Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಜಿಲ್ಲೆಯಲ್ಲಿ ರೈತರ ಒಕ್ಕಲೆಬ್ಬಿಸುವಿಕೆ: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಸಂಸದರ ಪ್ರತಿಭಟನೆ

ಸಂಸದ ಮುನಿಸ್ವಾಮಿ ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಸಮಸ್ಯೆ ವಿವರಿಸಿದರು. ಇದೇ ವೇಳೆ, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ, ಬಡವರಿಗೆ ಅನ್ಯಾಯ ಮಾಡುವುದಿಲ್ಲ. ಜಂಟಿ ಸರ್ವೆ ಆಗುವವರೆಗೆ ತೆರವು ಕಾರ್ಯ ಸ್ಥಗಿತಗೊಳಿಸಲು ಸೂಚಿಸಿದ್ದೇನೆ ಎಂದು ಪ್ರತಿಭಟನಾನಿರತ ಬಿಜೆಪಿ ಸಂಸದರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ಕೋಲಾರ ಜಿಲ್ಲೆಯಲ್ಲಿ ರೈತರ ಒಕ್ಕಲೆಬ್ಬಿಸುವಿಕೆ: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಸಂಸದರ ಪ್ರತಿಭಟನೆ
ಕೋಲಾರ ಸಂಸದ ಮುನಿಸ್ವಾಮಿ (ಸಂಗ್ರಹ ಚಿತ್ರ)
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Oct 19, 2023 | 9:05 PM

ಬೆಂಗಳೂರು, ಅಕ್ಟೋಬರ್ 19: ಕೋಲಾರ ಜಿಲ್ಲೆಯ (Kolar) ಮುಳಬಾಗಿಲು, ಕೆಜಿಎಫ್, ಶ್ರೀನಿವಾಸಪುರದಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಸಂಸದರು (BJP MPs) ಗುರುವಾರ ಪ್ರತಿಭಟನೆ ನಡೆಸಿದರು. ಕೋಲಾರ ಸಂಸದ ಮುನಿಸ್ವಾಮಿ, ರಾಜ್ಯಸಭಾ ಸದಸ್ಯ ಕಡಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. ಇದೇ ವೇಳೆ ಸಂಸದರ ಜೊತೆ ಪ್ರತಿಭಟನೆಗೆ ಕುಳಿತಿದ್ದ ಬೆಂಬಲಿಗರನ್ನು ಪೊಲೀಸರು ಎಬ್ಬಿಸಿದರು. ನಂತರ ಸಂಸದರ ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆಗಮಿಸಿದರು.

ಸಂಸದ ಮುನಿಸ್ವಾಮಿ ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಸಮಸ್ಯೆ ವಿವರಿಸಿದರು. ಇದೇ ವೇಳೆ, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ, ಬಡವರಿಗೆ ಅನ್ಯಾಯ ಮಾಡುವುದಿಲ್ಲ. ಜಂಟಿ ಸರ್ವೆ ಆಗುವವರೆಗೆ ತೆರವು ಕಾರ್ಯ ಸ್ಥಗಿತಗೊಳಿಸಲು ಸೂಚಿಸಿದ್ದೇನೆ ಎಂದು ಪ್ರತಿಭಟನಾನಿರತ ಬಿಜೆಪಿ ಸಂಸದರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ಈ ಮಧ್ಯೆ, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಎದುರು ಸಂತ್ರಸ್ತ ವ್ಯಕ್ತಿ ಕಣ್ಣೀರಿಟ್ಟ ಘಟನೆಯೂ ನಡೆಯಿತು.

ಕೋಲಾರ ಜಿಲ್ಲೆ ಶ್ರೀನಿವಾಸಪುರದ ಹಲವು ಗ್ರಾಮಗಳಲ್ಲಿ ತಿಂಗಳ ಹಿಂದೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. 3 ದಿನಗಳಲ್ಲಿ 560 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲಾಗಿತ್ತು. ಸುಮಾರು 25 ಕ್ಕೂ ಹೆಚ್ಚು ಜೆಸಿಬಿಗಳ ಮೂಲಕ 200 ಕ್ಕೂ ಹೆಚ್ಚು ಪೊಲೀಸ್​ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯ ಭೂಮಿಯನ್ನು ವಶಕ್ಕೆ ಪಡೆದಿದ್ದರು.

ಮುನಿಸ್ವಾಮಿ ಸೇರಿ 20ಕ್ಕೂ ಹೆಚ್ಚು ಜನರ ವಿರುದ್ಧ ದಾಖಲಾಗಿತ್ತು ಪ್ರಕರಣ

ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಆರೋಪದಡಿ ಕೋಲಾರ ಸಂಸದ ಮುನಿಸ್ವಾಮಿ ಸೇರಿ ಸುಮಾರು 20ಕ್ಕೂ ಹೆಚ್ಚು ಜನರ ಮೇಲೆ ಸೆಪ್ಟೆಂಬರ್​ನಲ್ಲಿ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ವಿವಿದ ಸೆಕ್ಷನ್ ಅಡಿಯಲ್ಲಿ ಮೂರು ಪ್ರಕರಣ ದಾಖಲಾಗಿದ್ದವು.ಅರಣ್ಯ ಇಲಾಖೆ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ, ಜೀವ ಬೆದರಿಕೆ, ವಾಹನಗಳ ಮೇಲೆ ಕಲ್ಲು ತೂರಾಟ, ಅರಣ್ಯ ಇಲಾಖೆ ಅಧಿಕಾರಿಗಳ ಅವಾಚ್ಯ ಶಬ್ದಗಳಿಂದ ನಿಂದನೆ ಸೇರಿದಂತೆ ಕಾನೂನು ಸುವ್ಯವಸ್ಥೆ ದಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಕೋಲಾರ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ, MP ಮುನಿಸ್ವಾಮಿ ಸೇರಿ 20ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು

ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ರಾಜ್ಯದ ಹಲವೆಡೆ ಬಿಜೆಪಿ ನಾಯಕರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಮಧ್ಯೆ ಜಟಾಪಟಿ ನಡೆಯುತ್ತಿದೆ. ಒಂದೆಡೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಒತ್ತುವರಿ ತೆರವು ವಿಚಾರವಾಗಿ ಬಿಜೆಪಿ ಶಾಸಕ ಹರೀಶ್​ ಪೂಂಜಾ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಮಧ್ಯೆ ನಡೆದ ಜಟಾಪಟಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ರಾಜಕೀಯ ಆಯಾಮವನ್ನೂ ಪಡೆದುಕೊಂಡಿದೆ. ಮತ್ತೊಂದೆಡೆ ಕಲಬುರಗಿಯಲ್ಲಿ ಸಂಸದ ಉಮೇಶ್ ಜಾಧವ್ ಒತ್ತುವರಿ ತೆರವು ಕಾರ್ಯಾಚರಣೆ ವಿರುದ್ಧ, ಬಡ ಕಾರ್ಮಿಕರ ಪರವಾಗಿ ಆಹೋರಾತ್ರಿ ಧರಣಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​