AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಆದೇಶ ಪ್ರಶ್ನಿಸಿ ಮೇಲ್ಮನವಿ: ಹೈಕೋರ್ಟ್​ನಲ್ಲಿ ಭಾನುವಾರವೂ ನಡೆದ ವಿಶೇಷ ಕಲಾಪ

ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಪಡಿಸಿದ ಹಾಗೂ ಹೊಸ ಆಯ್ಕೆ ಪಟ್ಟಿ ಬಿಡುಗಡೆ ಮಾಡುವಂತೆ ಹೊರಡಿಸಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ರಜಾ ದಿನವಾದ ಭಾನುವಾರದಂದು ವಿಭಾಗೀಯ ಪೀಠದಲ್ಲಿ ವಿಶೇಷ ಕಲಾಪ ನಡೆಯಿತು.

ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಆದೇಶ ಪ್ರಶ್ನಿಸಿ ಮೇಲ್ಮನವಿ: ಹೈಕೋರ್ಟ್​ನಲ್ಲಿ ಭಾನುವಾರವೂ ನಡೆದ ವಿಶೇಷ ಕಲಾಪ
ಹೈಕೋರ್ಟ್​
Ramesha M
| Edited By: |

Updated on: Sep 03, 2023 | 5:27 PM

Share

ಬೆಂಗಳೂರು, ಸೆ.3: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ ಹೊಸ ಆಯ್ಕೆ ಪಟ್ಟಿ ಬಿಡುಗಡೆ ಮಾಡುವಂತೆ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಅಲ್ಲದೆ, ಪತಿಯ ಆದಾಯದ ಬದಲು ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಲು ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅದರಂತೆ, ರಜಾ ದಿನವಾದ ಭಾನುವಾರದಂದೂ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಶೇಷ ಕಲಾಪ ನಡೆಯಿತು.

ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಕಮಲ್​ ಅವರಿದ್ದ ಪೀಠದಲ್ಲಿ ಇಂದು ವಿಚಾರಣೆ ನಡೆಯಿತು. ಸೇವಾ ವಿವಾದಗಳಿಗೆ ಸಂಬಂಧಿಸಿದ ಪೀಠದಲ್ಲಿ ವಿಚಾರಣೆಯಾಗಿಲ್ಲ. ಹೀಗಾಗಿ ಏಕಸದಸ್ಯ ಪೀಠದ‌ ಆದೇಶ ರದ್ದುಪಡಿಸಲು ಅರ್ಜಿದಾರರು ಮನವಿ ಮಾಡಿದರು. ಸುದೀರ್ಘ ವಾದಮಂಡನೆ ನಂತರ ವಿಭಾಗೀಯ ಪೀಠವು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿಕೆ ಮಾಡಿತು.

ಇದನ್ನೂ ಓದಿ: ಜೆಡಿಎಸ್ MP ಪ್ರಜ್ವಲ್​ ರೇವಣ್ಣಗೆ ಬಿಗ್ ಶಾಕ್​​​, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ

ಹಿಂದುಳಿದ ವರ್ಗಕ್ಕೆ ಪರಿಗಣಿಸುವಾಗ ಪತಿಯ ಆದಾಯ ಆಧಾರವಾಗಿತ್ತು. ಮಹಿಳೆ ಆದಾಯ ಪ್ರಮಾಣಪತ್ರಕ್ಕೆ ಪತಿಯ ಆದಾಯ ಪರಿಗಣಿಸಲಾಗುತ್ತಿತ್ತು. ರಾಜ್ಯ ಸರ್ಕಾರದ ಈ ನೀತಿಯನ್ನು ಏಕಸದಸ್ಯ ಪೀಠ ಅಮಾನ್ಯಗೊಳಿಸಿತ್ತು. ಅಲ್ಲದೆ, ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಲು ಸೂಚಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ‌ ಇಲಾಖೆಗೆ ಸೂಚಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​