AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ನೀರಾವರಿಗೆ ಸೌರವಿದ್ಯುತ್‌ ಚಾಲಿತ ಪಂಪ್‌ ಅಳವಡಿಕೆ: ಕೆಜೆ ಜಾರ್ಜ್​

ಪ್ರಧಾನಮಂತ್ರಿ ಕುಸುಮ್‌ ಯೋಜನೆಯಡಿ ಕೃಷಿ ನೀರಾವರಿಗೆ ಸೌರವಿದ್ಯುತ್‌ ಚಾಲಿತ ಪಂಪ್‌ ಅಳವಡಿಕೆಗೆ ಟೆಂಡರ್‌ಗಳನ್ನು ಗುರುತಿಸಲಾಗಿದೆ. ಮೊಬೈಲ್‌ ಆ್ಯಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆಜೆ ಜಾರ್ಜ್​ ಹೇಳಿದರು.

ಕೃಷಿ ನೀರಾವರಿಗೆ ಸೌರವಿದ್ಯುತ್‌ ಚಾಲಿತ ಪಂಪ್‌ ಅಳವಡಿಕೆ: ಕೆಜೆ ಜಾರ್ಜ್​
ಸಚಿವ ಕೆಜೆ ಜಾರ್ಜ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 11, 2024 | 8:50 AM

Share

ಬೆಂಗಳೂರು, ಮಾರ್ಚ್​ 11: ಪ್ರಧಾನಮಂತ್ರಿ ಕುಸುಮ್‌ ಯೋಜನೆಯಡಿ ಕೃಷಿ ನೀರಾವರಿಗೆ ಸೌರವಿದ್ಯುತ್‌ (Solar Power) ಚಾಲಿತ ಪಂಪ್‌ ಅಳವಡಿಕೆಗೆ ಟೆಂಡರ್‌ಗಳನ್ನು ಗುರುತಿಸಲಾಗಿದೆ. ಮೊಬೈಲ್‌ ಆ್ಯಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ (KJ George) ಮಾತನಾಡಿ ಹೇಳಿದರು. ಬೆಂಗಳೂರು ಕೃಷಿ ವಿವಿ ಕ್ಯಾಂಪಸ್ ಜಿಕೆವಿಕೆಯಲ್ಲಿ ಇಂಧನ ಇಲಾಖೆ ಶನಿವಾರ ಆಯೋಜಿಸಿದ್ದ ‘ರೈತ ಸೌರಶಕ್ತಿ ಮೇಳ’ದ ಉದ್ಘಾಟನೆ, ‘ಕುಸುಮ್’ ಬಿ ಮತ್ತು ಸಿ ಯೋಜನೆ ಹಾಗೂ ಹೊಸ ವಿದ್ಯುತ್ ಉಪಕೇಂದ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್​ ಭಾಗಿಯಾಗಿದ್ದರು.

 60 ಸಾವಿರ ಮೆಗಾವ್ಯಾಟ್​ ವಿದ್ಯುತ್​​ ಉತ್ಪಾದನೆ: ಸಿದ್ದರಾಮಯ್ಯ

ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಉತ್ಪಾದನೆಯೂ ಹೆಚ್ಚಾಗಬೇಕು. ಮುಂದಿನ ಏಳು ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್​ ವಿದ್ಯುತ್ (Electricity) ​​ ಉತ್ಪಾದನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಪ್ರಸ್ತುತ, 32,000 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಶೇ63 ರಷ್ಟು ವಿದ್ಯುತ್ ಅನ್ನು ನವೀಕರಿಸಬಹುದಾದ ಶಕ್ತಿಯ ಮೂಲಕ ಉತ್ಪಾದಿಸಲಾಗುತ್ತಿದೆ. ಮತ್ತು ಉಳಿದವು ಸಾಂಪ್ರದಾಯಿಕ ಮೂಲಗಳಿಂದ ಉತ್ಪಾದಿಸಲಾಗುತ್ತದೆ.

ಇದನ್ನೂ ಓದಿ: Power Tariff: ಕರ್ನಾಟಕ ಜನತೆಗೆ ಕಾದಿದೆ ಕರೆಂಟ್‌ ಶಾಕ್‌, ಮತ್ತೆ ವಿದ್ಯುತ್‌ ದರ ಹೆಚ್ಚಳ ಸಾಧ್ಯತೆ

ರೈತರಿಗೆ ಮೂರು ಹಂತದಲ್ಲಿ ಏಳು ಗಂಟೆ ವಿದ್ಯುತ್ ನೀಡಲಾಗುತ್ತಿದೆ. ಕುಸುಮಾ ಬಿ ಮತ್ತು ಸಿ ಯೋಜನೆಗಳ ಅಡಿಯಲ್ಲಿ, ಸೋಲಾರ್ ವಿದ್ಯುತ್ ಪಂಪ್ ಸೆಟ್ ಮತ್ತು ಪ್ಯಾನಲ್​​ಗಳಿಗೆ ಸರ್ಕಾರ ಸಬ್ಸಿಡಿ ಮೊತ್ತವನ್ನು ಶೇ80ಕ್ಕೆ (ಕೇಂದ್ರದಿಂದ ಶೇ30 ಮತ್ತು ರಾಜ್ಯದಿಂದ ಶೇ50) ಹೆಚ್ಚಿಸಿದೆ. ರೈತರು ಸೌರ ಶಕ್ತಿ ಮೂಲಕ ವಿದ್ಯುತ್ ಉತ್ಪಾದಿಸಬಹುದಾಗಿದೆ. ಇದಕ್ಕಾಗಿ ರೈತರಿಗೆ ಸೋಲಾರ್​ ಮೋಟಾರ್, ಮೀಟರ್, ಫಲಕ ಮತ್ತು ತಂತಿಗಳನ್ನು ಒದಗಿಸಲಾಗುತ್ತದೆ. ಆದ್ದರಿಂದ ಈ ಬಗ್ಗೆ ರೈತರಿಗೆ ಹೆಚ್ಚೆಚ್ಚು ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದರು ಎಂದು ತಿಳಿಸಿದರು.

ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸಲಾಗುವುದು. ಯೋಜನೆಗಳ ಲಾಭಗಳನ್ನು ರೈತರು ಪಡೆದುಕೊಳ್ಳಬೇಕು. ಈ ಮೂಲಕ ಕೃಷಿ ಚಟುವಟಿಕೆಗಳನ್ನು ಹೆಚ್ಚಿಸಲಾಗುವುದು. ರಫ್ತು ಹೆಚ್ಚಿಸಲು ಸರ್ಕಾರ ರೈತರಿಗೆ ಸಹಾಯ ಮಾಡುತ್ತದೆ. ಕಳೆದ ದಶಕದಲ್ಲಿ ರೈತರ ಜಮೀನು ಹಿಡುವಳಿಗಳು ತೀವ್ರವಾಗಿ ಕಡಿಮೆಯಾಗಿದೆ. ಅದಕ್ಕಾಗಿಯೇ ಸಮಗ್ರ ಕೃಷಿ ಕೈಗೊಳ್ಳಲು ಸರಕಾರ ರೈತರನ್ನು ಪ್ರೋತ್ಸಾಹಿಸುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ