆಗುದ್ದಿ ಗ್ರಾಮದ ಹನುಮಂತ ಹಳ್ಳಿ ಅವರ ಹೆಸರು ಸೇರ್ಪಡೆ ಮಾಡಲು ಹುಸೇನ್ ಲಂಚ ಕೇಳಿದ್ದರು. ತಂದೆ ಮೃತಪಟ್ಟ ಬಳಿಕ ದಾಖಲೆಯಲ್ಲಿ ಹೆಸರು ಸೇರಿಸಲು ₹ 3000 ಲಂಚ ಕೇಳಿದ್ದರು. ಕಚೇರಿಯಲ್ಲೇ ಲಂಚ ಪಡೆಯುವಾಗ ಬಾಗಲಕೋಟೆ ಎಸಿಬಿ ಡಿವೈಎಸ್​ಪಿ ಸುರೇಶ್​ ರೆಡ್ಡಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣ ಪಂಚಾಯ್ತಿಯ ಆರೋಗ್ಯ ನಿರೀಕ್ಷಕ ಪರಮೇಶ್ವರಪ್ಪ ಅಂಗಡಿಯೊಂದಕ್ಕೆ ಪರವಾನಗಿ ನೀಡಲು ₹ 2 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದರು. ಹೊಳಲ್ಕೆರೆ ಪಟ್ಟಣದ ಖಾಸಗಿ ಬಸ್ ನಿಲ್ದಾಣ ಬಳಿ ವ್ಯಾಪಾರಿ ಸನತ್ ಅವರಿಂದ ಲಂಚ ಸ್ವೀಕರಿಸುತ್ತಿದ್ದಾಗ ಚಿತ್ರದುರ್ಗದ ಎಸಿಬಿ ಡಿವೈಎಸ್​ಪಿ ಬಸವರಾಜ್ ಕಾರ್ಯಾಚರಣೆ ನಡೆಸಿದರು.

ಇದನ್ನೂ ಓದಿ: ಸೇನಾ ನೇಮಕಾತಿಯಲ್ಲಿ ಭ್ರಷ್ಟಾಚಾರ: 23 ಆರೋಪಿಗಳಲ್ಲಿ 7 ಮಂದಿ ಸೇನಾಧಿಕಾರಿಗಳು

ಇದನ್ನೂ ಓದಿ: ಮುಜರಾಯಿ ಇಲಾಖೆಯಲ್ಲಿ ಬೃಹತ್ ಭ್ರಷ್ಟಾಚಾರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಭಾರಿ ಭ್ರಷ್ಟಾಚಾರದ ಆರೋಪ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ