AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಆರೋಪಿಗಳಿಂದ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ

ಈ ಹಿನ್ನೆಲೆಯಲ್ಲಿ ಸದಾಶಿವನಗರ ಠಾಣೆ ಪೊಲೀಸರಿಗೆ ಕೋರ್ಟ್ ನೋಟಿಸ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ 29ಕ್ಕೆ ನಡೆಸುವುದಾಗಿ ತಿಳಿಸಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಆರೋಪಿಗಳಿಂದ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 24, 2021 | 10:05 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಸಿಡಿ ತಯಾರಿಸಿದ್ದಾರೆ ಎಂದು ಹೇಳಲಾದ ನರೇಶ್ ಗೌಡ ಹಾಗೂ ಶ್ರವಣ್‌ ಕೋರ್ಟ್ ಮೊರೆ ಹೋಗಿದ್ದಾರೆ. ಇಬ್ಬರು ಶಂಕಿತ ಆರೋಪಿಗಳು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ಕೋರ್ಟ್​ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸದಾಶಿವನಗರ ಠಾಣೆ ಪೊಲೀಸರಿಗೆ ಕೋರ್ಟ್ ನೋಟಿಸ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ 29ಕ್ಕೆ ನಡೆಸುವುದಾಗಿ ತಿಳಿಸಿದೆ. ಸಿಡಿ ಪ್ರಕರಣದಲ್ಲಿ ನನ್ನ ವಿರುದ್ಧ ಷಡ್ಯಂತ್ರ ಎಸಗಲಾಗಿದೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಆಪಾದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳಾದ ನರೇಶ್ ಮತ್ತು ಶ್ರವಣ್‌ ಅವರುಗಳು ತಲೆಮರಿಸಿಕೊಂಡಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಇವರಿಬ್ಬರಿಗಾಗಿ ಹುಡುಕಾಟ ನಡೆಸುತ್ತಿತ್ತು.

ಇದನ್ನೂ ಓದಿ: ನೀವು ಕೊವಿಡ್​ನಿಂದ ಈಗಷ್ಟೇ ಚೇತರಿಸಿಕೊಂಡಿದ್ದೀರಾ? ದೀರ್ಘಕಾಲ ಎಚ್ಚರಿಕೆಯಿಂದ ಇರಬೇಕು ಎನ್ನುತ್ತಾರೆ ಭಾರತದ ಟಾಪ್ ವೈದ್ಯರು

ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ

(Application for anticipatory bail from the accused in the Ramesh Jarkiholi CD case)