AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly election: ದಕ್ಷಿಣ ಕನ್ನಡದಿಂದ ಕಣಕ್ಕಿಳಿಯಲಿದ್ದಾರೆ ಎಎಪಿಯ 3 ಅಭ್ಯರ್ಥಿಗಳು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಾರ್ಟಿ (ಎಎಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದಲೇ 3 ಅಭ್ಯರ್ಥಿಗಳು ಕಣಕ್ಕೆ ಇಳಿಸಿದೆ.

Karnataka Assembly election: ದಕ್ಷಿಣ ಕನ್ನಡದಿಂದ ಕಣಕ್ಕಿಳಿಯಲಿದ್ದಾರೆ ಎಎಪಿಯ 3 ಅಭ್ಯರ್ಥಿಗಳು
ಆಮ್​ ಆದ್ಮಿ ಪಕ್ಷದ ಚಿಹ್ನೆ
TV9 Web
| Edited By: ವಿವೇಕ ಬಿರಾದಾರ|

Updated on:Mar 22, 2023 | 3:30 PM

Share

ದಕ್ಷಿಣ ಕನ್ನಡ: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಆಮ್ ಆದ್ಮಿ ಪಾರ್ಟಿ (ಎಎಪಿ) (Aam Aadmi Party) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದಲೇ 3 ಅಭ್ಯರ್ಥಿಗಳು ಕಣಕ್ಕೆ ಇಳಿಸುತ್ತಿದೆ. ಮಂಗಳೂರು ನಗರ ದಕ್ಷಿಣ, ಮುಲ್ಕಿ-ಮೂಡಬಿದರೆ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ಮಂಗಳೂರು ನಗರ ದಕ್ಷಿಣ ದಿಂದ ಸಂತೋಷ್‌ ಕಾಮತ​​​, ಮುಲ್ಕಿ-ಮೂಡಬಿದರೆಯಿಂದ ವಿಜಯನಾಥ ವಿಠಲ ಶೆಟ್ಟಿ, ಸುಳ್ಯದಿಂದ ಸುಮನಾ ಸ್ಪರ್ಧಿಸುತ್ತಿದ್ದಾರೆ.

ಕರ್ನಾಟಕ ರಾಜಕೀಯದಲ್ಲೂ ಆಪ್​ ಎಂಟ್ರಿ ಕೊಟ್ಟಿದ್ದು, ಇತ್ತೀಚಿಗೆ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಈ ಬಗ್ಗೆ ದಕ್ಷಿಣ ಕನ್ನಡ ಆಮ್​ ಆದ್ಮಿ ಪಕ್ಷದ​ ಜಿಲ್ಲಾ ಘಟಕ ಅಧ್ಯಕ್ಷ ಅಶೋಕ್​ ಅಡಮಲೆ ಮಾತನಾಡಿ ದಕ್ಷಿಣ ಕನ್ನಡದಿಂದ ಮೂವರು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 224 ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ ಎಂದು ಹೇಳಿದರು. ಇನ್ನುಳಿದ 100 ಜನರ ಪಟ್ಟಿಯನ್ನು ಮಾರ್ಚ್​ 27 ರಂದು ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಎಎಪಿ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ ಸಿಗಲಿದೆ ಪ್ರತಿ ತಿಂಗಳು ಹಣ; ಪ್ರಣಾಳಿಕೆಯಲ್ಲಿ ಏನೇನಿದೆ ನೋಡಿ

ಇನ್ನು ನಟ ಟೆನಿಸ್​ ಕೃಷ್ಣ ಹಾಗೂ ಬ್ರಿಜೇಶ್ ಕಾಳಪ್ಪ ಆಮ್​ ಆದ್ಮಿ ಪಕ್ಷದಿಂದ ಚುನಾವಣೆ ಕಣಕ್ಕಿಳಿಯಲಿದ್ದಾರೆ. ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಯಶಸ್ಸು ಕಂಡ ನಂತರ ಎಎಪಿ ಕರ್ನಾಟಕ ರಾಜಕೀಯದಲ್ಲೂ ಕಮಾಲ್​ ಮಾಡಲು ಕಸರತ್ತು ನಡೆಸಿದೆ. ಇನ್ನು ಪ್ರಮುಖವಾಗಿ ಎಎಪಿ ಮೊದಲ ಪಟ್ಟಿಯಲ್ಲಿ 7 ರೈತರು, 7 ಮಹಿಳೆಯರು ಹಾಗೂ 5 ಸಾಮಾಜಿಕ ಕಾರ್ಯಕರ್ತರಿಗೆ ಟಿಕೆಟ್‌ ನೀಡಿದೆ. ಪ್ರಮುಖವಾಗಿ ಕಾಂಗ್ರೆಸ್​ನಿಂದ ಬಂದಿರುವ ಬ್ರಿಜೇಶ್ ಕಾಳಪ್ಪ ಚಿಕ್ಕಪೇಟೆಯಿಂದ ಕಣಕ್ಕಿಳಿಯಲಿದ್ದಾರೆ. ಹಾಗೇ ನಟ ಟೆನ್ನಿಸ್‌ ಕೃಷ್ಣ ತುರುವೇಕೆರೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Wed, 22 March 23

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್