AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ್ಕೊರೆತದಿಂದ ಮಂಗಳೂರು, ಉಡುಪಿಗೆ ಕಾದಿದೆ ಗಂಡಾಂತರ: 2040ಕ್ಕೆ ಶೇ 5ರಷ್ಟು ಭೂಮಿ ಸಮುದ್ರಪಾಲು

ಕರಾವಳಿ ಜಿಲ್ಲೆಗಳಲ್ಲಿ ಇತ್ತೀಚೆಗೆ ನೈಸರ್ಗಿಕ ವಿಕೋಪಗಳು ಹೆಚ್ಚಾಗಿವೆ. ಹವಾಮಾನ ಬದಲಾವಣೆ, ತಾಪಮಾನ ಏರುವಿಕೆಯಂಥ ಸಮಸ್ಯೆಗಳ ಪರಿಣಾಮ ಸಮುದ್ರ ತೀರದಲ್ಲಿರುವ ನಗರಗಳ ಮೇಲೆ ನೇರ ತಟ್ಟುತ್ತಿದೆ. ಕಡಲ್ಕೊರೆತ ಸಮಸ್ಯೆಯೂ ಇತ್ತೀಚೆಗೆ ಮಂಗಳೂರು, ಉಡುಪಿಯಲ್ಲಿ ಹೆಚ್ಚಾಗಿವೆ. ಇಂಥ ಹೊತ್ತಿನಲ್ಲೇ ಉಭಯ ನಗರಗಳ ಶೇ 5ರಷ್ಟು ಭೂಮಿ ಸಮುದ್ರಪಾಲಾಗಲಿದೆ ಎಂಬ ಆತಂಕಕಾರಿ ಅಧ್ಯಯನ ವರದಿ ಪ್ರಕಟವಾಗಿದೆ. ಆ ಕುರಿತ ವಿವರ ಇಲ್ಲಿದೆ.

ಕಡಲ್ಕೊರೆತದಿಂದ ಮಂಗಳೂರು, ಉಡುಪಿಗೆ ಕಾದಿದೆ ಗಂಡಾಂತರ: 2040ಕ್ಕೆ ಶೇ 5ರಷ್ಟು ಭೂಮಿ ಸಮುದ್ರಪಾಲು
ಕಡಲ್ಕೊರೆತ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Aug 01, 2024 | 12:58 PM

Share

ಬೆಂಗಳೂರು, ಆಗಸ್ಟ್ 1: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಕರಾವಳಿ ತೀರಗಳಲ್ಲಿ ಕಡಲ್ಕೊರೆತ ಸಮಸ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದೆ. ಆದರೆ, ಇತ್ತೀಚೆಗೆ ಆತಂಕಕಾರಿ ಅಧ್ಯಯನ ವರದಿಯೊಂದು ಪ್ರಕಟಗೊಂಡಿದ್ದು, 2040ರ ವೇಳೆಗೆ ಉಭಯ ನಗರಗಳ ಶೇ 5ರಷ್ಟು ಭೂಮಿ ಸಮುದ್ರ ಪಾಲಾಗಲಿದೆ ಎಂಬುದು ತಿಳಿದುಬಂದಿದೆ. ಬೆಂಗಳೂರು ಮೂಲದ ಥಿಂಕ್​ಟ್ಯಾಂಕ್ (ಚಿಂತಕರ ಚಾವಡಿ) ‘ಸೆಂಟರ್ ಫಾರ್ ಸ್ಟಡಿ ಆಫ್​​ ಸೈನ್ಸಸ್’ ವರದಿ ಪ್ರಕಟಿಸಿದ್ದು, ಮಂಗಳೂರಿನಲ್ಲಿ ಸಮುದ್ರ ಮಟ್ಟದಲ್ಲಿ 75.1 ಸೆಂಟಿ ಮೀಟರ್ ಹಾಗೂ ಉಡುಪಿಯಲ್ಲಿ ಸಮುದ್ರ ಮಟ್ಟದಲ್ಲಿ 75.2 ಸೆಂಟಿ ಮೀಟರ್ ಏರಿಕೆಯಾಗಲಿದೆ ಎಂದಿದೆ.

ಉಡುಪಿ, ಮಂಗಳೂರು ಮಾತ್ರವಲ್ಲದೆ ಕೊಚ್ಚಿ, ವಿಶಾಖಪಟ್ಟಣಂ ಮತ್ತು ಪುರಿಯಲ್ಲಿ ಶೇಕಡಾ 5 ರಷ್ಟು ಭೂಮಿಯನ್ನು ಸಮುದ್ರ ಆಪೋಶನ ತೆಗೆದುಕೊಳ್ಳಲಿದೆ ಎಂದು ವರದಿ ಉಲ್ಲೇಖಿಸಿದೆ.

ಭಾರತದ 15 ನಗರಗಳಿಗೆ ಅಪಾಯ

ಹವಾಮಾನ ಬದಲಾವಣೆ ಹಾಗೂ ಜಾಗತಿಕ ತಾಪಮಾನ ಇತ್ಯಾದಿ ಕಾರಣಗಳಿಂದ ಸಮುದ್ರ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಭಾರತದ 15 ನಗರಗಳು ಅಪಾಯ ಎದುರಿಸುತ್ತಿವೆ ಎಂದು ‘ಸೆಂಟರ್ ಫಾರ್ ಸ್ಟಡಿ ಆಫ್​​ ಸೈನ್ಸಸ್’ ಅಧ್ಯಯನ ವರದಿ ತಿಳಿಸಿದೆ. ಚೆನ್ನೈ, ಮುಂಬೈ, ತಿರುವನಂತಪುರಂ, ಕೊಚ್ಚಿ, ಮಂಗಳೂರು, ವಿಶಾಖಪಟ್ಟಣಂ, ಕೋಯಿಕ್ಕೋಡ್, ಹಲ್ದಿಯಾ, ಕನ್ಯಾಕುಮಾರಿ, ಪಣಜಿ, ಪುರಿ, ಉಡುಪಿ, ಪರದೀಪ್, ತೂತುಕುಡಿ ಮತ್ತು ಪದುಚೇರಿಯ ಯಾಣಂ ಅಪಾಯ ಎದುರಿಸುತ್ತಿವೆ ಎಂದು ‘ಸೀ ಲೆವೆಲ್ ರೈಸ್ ಸಿನಾರಿಯೋಸ್ ಆ್ಯಂಡ್ ಇಂಡ್ಯೂಷನ್ ಮ್ಯಾಪ್ಸ್ ಫಾರ್ ಸೆಲೆಕ್ಟೆಡ್ ಇಂಡಿಯನ್ ಸಿಟೀಸ್’ ಎಂಬ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ವಾಯುಭಾರ ಕುಸಿತದಿಂದ ಅರಬ್ಬೀ ಸಮುದ್ರದಲ್ಲಿ ರಕ್ಕಸ ಗಾತ್ರದ ಅಲೆಗಳಿಂದ ಕಡಲ್ಕೊರೆತ, ಜನರಲ್ಲಿ ಭೀತಿ

1987 ರಿಂದ 2021 ರವರೆಗೆ ಮುಂಬೈ ನಗರವು ಸಮುದ್ರ ಮಟ್ಟದಲ್ಲಿ ಗರಿಷ್ಠ ಏರಿಕೆಯನ್ನು ಕಂಡಿದೆ (4.440 ಸೆಂಮೀ). ನಂತರದ ಸ್ಥಾನಗಳಲ್ಲಿ ಹಲ್ದಿಯಾ (2.726 ಸೆಂಮೀ), ವಿಶಾಖಪಟ್ಟಣಂ (2.381 ಸೆಂಮೀ), ಕೊಚ್ಚಿ (2.213 ಸೆಂಮೀ), ಪರದೀಪ್ (0.717 ಸೆಂಮೀ), ಮತ್ತು ಚೆನ್ನೈ (0.679 ಸೆಂಮೀ) ಇವೆ ಎಂದು ಅಧ್ಯಯನವು ಬಹಿರಂಗಪಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!