Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ವಿವಿಧೆಡೆ ಎಸಿಬಿ ಕಾರ್ಯಾಚರಣೆ: ಭ್ರಷ್ಟಾಚಾರ ಆರೋಪದಡಿ ನಾಲ್ವರ ಬಂಧನ

ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಡೆಸುತ್ತಿದ್ದ ಸರ್ಕಾರಿ ನೌಕರರನ್ನು ಭ್ರಷ್ಟಾಚಾರ ನಿಗ್ರಹ ದಳದ ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ.

ಕರ್ನಾಟಕದ ವಿವಿಧೆಡೆ ಎಸಿಬಿ ಕಾರ್ಯಾಚರಣೆ: ಭ್ರಷ್ಟಾಚಾರ ಆರೋಪದಡಿ ನಾಲ್ವರ ಬಂಧನ
ಭ್ರಷ್ಟಾಚಾರ ನಿಗ್ರಹ ದಳ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 03, 2021 | 11:28 PM

ಬೆಂಗಳೂರು: ನಗರ ಸೇರದಂತೆ ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಡೆಸುತ್ತಿದ್ದ ಸರ್ಕಾರಿ ನೌಕರರನ್ನು ಭ್ರಷ್ಟಾಚಾರ ನಿಗ್ರಹ ದಳದ ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ. ಬೆಂಗಳೂರು ನಗರ, ಗೌರಿಬಿದನೂರು ಮತ್ತು ಶಿವಮೊಗ್ಗ ನಗರಗಳಲ್ಲಿ ಕಾರ್ಯಾಚರಣೆ ನಡೆದಿದೆ.

ನಿವೇಶನಕ್ಕೆ ಇ-ಖಾತೆ ಮಾಡಿಕೊಡಲು ₹13 ಸಾವಿರ ಲಂಚ ಕೇಳಿದ್ದ ಮುತ್ಸಂದ್ರ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ರಾಮಮೂರ್ತಿಯನ್ನು ಎಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿ, ಹಣ ಜಪ್ತಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಪಟ್ಟಣದಲ್ಲಿ ಆರೋಪಿಗಳನ್ನು ಬೆದರಿಸಿ ಹಣ ಪಡೆಯುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಎಸಿಬಿ ಬಂಧಿಸಿದೆ. ಗ್ರಾಮಾಂತರ ಠಾಣೆ ಕಾನ್​ಸ್ಟೆಬಲ್​ಗಳಾದ ಆನಂದ್​​, ಶ್ರೀನಾಥ್​​ ಎಸಿಬಿ ಬಲೆಗೆ ಬಿದ್ದವರು. ಪ್ರಕರಣವೊಂದರ ಆರೋಪಿಯನ್ನು ಬೆದರಿಸಿ ಮಧ್ಯವರ್ತಿಯ ಮೂಲಕ ₹ 2 ಲಕ್ಷಕ್ಕಾಗಿ ಬೇಡಿಕೆಯಿಟ್ಟಿದ್ದರು. ₹65,000 ಲಂಚ ಪಡೆಯುವಾಗ ಅವರು ಎಸಿಬಿ ಬಲೆಗೆ ಬಿದ್ದರು.

ಅರಣ್ಯ ಇಲಾಖೆ ಶಿವಮೊಗ್ಗ ಕಚೇರಿಯಲ್ಲಿ ಡಿಆರ್​ಎಫ್​ಒ ಆಗಿ ಕೆಲಸ ಮಾಡುತ್ತಿದ್ದ ವೀರೇಶ್ ಚಾರ್ಜ್​​ಶೀಟ್​ ಒಂದರಿಂದ ಹೆಸರು ಕೈಬಿಡಲು ₹ 7 ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದರು.

ಚಾರ್ಜ್​ಶೀಟ್​ನಲ್ಲಿ ಹೆಸರು ಕೈಬಿಡಲು ₹ 10 ಸಾವಿರ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಪೈಕಿ ₹ 7 ಸಾವಿರ ಪಡೆಯುವಾಗ ಬಂಧಿಸಲಾಯಿತು. ಹಣ ಜಪ್ತಿ ಮಾಡಿ ಡಿಆರ್​ಎಫ್​ಒ ವೀರೇಶ್ ಅವರನ್ನು ಬಂಧಿಸಲಾಯಿತು.

ಇಡಿ ಕಚೇರಿ ಸ್ಥಾಪನೆಗೆ ಅನುಮತಿ ಕರ್ನಾಟಕದಲ್ಲಿ ಜಾರಿ ನಿರ್ದೇಶನಾಲಯದ (Enforcement Directorate – ED) ಉಪ ವಲಯ ಕಚೇರಿಯನ್ನು ರಾಜ್ಯದಲ್ಲಿ ಸ್ಥಾಪಿಸಲು ಕೇಂದ್ರ ಸರ್ಕಾರವು ಅನುಮತಿ ನೀಡಿದೆ. ಮಂಗಳೂರಿನ ಕಂಕನಾಡಿಯಲ್ಲಿ ಕಚೇರಿ ಸ್ಥಾಪನೆಯಾಗಲಿದೆ. ಬೆಂಗಳೂರಿನ ಇಡಿ ಕಚೇರಿಯ ಉಸ್ತುವಾರಿಯಲ್ಲಿ ಕೆಲಸ ನಡೆಯಲಿದೆ. ಉಪ ನಿರ್ದೇಶಕರನ್ನು ಒಳಗೊಂಡ ಅಧಿಕಾರಿಗಳ ತಂಡ ಕಾಮಗಾರಿಯನ್ನು ಪರಿಶೀಲಿಸಲಿದೆ. 15 ಜಿಲ್ಲೆಗಳು ಉಪ ವಲಯ ಕಚೇರಿಯ ವ್ಯಾಪ್ತಿಗೆ ಬರಲಿವೆ.

(Anti Corruption Bureau Raids Across Karnataka Four Arrested)

ಇದನ್ನೂ ಓದಿ: ಜಮೀನಿನ ಬೌಂಡರಿ ಲೈನ್​ ಫಿಕ್ಸ್ ಮಾಡಲು 70 ಲಕ್ಷ ಲಂಚಕ್ಕೆ ಬೇಡಿಕೆ: ಎಸಿಬಿ ದಾಳಿ, ಹಿರಿಯ ರೆವೆನ್ಯೂ ಅಧಿಕಾರಿ ಅರೆಸ್ಟ್​

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ, ಕೋಟ್ಯಂತರ ರೂ. ಬೆಲೆಬಾಳುವ ಭವ್ಯ ಬಂಗಲೆ: ಇನ್ಸ್​ಪೆಕ್ಟರ್ ವಿಕ್ಟರ್ ಸೈಮನ್ ಲೆಕ್ಕದ ಪುಸ್ತಕ ಎಸಿಬಿಗೆ ಲಭ್ಯ

Published On - 11:27 pm, Fri, 3 September 21

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!