Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೊದಲು ಜೈಲಿನಲ್ಲಿದ್ದವರು ಯಾರೂ ಗೃಹ ಸಚಿವರಾಗಿಲ್ಲ; ಬಂಧಿಖಾನೆ ಮಂಡಳಿ ವಿಧೇಯಕ ಚರ್ಚೆ ವೇಳೆ ಆರಗ ಜ್ಞಾನೇಂದ್ರ

Araga Jnanendra: ಬಂಧಿಖಾನೆ ಮಂಡಳಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. ಈ ವೇಳೆ, ಬಂಧಿಖಾನೆ ಮಂಡಳಿ ವಿಧೇಯಕದ ಮೇಲೆ ಚರ್ಚೆ ನಡೆದಿದೆ.

ಈ ಮೊದಲು ಜೈಲಿನಲ್ಲಿದ್ದವರು ಯಾರೂ ಗೃಹ ಸಚಿವರಾಗಿಲ್ಲ; ಬಂಧಿಖಾನೆ ಮಂಡಳಿ ವಿಧೇಯಕ ಚರ್ಚೆ ವೇಳೆ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: ganapathi bhat

Updated on:Sep 17, 2021 | 5:46 PM

ಬೆಂಗಳೂರು: ಈ ಹಿಂದೆ ಜೈಲಿನಲ್ಲಿದ್ದವರು ಯಾರೂ ಗೃಹ ಸಚಿವ‌ರಾಗಿಲ್ಲ. ನಾನು‌ 21 ದಿನಗಳ ಕಾಲ ಜೈಲಿನಲ್ಲಿದ್ದು ಬಂದಿದ್ದೇನೆ. ಹಾಗಂತ ನಾನು ಕ್ರಿಮಿನಲ್ ಕೆಲಸ ಮಾಡಿ ಜೈಲಿಗೆ ಹೋಗಿಲ್ಲ. ತುರ್ತು ಪರಿಸ್ಥಿತಿ ಸಮಯದಲ್ಲಿ ಜೈಲಿಗೆ ಹೋಗಿದ್ದೆ. ಹೀಗಾಗಿ ಬೇರೆ ಅರ್ಥ ಮಾಡಿಕೊಳ್ಳುವುದು ಬೇಡ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಬಂಧಿಖಾನೆ ಮಂಡಳಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. ಈ ವೇಳೆ, ಬಂಧಿಖಾನೆ ಮಂಡಳಿ ವಿಧೇಯಕದ ಮೇಲೆ ಚರ್ಚೆ ನಡೆದಿದೆ.

ಬಂಧಿಖಾನೆ ಮಂಡಳಿ ವಿಧೇಯಕ ಮೇಲೆ ಬಹಳಷ್ಟು ಚರ್ಚೆ ನಡೆದಿದೆ. ಈ ಸಂದರ್ಭ ಜೆಡಿಎಸ್ ಶಾಸಕ ಅನ್ನದಾನಿ ಮಾತನಾಡಿದ್ದಾರೆ. ಕಾರಾಗೃಹಗಳಲ್ಲಿ ಮೊಬೈಲ್ ಸೇರಿದಂತೆ ಎಲ್ಲವೂ ಸಿಗುತ್ತದೆ. ಟಿವಿ, ಪೇಪರ್, ಮದ್ಯ, ಸಿಗರೇಟ್, ಇಸ್ಪೀಟ್, ಡ್ರಗ್ಸ್ ಸೇರಿ ಎಲ್ಲವೂ ಕಾರಾಗೃಹಗಳಲ್ಲಿಯೇ ಸಿಗುತ್ತದೆ. ಕೆಲವರು ಸೇಫಾಗಿರಲು ಜೈಲಿಗೆ ಹೋಗುವ ಪರಿಸ್ಥಿತಿ ಇದೆ. ಜೈಲಿನಲ್ಲೇ ಕುಳಿತು ಹೊರಗೆ ಆಪರೇಟ್ ಮಾಡುತ್ತಾರೆ. ಮೊನ್ನೆ ಒಬ್ಬ ನನಗೆ ಜೈಲಿನಿಂದಲೇ ಕಾಲ್ ಮಾಡಿದ್ದ. ಸಣ್ಣ ಕೇಸ್‌ನಲ್ಲಿ ಜೈಲಿಗೆ ಹೋಗಿದ್ದವನು ಕರೆ ಮಾಡಿದ್ದ. ಸ್ವಲ್ಪ ಹಣ ಕಳಿಸು ಅಣ್ಣ ಎಂದು ನನಗೆ ಕರೆ ಮಾಡಿದ್ದ ಎಂದು ಹೇಳಿದ್ದಾರೆ.

ಜೈಲಿನಲ್ಲಿದ್ದ ಅವನಿಗೆ ಮೊಬೈಲ್ ಹೇಗೆ ಸಿಗುತ್ತೆ? ಜೈಲಿನಲ್ಲಿ ಎಲ್ಲಾ ವ್ಯವಸ್ಥೆ ಹಾಯಾಗಿ ಸಿಗೋದಾದರೆ ಪೊಲೀಸರ ಜತೆ ಮಾತಾಡಿಕೊಂಡು ಜೈಲಿಗೆ ಹೋಗ್ತಾರೆ ಎಂದು ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಅನ್ನದಾನಿ ಘಟನೆಯನ್ನು ನೆನಪಿಸಿಕೊಂಡು ಮಾತನಾಡಿದ್ದಾರೆ.

ಬಂಧಿಖಾನೆ ಮಂಡಳಿ ವಿಧೇಯಕ ಮೇಲೆ ಚರ್ಚೆ ವೇಳೆ ಶಾಸಕ ಶಿವಲಿಂಗೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಜೈಲಿನಲ್ಲಿ ಪ್ರತ್ಯೇಕವಾಗಿ ಅಪರಾಧಿಗಳನ್ನು ಇಡಿ. ರೌಡಿಗಳನ್ನು, ಕೊಲೆ ಮಾಡಿದವರನ್ನು ಪ್ರತ್ಯೇಕವಾಗಿ ಇಡಿ. ಇಲ್ಲದಿದ್ದರೆ ಇವರು ಬೇರೆಯವರನ್ನ ಆಳು ಮಾಡಿಕೊಳ್ತಾರೆ. ಅಲ್ಲಿಗೆ ಹೋದವರು ಕುಡಿಯೋದು ಕಲಿಯುತ್ತಾರೆ. ಜೈಲಿಗೆ ಹೋದವರು ಪರಿಶುದ್ಧರಾಗಿ ಹೊರಬರಬೇಕು. ಆದರೆ ಮತ್ತಷ್ಟು ದುಷ್ಟರಾಗಿ ಹೊರಬರುತ್ತಿದ್ದಾರೆ. ಕ್ರಿಮಿನಲ್​ಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿ. ಇಲ್ಲದಿದ್ರೆ ಮುಗ್ಧ ಅಪರಾಧಿಗಳು ಮತ್ತಷ್ಟು ಕೆಟ್ಟುಹೋಗ್ತಾರೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಇನ್ನು ಮುಂದೆ ಕರ್ನಾಟಕದಲ್ಲಿ ಅನ್​​ಲೈನ್ ಗ್ಯಾಂಬ್ಲಿಂಗ್, ಬೆಟ್ಟಿಂಗ್ ಅಪರಾಧ: ವಿಧಾನಸಭೆಯಲ್ಲಿ ಮಹತ್ವದ ವಿಧೇಯಕ ಮಂಡನೆ

ಇದನ್ನೂ ಓದಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿದ ಸಿದ್ದರಾಮಯ್ಯ; ಕಲಾಪದಲ್ಲಿ ಕಲಹ ಕೋಲಾಹಲ

Published On - 3:18 pm, Fri, 17 September 21

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ