AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಚಿಕಿತ್ಸೆ ಉಚಿತವಿದ್ರೂ.. ಬಿಲ್ ಕೊಟ್ಟು ಕೈ ಸುಟ್ಟುಕೊಂಡ ಅಪೋಲೊ: ಆಸ್ಪತ್ರೆ ನೀಡಿದ ಪರಿಹಾರದ ಮೊತ್ತ ಎಷ್ಟು ಗೊತ್ತಾ?

ಪಾಲಿಕೆ ಕಮಿಷನರ್ ಸೂಚನೆ ಮೇರೆಗೆ ಬಿಬಿಎಂಪಿ ಕೋಟಾದಲ್ಲಿ ಕೊರೊನಾಗೆ ಚಿಕಿತ್ಸೆ ಪಡೆದ ರೋಗಿಗೆ ಅಪೋಲೊ ಆಸ್ಪತ್ರೆ ಬಿಲ್ ನೀಡಿ ದಂಡ ಪಾವತಿಸುವಂತಾಗಿದೆ.

ಕೊರೊನಾ ಚಿಕಿತ್ಸೆ ಉಚಿತವಿದ್ರೂ.. ಬಿಲ್ ಕೊಟ್ಟು ಕೈ ಸುಟ್ಟುಕೊಂಡ ಅಪೋಲೊ: ಆಸ್ಪತ್ರೆ ನೀಡಿದ ಪರಿಹಾರದ ಮೊತ್ತ ಎಷ್ಟು ಗೊತ್ತಾ?
ಮಾನವ ಹಕ್ಕುಗಳ ಹೋರಾಟಗಾರ ನರಸಿಂಹ ಮೂರ್ತಿ
ಆಯೇಷಾ ಬಾನು
|

Updated on:Dec 20, 2020 | 12:31 PM

Share

ಬೆಂಗಳೂರು: ಮಹಾಮಾರಿ ಕೊರೊನಾಗೆ ಚಿಕಿತ್ಸೆ ನೀಡಿ ಹಣ ಪಡೆಯುವ ಖಾಸಗಿ ಆಸ್ಪತ್ರೆಗಳು ಇನ್ನುಮುಂದೆ ಬಹಳ ಎಚ್ಚರಿಕೆಯಿಂದಿರ ಬೇಕು. ಆಸ್ಪತ್ರೆಯ ಮಾನ ಹರಾಜಾಗಿ ದಂಡವೂ ಕಟ್ಟಬೇಕಾಗುತ್ತೆ. ಇದೇ ರೀತಿ ಇಲ್ಲಿ ರೋಗಿಯೊಬ್ಬರು ಕೊರೊನಾಗೆ ಚಿಕಿತ್ಸೆ ನೀಡಿ ಹಣ ವಸೂಲಿ ಮಾಡಿದ್ದ ಖಾಸಗಿ ಆಸ್ಪತ್ರೆಗೆ ಬಿಸಿ ಮುಟ್ಟಿಸಿದ್ದಾರೆ. ಸೋಂಕಿತರ ಬಳಿ ಹಣ ಪೀಕೋ ಮನ್ನ ಎಚ್ಚರದಿಂದಿರಿ ಎಂಬ ಎಚ್ಚರಿಕೆ ಕೊಟ್ಟಿದ್ದಾರೆ. ಹಣದಾಸೆಗೆ ಖಾಸಗಿ ಆಸ್ಪತ್ರೆ ಮಾಡಿದ ಎಡವಟ್ಟಿನ ಸ್ಟೋರಿಯನ್ನು ಟಿವಿ9 ಬಿಚ್ಚಿಡ್ತಿದೆ.

ಹಣದಾಸೆಗೆ ಬಿದ್ದು ದಂಡ ಕಟ್ಟುವಂತಾಯ್ತು ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮಾನವ ಹಕ್ಕುಗಳ ಹೋರಾಟಗಾರ ನರಸಿಂಹ ಮೂರ್ತಿ ಅಕ್ಟೋಬರ್ 10 ರಂದು ಪಾಲಿಕೆ ಕಮಿಷನರ್ ಸೂಚನೆ ಮೇರೆಗೆ ಬಿಬಿಎಂಪಿ ಕೋಟಾದಲ್ಲಿ ನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿದ್ದರು. ಡಿಸ್ಚಾರ್ಜ್ ವೇಳೆ ನರಸಿಂಹ ಮೂರ್ತಿ ಅವರಿಗೆ ಅಪೋಲೊ ಆಸ್ಪತ್ರೆ 10 ಸಾವಿರ ಬಿಲ್ ಮಾಡಿದೆ. ಹಾಗೂ ಹಣ ಪಾವತಿಸುವಂತೆ ತಿಳಸಿದೆ. ಬಿಬಿಎಂಪಿ ಕೋಟಾದಿಂದ ದಾಖಲಾದ ಸೋಂಕಿತರಿಗೆ ಉಚಿತವಾಗಿ ಟ್ರೀಟ್ಮೆಂಟ್ ಕೊಡ್ಬೇಕು. ಆದರೆ ಅಪೋಲೊ ಆಸ್ಪತ್ರೆ 10 ಸಾವಿರ ಬಿಲ್ ಮಾಡಿದೆ.

ಹೀಗಾಗಿ ಕೊರೊನಾದಿಂದ ಗುಣಮುಖರಾಗಿರುವ ನರಸಿಂಹ ಮೂರ್ತಿ ಆಸ್ಪತ್ರೆಯ ವಿರುದ್ಧ ಪಾಲಿಕೆ, ಬೆಂಗಳೂರು ಪೊಲೀಸ್​ ಕಮಿಷನರ್ ಹಾಗೂ ರಾಜ್ಯಪಾಲ ವಜೂಭಾಯ್ ವಾಲಾಗೆ ದೂರು ನೀಡಿದ್ದಾರೆ. ದೂರು ನೀಡಿದ ಬಳಿಕ ಅಪೋಲೊ ಆಸ್ಪತ್ರೆ ನರಸಿಂಹ ಮೂರ್ತಿ ಅವರಿಗೆ ಕ್ಷಮಾಪಣೆ ಪತ್ರ ನೀಡಿ, ಕಟ್ಟಿಸಿಕೊಂಡಿದ್ದ 10 ಸಾವಿರದ ಜೊತೆಗೆ 1 ರೂಪಾಯಿಯನ್ನ ಪರಿಹಾರವಾಗಿ ನೀಡಿದೆ.

1ರೂವನ್ನು ಪರಿಹಾರವಾಗಿ ಕೇಳಿ ಪಡೆದ ನರಸಿಂಹ ಮೂರ್ತಿ ಇನ್ನು ಅಪೋಲೊ ಆಸ್ಪತ್ರೆ ಪರಿಹಾರವಾಗಿ ಕೇವಲ ಒಂದು ರೂಪಾಯಿಯನ್ನು ನರಸಿಂಹ ಮೂರ್ತಿ ಅವರು ಕೇಳಿ ಪಡೆದಿದ್ದಾರೆ. ಈ ಘಟನೆ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಪಾಠವಾಗಬೇಕಿದೆ. ಇನ್ನು ಮುಂದೆ ಪಾಲಿಕೆ ಕೋಟಾದಲ್ಲಿ ಕೊರೊನಾ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡಬಾರದು. ಮಾಡಿದ್ರೆ ಸರ್ಕಾರ ಕ್ರಮ ಕೈಗೊಳ್ಳುತ್ತೆ.

ಗಂಟೆಗಟ್ಟಲೆ ಗೇಟ್ ಮುಂದೆ ಕಾದ್ರೂ ದಾಖಲಿಸಿಕೊಂಡಿಲ್ಲ, ಅಪೋಲೋ ವಿರುದ್ಧ ನಟಿ ಗರಂ

Published On - 12:29 pm, Sun, 20 December 20

Follow Us
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!