AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ನವ ಸರ್ಕಾರದ ನಿರಾಸಕ್ತಿ, ನಾಡಿನ ಶ್ರೀಮಂತ ರಂಗ ಸಂಸ್ಕೃತಿ ಅವನತಿ? ರಂಗ ಚಟುವಟಿಕೆ ಇಲ್ಲದೇ ಭಣಗುಡುತ್ತಿದೆ ಧಾರವಾಡ ರಂಗಾಯಣ

Dharwad Rangayana: ನಾಡಿನ ರಂಗ ಸಂಸ್ಕೃತಿ ಶ್ರೀಮಂತಗೊಳಿಸಲು 12 ವರ್ಷ ಹಿಂದೆ ಶುರುವಾದ ಧಾರವಾಡ ರಂಗಾಯಣಕ್ಕೆ ಅನುದಾನದ ಕೊರತೆ ಕಾಡುತ್ತಿದೆ. ಚುನಾವಣೆ ನಂತರ ಹೊಸ ಸರ್ಕಾರ ಬಂದಾಗಿನಿಂದ ಈವರೆಗೂ ನೂತನ ನಿರ್ದೇಶಕರ ನೇಮಕವಾಗಿಲ್ಲ. ಅನುದಾನ ಇಲ್ಲದೆ ಐದು ತಿಂಗಳಿಂದ ಯಾವುದೇ ರಂಗ ಚಟುವಟಿಕೆ ಇಲ್ಲದೇ ರಂಗಾಯಣ ಭಣಗುಡುತ್ತಿದೆ.

Siddaramaiah: ನವ ಸರ್ಕಾರದ ನಿರಾಸಕ್ತಿ, ನಾಡಿನ ಶ್ರೀಮಂತ ರಂಗ ಸಂಸ್ಕೃತಿ ಅವನತಿ? ರಂಗ ಚಟುವಟಿಕೆ ಇಲ್ಲದೇ ಭಣಗುಡುತ್ತಿದೆ ಧಾರವಾಡ ರಂಗಾಯಣ
ನಾಡಿನ ಶ್ರೀಮಂತ ರಂಗ ಸಂಸ್ಕೃತಿ ಅವನತಿ? ರಂಗ ಚಟುವಟಿಕೆ ಇಲ್ಲದೇ ಭಣಗುಡುತ್ತಿದೆ ಧಾರವಾಡ ರಂಗಾಯಣ!
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Sep 25, 2023 | 12:42 PM

Share

ನಾಡಿನ ರಂಗ ಸಂಸ್ಕೃತಿ ಶ್ರೀಮಂತಗೊಳಿಸಲು 12 ವರ್ಷಗಳ ಹಿಂದೆ ಶುರುವಾದ ಧಾರವಾಡ ರಂಗಾಯಣಕ್ಕೆ ಇದೀಗ ಅನುದಾನದ ಕೊರತೆ ತೀವ್ರವಾಗಿ ಕಾಡುತ್ತಿದೆ. ಕಳೆದ ಐದು ತಿಂಗಳಿನಿಂದ ರಂಗಾಯಣ ತನ್ನ ರಂಗ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ. ವಿಧಾನಸಭಾ ಚುನಾವಣೆ ನಂತರ ಹೊಸ ಸರ್ಕಾರ ಬಂದಾಗಿನಿಂದ ಈವರೆಗೂ ನೂತನ ನಿರ್ದೇಶಕರ ನೇಮಕವಾಗಿಲ್ಲ. ಜೊತೆಗೆ ನಯಾ ಪೈಸಾ ಅನುದಾನವೂ ಇಲ್ಲದ ಹಿನ್ನೆಲೆಯಲ್ಲಿ ಐದು ತಿಂಗಳಿಂದ ಯಾವುದೇ ರಂಗ ಚಟುವಟಿಕೆಗಳು ಇಲ್ಲದೇ ರಂಗಾಯಣದ ಆವರಣ ಭಣಗುಡುತ್ತಿದೆ.

ಹಿರಿಯ ರಂಗ ಚೇತನ ಬಿ. ಎ. ಕಾರಂತರ ಕನಸಿನ ಕೂಸಾಗಿ ಮೈಸೂರು ರಂಗಾಯಣ ಆರಂಭವಾಯಿತು. ಅದರ ಭಾಗವಾಗಿ ಧಾರವಾಡದಲ್ಲಿ 2006ರಲ್ಲಿ ರಂಗಾಯಣ ಶುರುವಾದರೂ 2011ರಲ್ಲಿ ಸ್ವಾಯತ್ತತೆ ಪಡೆಯಿತು. ನಟರಾಜ ಏಣಗಿ ಪ್ರಥಮ ನಿರ್ದೇಶಕರಾಗಿ ರಂಗಾಟ ಶುರು ಮಾಡಿದ ಧಾರವಾಡ ರಂಗಾಯಣವು ಚಿಣ್ಣರ ಮೇಳ, ಯುವ ರಂಗೋತ್ಸವ, ನವರಾತ್ರಿ ರಂಗೋತ್ಸವ, ರಂಗಧ್ವನಿ ರಾಷ್ಟ್ರೀಯ ರಂಗಸಂಗೀತ ಕಾರ್ಯಾಗಾರ ಸೇರಿದಂತೆ ಹತ್ತು ಹಲವು ನಾಟಕಗಳನ್ನು ಹೊರ ತಂದಿದೆ.

ಜೊತೆಗೆ 50ಕ್ಕೂ ಹೆಚ್ಚು ರೆಪರ್ಟರಿ ಕಲಾವಿದರು ರಂಗಾಯಣದಿಂದ ಹೊರ ಬ೦ದಿದ್ದಾರೆ. ಇಂಥ ರಂಗಾಯಣದ ನಿರ್ದೇಶಕರಾಗಿದ್ದ ರಮೇಶ ಪರವೀನಾಯ್ಕರ್ ಸಮಯದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮಳ ಜೀವನ ಆಧಾರಿತ ಚೆನ್ನಮ್ಮ ನಾಟಕವೇ ರಂಗಾಯಣದ ಕೊನೆಯ ನಾಟಕ. ಅಲ್ಲಿಂದ ಯಾವುದೇ ಕಾರ್ಯಕ್ರಮ, ನಾಟಕದ ಸಿದ್ಧತೆಗಳೂ ನಡೆದಿಲ್ಲ. ಪ್ರತಿ ವರ್ಷ ಅಕ್ಟೋಬರ್‌ ತಿ೦ಗಳಲ್ಲಿ ದಸರಾ ನಿಮಿತ್ತ ನವರಾತ್ರಿ ರಂಗೋತ್ಸವ ನಡೆಯುತ್ತಿತ್ತು. ಇದೀಗ ಅದು ಕನಸು ಮಾತ್ರ.

ಆರಂಭದಲ್ಲಿ ಪ್ರತಿ ವರ್ಷ ಒಂದು ಕೋಟಿ ಅನುದಾನ ಪಡೆಯುತ್ತಿದ್ದ ಧಾರವಾಡ ರಂಗಾಯಣಕ್ಕೆ ನಿಧಾನವಾಗಿ ರೂ. 75 ಲಕ್ಷ, ರೂ. 50 ಲಕ್ಷದಿಂದ ಇದೀಗ ಕಳೆದ ಬಾರಿ ರೂ. 40 ಲಕ್ಷ ಅನುದಾನ ಬಂದಿದ್ದು, ಈ ವರ್ಷವಂತೂ ಅನುದಾನವೇ ಇಲ್ಲದಾಗಿದೆ. ಬೇಸರದ ಸಂಗತಿ ಏನೆಂದರೆ, ಕಳೆದ ಮೂರು ತಿಂಗಳಿಂದ ಸಿಬ್ಬಂದಿ ಹಾಗೂ ರೆಪರ್ಟರಿ ಕಲಾವಿದರಿಗೆ ಸಂಬಂಳವೇ ಬಂದಿಲ್ಲ. ಇನ್ನೂ ವಿಚಿತ್ರವೆಂದರೆ, ಕಳೆದ ಒಂದು ವರ್ಷದಿಂದ ಆಡಳಿತಾಧಿಕಾರಿಗೂ ಸಂಬಳ ಬಂದಿಲ್ಲ.

ಇದನ್ನೂ ಓದಿ: ಮಂಗಳೂರಿನಲ್ಲಿ ಕ್ರೈಸ್ತ ಧರ್ಮೀಯರ ಜೊತೆ ಸಾಮರಸ್ಯಕ್ಕೆ ಅಡಿಪಾಯ ಹಾಕಿದೆ RSS

ಹೀಗಾಗಿ, ರಂಗಾಯಣ ಬೇರೆ ಬೇರೆ ಸಂಘ-ಸಂಸ್ಥೆಗಳ ಕಾರ್ಯಕ್ರಮಗಳಿಗೆ ಸಭಾಭವನ ಬಾಡಿಗೆ ನೀಡುವ ಸಂಸ್ಥೆಯಾಗಿದ್ದು, ಬಾಡಿಗೆ ನೀಡಿದ್ದಕ್ಕೆ ಅವರ ಬ್ಯಾನರ್‌ನಲ್ಲಿ ರಂಗಾಯಣದ ಸಹಕಾರ ಎಂದು ಹೆಸರು ಹಾಕಿಕೊಳ್ಳುವ ಸ್ಥಿತಿಗೆ ಬಂದಿದೆ. ಇನ್ನು ಸರಕಾರ ರಂಗಾಯಣ ಮಾತ್ರವಲ್ಲದೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನೂ ಸರ್ಕಾರ ಕಡೆಗಣಿಸಿದೆ. ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳು, ರಂಗ ಕಾರ್ಯಕ್ರಮಗಳು ಎಲ್ಲಿಯೂ ನಡೆಯುತ್ತಿಲ್ಲ. ಹೀಗಾಗಿ ಕೂಡಲೇ ಸರಕಾರ ಇತ್ತ ಗಮನ ಹರಿಸಬೇಕು ಅನ್ನೋದು ರಂಗಾಸಕ್ತರ ಆಗ್ರಹ.

ಸದ್ಯಕ್ಕೆ ರಂಗಾಯಣದಲ್ಲಿ ಯಾವುಏ ಚಟುವಟಿಕೆ ನಡೆಯುತ್ತಿಲ್ಲವಾದ್ದರಿಂದ ರೆಪರ್ಟರಿ ಕಲಾವಿದರು, ಸಿಬ್ಬಂದಿ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ. ಹೀಗಾಗಿ ಸರಕಾರ ಕೂಡಲೇ ರಂಗಾಯಣ ಮತ್ತೆ ಕ್ರಿಯಾಶೀಲವಾಗಲು ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕಿದೆ. ಒಟ್ಟಿನಲ್ಲಿ ನಾಡಿನ ರಂಗ ಕಲೆಗೆ ಶಕ್ತಿ ತುಂಬಲು ಆರಂಭವಾದ ರಂಗಾಯಣಗಳ ಬಗ್ಗೆ ಸರಕಾರ ಇಷ್ಟೊಂದು ನಿರ್ಲಕ್ಷವಹಿಸುತ್ತಿರೋದು ವಿಪರ್ಯಾಸದ ಸಂಗತಿಯೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Mon, 25 September 23

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ