AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೊದಲು ಜೈಲಿನಲ್ಲಿದ್ದವರು ಯಾರೂ ಗೃಹ ಸಚಿವರಾಗಿಲ್ಲ; ಬಂಧಿಖಾನೆ ಮಂಡಳಿ ವಿಧೇಯಕ ಚರ್ಚೆ ವೇಳೆ ಆರಗ ಜ್ಞಾನೇಂದ್ರ

Araga Jnanendra: ಬಂಧಿಖಾನೆ ಮಂಡಳಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. ಈ ವೇಳೆ, ಬಂಧಿಖಾನೆ ಮಂಡಳಿ ವಿಧೇಯಕದ ಮೇಲೆ ಚರ್ಚೆ ನಡೆದಿದೆ.

ಈ ಮೊದಲು ಜೈಲಿನಲ್ಲಿದ್ದವರು ಯಾರೂ ಗೃಹ ಸಚಿವರಾಗಿಲ್ಲ; ಬಂಧಿಖಾನೆ ಮಂಡಳಿ ವಿಧೇಯಕ ಚರ್ಚೆ ವೇಳೆ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Updated By: ganapathi bhat|

Updated on:Sep 17, 2021 | 5:46 PM

Share

ಬೆಂಗಳೂರು: ಈ ಹಿಂದೆ ಜೈಲಿನಲ್ಲಿದ್ದವರು ಯಾರೂ ಗೃಹ ಸಚಿವ‌ರಾಗಿಲ್ಲ. ನಾನು‌ 21 ದಿನಗಳ ಕಾಲ ಜೈಲಿನಲ್ಲಿದ್ದು ಬಂದಿದ್ದೇನೆ. ಹಾಗಂತ ನಾನು ಕ್ರಿಮಿನಲ್ ಕೆಲಸ ಮಾಡಿ ಜೈಲಿಗೆ ಹೋಗಿಲ್ಲ. ತುರ್ತು ಪರಿಸ್ಥಿತಿ ಸಮಯದಲ್ಲಿ ಜೈಲಿಗೆ ಹೋಗಿದ್ದೆ. ಹೀಗಾಗಿ ಬೇರೆ ಅರ್ಥ ಮಾಡಿಕೊಳ್ಳುವುದು ಬೇಡ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಬಂಧಿಖಾನೆ ಮಂಡಳಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. ಈ ವೇಳೆ, ಬಂಧಿಖಾನೆ ಮಂಡಳಿ ವಿಧೇಯಕದ ಮೇಲೆ ಚರ್ಚೆ ನಡೆದಿದೆ.

ಬಂಧಿಖಾನೆ ಮಂಡಳಿ ವಿಧೇಯಕ ಮೇಲೆ ಬಹಳಷ್ಟು ಚರ್ಚೆ ನಡೆದಿದೆ. ಈ ಸಂದರ್ಭ ಜೆಡಿಎಸ್ ಶಾಸಕ ಅನ್ನದಾನಿ ಮಾತನಾಡಿದ್ದಾರೆ. ಕಾರಾಗೃಹಗಳಲ್ಲಿ ಮೊಬೈಲ್ ಸೇರಿದಂತೆ ಎಲ್ಲವೂ ಸಿಗುತ್ತದೆ. ಟಿವಿ, ಪೇಪರ್, ಮದ್ಯ, ಸಿಗರೇಟ್, ಇಸ್ಪೀಟ್, ಡ್ರಗ್ಸ್ ಸೇರಿ ಎಲ್ಲವೂ ಕಾರಾಗೃಹಗಳಲ್ಲಿಯೇ ಸಿಗುತ್ತದೆ. ಕೆಲವರು ಸೇಫಾಗಿರಲು ಜೈಲಿಗೆ ಹೋಗುವ ಪರಿಸ್ಥಿತಿ ಇದೆ. ಜೈಲಿನಲ್ಲೇ ಕುಳಿತು ಹೊರಗೆ ಆಪರೇಟ್ ಮಾಡುತ್ತಾರೆ. ಮೊನ್ನೆ ಒಬ್ಬ ನನಗೆ ಜೈಲಿನಿಂದಲೇ ಕಾಲ್ ಮಾಡಿದ್ದ. ಸಣ್ಣ ಕೇಸ್‌ನಲ್ಲಿ ಜೈಲಿಗೆ ಹೋಗಿದ್ದವನು ಕರೆ ಮಾಡಿದ್ದ. ಸ್ವಲ್ಪ ಹಣ ಕಳಿಸು ಅಣ್ಣ ಎಂದು ನನಗೆ ಕರೆ ಮಾಡಿದ್ದ ಎಂದು ಹೇಳಿದ್ದಾರೆ.

ಜೈಲಿನಲ್ಲಿದ್ದ ಅವನಿಗೆ ಮೊಬೈಲ್ ಹೇಗೆ ಸಿಗುತ್ತೆ? ಜೈಲಿನಲ್ಲಿ ಎಲ್ಲಾ ವ್ಯವಸ್ಥೆ ಹಾಯಾಗಿ ಸಿಗೋದಾದರೆ ಪೊಲೀಸರ ಜತೆ ಮಾತಾಡಿಕೊಂಡು ಜೈಲಿಗೆ ಹೋಗ್ತಾರೆ ಎಂದು ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಅನ್ನದಾನಿ ಘಟನೆಯನ್ನು ನೆನಪಿಸಿಕೊಂಡು ಮಾತನಾಡಿದ್ದಾರೆ.

ಬಂಧಿಖಾನೆ ಮಂಡಳಿ ವಿಧೇಯಕ ಮೇಲೆ ಚರ್ಚೆ ವೇಳೆ ಶಾಸಕ ಶಿವಲಿಂಗೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಜೈಲಿನಲ್ಲಿ ಪ್ರತ್ಯೇಕವಾಗಿ ಅಪರಾಧಿಗಳನ್ನು ಇಡಿ. ರೌಡಿಗಳನ್ನು, ಕೊಲೆ ಮಾಡಿದವರನ್ನು ಪ್ರತ್ಯೇಕವಾಗಿ ಇಡಿ. ಇಲ್ಲದಿದ್ದರೆ ಇವರು ಬೇರೆಯವರನ್ನ ಆಳು ಮಾಡಿಕೊಳ್ತಾರೆ. ಅಲ್ಲಿಗೆ ಹೋದವರು ಕುಡಿಯೋದು ಕಲಿಯುತ್ತಾರೆ. ಜೈಲಿಗೆ ಹೋದವರು ಪರಿಶುದ್ಧರಾಗಿ ಹೊರಬರಬೇಕು. ಆದರೆ ಮತ್ತಷ್ಟು ದುಷ್ಟರಾಗಿ ಹೊರಬರುತ್ತಿದ್ದಾರೆ. ಕ್ರಿಮಿನಲ್​ಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿ. ಇಲ್ಲದಿದ್ರೆ ಮುಗ್ಧ ಅಪರಾಧಿಗಳು ಮತ್ತಷ್ಟು ಕೆಟ್ಟುಹೋಗ್ತಾರೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಇನ್ನು ಮುಂದೆ ಕರ್ನಾಟಕದಲ್ಲಿ ಅನ್​​ಲೈನ್ ಗ್ಯಾಂಬ್ಲಿಂಗ್, ಬೆಟ್ಟಿಂಗ್ ಅಪರಾಧ: ವಿಧಾನಸಭೆಯಲ್ಲಿ ಮಹತ್ವದ ವಿಧೇಯಕ ಮಂಡನೆ

ಇದನ್ನೂ ಓದಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿದ ಸಿದ್ದರಾಮಯ್ಯ; ಕಲಾಪದಲ್ಲಿ ಕಲಹ ಕೋಲಾಹಲ

Published On - 3:18 pm, Fri, 17 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ