AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru News: ತುಮಕೂರಿನಲ್ಲಿ ಮೌಢ್ಯಕ್ಕೆ 1 ತಿಂಗಳ ಹಸುಗೂಸು ಬಲಿ, ಮೂಢನಂಬಿಕೆಗೆ ಕೊನೆಯೆಂದು?

ತುಮಕೂರಿನ ಗೊಲ್ಲರಹಟ್ಟಿಯಲ್ಲಿ ಮೂಢನಂಬಿಕೆಯಲ್ಲಿ ಮುಳುಗಿದ್ದ ಕುಟುಂಬಸ್ಥವೊಂದು ಬಾಣಂತಿ, ಮಗುವನ್ನ ಊರ ಹೊರಗಿಟ್ಟಿತ್ತು. ಮಗುವಿಗೆ ವಿಪರೀತ ಶೀತವಾಗಿದ್ದು ಚಿಕಿತ್ಸೆ ಫಲಿಸದೆ 1 ತಿಂಗಳ ಕಂದಮ್ಮ ಮೃತಪಟ್ಟಿದೆ.

Tumakuru News: ತುಮಕೂರಿನಲ್ಲಿ ಮೌಢ್ಯಕ್ಕೆ 1 ತಿಂಗಳ ಹಸುಗೂಸು ಬಲಿ, ಮೂಢನಂಬಿಕೆಗೆ ಕೊನೆಯೆಂದು?
ಹಳೆಯ ಚಿತ್ರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jul 27, 2023 | 11:13 AM

Share

ತುಮಕೂರು, ಜುಲೈ 26: ಜಿಲ್ಲೆಯ ಗೊಲ್ಲರಹಟ್ಟಿಯಲ್ಲಿ ಮೂಢನಂಬಿಕೆಯಲ್ಲಿ( Superstition) ಮುಳುಗಿದ್ದ ಕುಟುಂಬಸ್ಥರಿಂದ ಬಾಣಂತಿ, ಮಗುವನ್ನ ಊರ ಹೊರಗಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿಪರೀತ ಶೀತದಿಂದ ಬಳಲಿ ಮಗು(Death) ಮೃತಪಟ್ಟಿದೆ. ತುಮಕೂರು ತಾಲೂಕಿನ ಮಲ್ಲೇನಹಳ್ಳಿ ವ್ಯಾಪ್ತಿಯ ಗೊಲ್ಲರಹಟ್ಟಿಯಲ್ಲಿ ಮೌಢ್ಯಕ್ಕೆ 1 ತಿಂಗಳ ಮಗು ಬಲಿಯಾಗಿದೆ. ದೇವರಿಗೆ ಸೂತಕ ಆಗುತ್ತೆ ಎಂದು ಬಾಣಂತಿ, ಮಗುವನ್ನು ಊರಿನ ಹೊರಗೆ ಗುಡಿಸಲಲ್ಲಿಟಲಾಗಿತ್ತು. ಮಗುವಿಗೆ ವಿಪರೀತ ಶೀತವಾಗಿದ್ದು ಮಗುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಸಂಜೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ. ಕುಟುಂಬಸ್ಥರ ಮೂಢನಂಬಿಕೆಗೆ 1 ತಿಂಗಳ ಕಂದಮ್ಮ ಸಾವನ್ನಪ್ಪಿದೆ.

ಘಟನೆ ಹಿನ್ನೆಲೆ

ಕಾಡುಗೊಲ್ಲ ಸಮುದಾಯದ ಸೂತಕದ ಸಂಪ್ರದಾಯ ಆಚರಣೆ ಈ ಕಾಲದಲ್ಲೂ ಮುಂದುವರೆದಿದೆ. ತುಮಕೂರು ತಾಲೂಕು ಮಲ್ಲೇನಹಳ್ಳಿ ಗೊಲ್ಲರಹಟ್ಟಿಯ ವಸಂತಾ ಅನ್ನೋ ಬಾಣಂತಿ ಹಾಗೂ ನವಜಾತ ಶಿಶುವನ್ನು ಊರಿನಿಂದ ಹೊರಗಿಟ್ಟು ಊರಾಚೆಯ ಜಮೀನಿನಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಸಿಲಿನಲ್ಲಿ ಏಕಾಂಗಿಯಾಗಿ ವಾಸ ಮಾಡುವಂತೆ ಕಟ್ಟಪ್ಪಣೆ ಮಾಡಿತ್ತು. ಸಂಪ್ರದಾಯದ ಹೆಸರಿನಲ್ಲಿ ತಾಯಿ, ಮಗುವಿನ ಜೀವಕ್ಕೆ ಕುತ್ತು ತರುವಂತಾ ಮೌಡ್ಯಾಚರಣೆ ಮಾಡಲಾಗಿತ್ತಿ. ಆದ್ರೆ ಈಗ ಮಗುವಿಗೆ ವಿಪರೀತ ಶಿತವಾಗಿ ಪುಟ್ಟ ಕಂದಮ್ಮ ಪ್ರಾಣ ಕಳೆದುಕೊಂಡಿದೆ. ತಾಯಿ ಒಡಲ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ತುಮಕೂರು: ಬಾಣಂತಿ ಊರಿನಿಂದ ಹೊರಗೆ, ಗೊಲ್ಲರಹಟ್ಟಿಯಲ್ಲಿ ಮೌಢ್ಯಾಚರಣೆ

ವಸಂತ ಎಂಬ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡುತ್ತಿದ್ದಂತೆಯೇ ಆಕೆಯ ಕುಟುಂಬಸ್ಥರು ಊರಾಚೆಗಿನ ಗುಡಿಸಿಲಿನಲ್ಲಿ ವಾಸಿಸುವಂತೆ ಅಪ್ಪಣ ಮಾಡಿದ್ದರು. ಅವರ ಮಾತನ್ನು ಮೀರದ ವಸಂತ ಈಗ ಕಂದಮ್ಮನನ್ನು ಕಳೆದುಕೊಂಡಿದ್ದಾರೆ. ವಸಂತ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅವಳಿ‌ ಶಿಶುವಿಗೆ ಜನ್ಮ ನೀಡಿದ್ದರು. ಹೆರಿಗೆ ಸಂದರ್ಭದಲ್ಲಿ ಗಂಡು‌ ಮಗು ಸಾವನ್ನಪ್ಪಿದ್ದು, ಹೆಣ್ಣು ಮಗು ಆರೋಗ್ಯವಂತವಾಗಿತ್ತು. ಹೆರಿಗೆ ಮುಗಿಸಿ ವಾಪಸ್ ಬಂದ ವಸಂತ ಮನೆಗೆ ತೆರಳದೇ ಊರು ಹೊರಗಿನ ಗುಡಿಸಲಿನಲ್ಲಿ ತನ್ನ ಚೊಚ್ಚಲ ಬಾಣಂತನ ಆರಂಭಿಸಿದ್ದರು. ನಮ್ಮ ದೇವರಿಗೆ ಸೂತಕ ಆಗಲ್ಲ ಹಾಗಾಗಿ ನಾವು ಒಳಗೆ ಬಿಟ್ಟುಕೊಳ್ಳುವುದಿಲ್ಲ, ಸೂತಕದ ಬಾಣಂತಿ ಊರಿಗೆ ಬಂದರೆ ಕೇಡು. ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಆಗಲ್ಲ, ಹಿಂದಿನಿಂದಲೂ ಈ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದ್ದರು. ಈ ಬಗ್ಗೆ ಟಿವಿ9 ಈ ಹಿಂದೆ ವರದಿ ಮಾಡಿತ್ತು.

ಆದರೆ ಈಗ ಈ ಮೂಢನಂಬಿಕೆಗೆ ಜಗತ್ತು ಕಾಣದ ಮಗು ಕಣ್ಣುಮುಚ್ಚಿದೆ. ತನ್ನ ಇಬ್ಬರೂ ಮಕ್ಕಳನ್ನು ಕಳೆದುಕೊಂಡ ತಾಯಿ ಕಣ್ನೀರಲ್ಲಿ ಕೈಗೊಳೆಯುತ್ತಿದ್ದಾರೆ. ಈಗಲಾದರೂ ಮೂಢನಂಬಿಕೆಯ ಭೂತ ದೂರವಾಗಬೇಕು. ಬಾಲಕಿಯರು ಋತುಮತಿಯಾದಾಗ,ಮಹಿಳೆಯರ ಮಾಸಿಕ ಋತುಚಕ್ರ ಮತ್ತು ಹೆರಿಗೆ ಸಂದರ್ಭದಲ್ಲಿ ನಿರ್ದಿಷ್ಟ ದಿನಗಳವರೆಗೆ ಗ್ರಾಮದಿಂದ ಹೊರಗೆ ಗುಡಿಸಲಿನಲ್ಲಿ ಇರುವ ಪದ್ಧತಿ ಬುಡಕಟ್ಟು ಸಂಪ್ರದಾಯ ಪಾಲಿಸುವ ಗೊಲ್ಲ ಸಮುದಾಯದಲ್ಲಿ ಬಹಳ ಹಿಂದಿನಿಂದಲ್ಲೂ ನಡೆದುಕೊಂಡು ಬಂದಿದೆ. ಈ ಪದ್ಧತಿ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇನ್ನಾದರೂ ಜನ ಬದಲಾಗಬೇಕು.

ಮಗು ಸಾವಾದರೂ ಬಾಣಂತಿಯನ್ನ ಊರೊಳಗೆ ಬಿಟ್ಟುಕೊಳ್ಳದ ಗ್ರಾಮಸ್ಥರು

ಗೊಲ್ಲ ಸಮುದಾಯದ ಮೈಲಿಗೆ ಸಂಪ್ರದಾಯಕ್ಕೆ ಮಗು ಬಲಿಯಾಗಿದ್ದು ಬಾಣಂತಿಯನ್ನ ಊರೊಳಗೆ ಬಿಟ್ಟುಕೊಳ್ಳಲು ಗ್ರಾಮಸ್ಥರು ನಿರಾಕರಿಸಿದ್ದಾರೆ. ಹೀಗಾಗಿ ಮಲ್ಲೇನಹಳ್ಳಿ ಗೊಲ್ಲರಹಟ್ಟಿಗೆ ತುಮಕೂರು ತಹಶೀಲ್ದಾರ್ ಸಿದ್ದೇಶ್ ಭೇಟಿ ನೀಡಿದ್ದಾರೆ. ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮನವೊಲಿಸಲು ಯತ್ನಿಸುತ್ತಿದ್ದಾರೆ. ಜೊತೆಗೆ ಮಲ್ಲೇನಹಳ್ಳಿ ಗೊಲ್ಲರಹಟ್ಟಿಗೆ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿದೆ. ಆರ್ ಸಿಎಚ್ ಮೋಹನ್, ಟಿಎಚ್ಓ ಲಕ್ಷ್ಮೀಕಾಂತ್ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತುಮಕೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:31 pm, Wed, 26 July 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ