AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿ ಉಪನ್ಯಾಸಕರ ನೇಮಕ: ಜನವರಿ 27ರಿಂದ ಆನ್​​ಲೈನ್​​ ಕೌನ್ಸೆಲಿಂಗ್

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಒಟ್ಟು 10,636 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರ ನೇಮಕ: ಜನವರಿ 27ರಿಂದ ಆನ್​​ಲೈನ್​​ ಕೌನ್ಸೆಲಿಂಗ್
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jan 26, 2022 | 6:18 PM

Share

ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ (Guest Lecturer) ಹುದ್ದೆಗಳಿಗೆ ಜ.27ರಿಂದ (ಗುರುವಾರ) 30ರವರೆಗೆ ನಾಲ್ಕು ದಿನಗಳ ಕಾಲ ಆನ್​​ಲೈನ್ ಕೌನ್ಸೆಲಿಂಗ್ (Online Counseling) ನಡೆಯಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಒಟ್ಟು 10,636 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.  ಅಭ್ಯರ್ಥಿಗಳು ಜೇಷ್ಠತೆ ಆಧಾರದ ಮೇಲೆ ತಮಗೆ ಬೇಕಾದ ಕಾಲೇಜನ್ನು ಕೌನ್ಸೆಲಿಂಗ್​​ನಲ್ಲಿ ಆಯ್ಕೆ  ಮಾಡಿಕೊಳ್ಳಬಹುದು. ಬಳಿಕ ತಮ್ಮ ಕಚೇರಿಯಿಂದ ನೇಮಕಾತಿ ಆದೇಶ ನೀಡಲಾಗುತ್ತದೆ. ಅದರ ನಂತರದ ಎರಡು ದಿನಗಳಲ್ಲಿ ತಮಗೆ ಸೂಚಿಸಿದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ವರದಿ ಮಾಡಿಕೊಳ್ಳಬೇಕಾಗುತ್ತದೆ. ಆ ಸಂದರ್ಭದಲ್ಲಿ ಅವರು ಮೂಲ ದಾಖಲೆಗಳನ್ನು ಪರಿಶೀಲನೆಗೆ ಒಪ್ಪಿಸಿ, ಕರ್ತವ್ಯಕ್ಕೆ ಹಾಜರಾಗಬೇಕು. ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದರೆ ಅಂತಹವರನ್ನು ಕೈಬಿಡಲಾಗುವುದು ಎಂದು ಅವರು ಹೇಳಿದ್ದಾರೆ.  `ಒಟ್ಟು 47 ವಿಷಯಗಳಲ್ಲಿ ವಾರಕ್ಕೆ 15 ಗಂಟೆಗಳ ಬೋಧನೆಯ ಪೂರ್ಣ ಕಾರ್ಯಭಾರವಿರುವ 7,225 ಮತ್ತು ಭಾಗಶಃ ಕಾರ್ಯಭಾರವಿರುವ 3,411 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ಹುದ್ದೆಗಳಲ್ಲಿ ವಾಣಿಜ್ಯ ವಿಷಯವು 1,830, ಕನ್ನಡ 1,008, ಇತಿಹಾಸ 675, ಇಂಗ್ಲಿಷ್ 736, ಸಮಾಜಶಾಸ್ತ್ರ 526, ಅರ್ಥಶಾಸ್ತ್ರ 620, ಬಿಜೆನೆಸ್ ಮ್ಯಾನೇಜ್ಮೆಂಟ್ 490, ಕಂಪ್ಯೂಟರ್ ಸೈನ್ಸ್ 910, ಭೌತಶಾಸ್ತ್ರ 562, ರಾಜ್ಯಶಾಸ್ತ್ರ 602, ರಸಾಯನಶಾಸ್ತ್ರ 663, ಗಣಿತ 492, ಪ್ರಾಣಿಶಾಸ್ತ್ರ 198, ಸಸ್ಯಶಾಸ್ತ್ರ 212, ಮನೋವಿಜ್ಞಾನ 54, ಪರಿಸರ ವಿಜ್ಞಾನ 53, ಸಮಾಜಕಾರ್ಯ 80 ಮತ್ತು ಉರ್ದು 78 ಹುದ್ದೆಗಳನ್ನು ಹೊಂದಿವೆ ಎಂದು ಪ್ರದೀಪ್ ಮಾಹಿತಿ ನೀಡಿದ್ದಾರೆ.

ಆದ್ಯತೆ: ಈಗಾಗಲೇ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿರುವವರನ್ನು ಜ್ಯೇಷ್ಠತೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಕೌನ್ಸೆಲಿಂಗ್ ಬಳಿಕ ಎಲ್ಲರೂ ಹಾಜರಾಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದಯಾಮರಣ ಕೋರಿ ಹಾಸನದ 300ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಂದ ರಾಷ್ಟ್ರಪತಿ, ಸಿಎಂಗೆ ಪತ್ರ

ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ