AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಭಂಡಾರ ಜಾತ್ರೆಯಲ್ಲಿ ಕೊರೊನಾ ನಿರ್ಲಕ್ಷ್ಯ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ನಡೆಯುವ ಬಂಡಾರ ಜಾತ್ರೆಯನ್ನು ಕಳೆದ ವರ್ಷ ಕೊರೊನಾ ಲಾಕ್ಡೌನ್ಗೂ ಮುನ್ನವೇ ಮಾಡಲಾಗಿತ್ತು. ಈ ಜಾತ್ರೆಯ ವಿಶೇಷ ಎಂದರೆ ದೇವರ ಪಲ್ಲಕ್ಕಿ ಉತ್ಸವದ ವೇಳೆ ಭಂಡಾರದೋಕುಳಿ ಮಾಡುತ್ತಾರೆ.

ಬೆಳಗಾವಿ ಭಂಡಾರ ಜಾತ್ರೆಯಲ್ಲಿ ಕೊರೊನಾ ನಿರ್ಲಕ್ಷ್ಯ
ಭಂಡಾರ ಜಾತ್ರೆ
sandhya thejappa
sandhya thejappa|

Updated on:Mar 24, 2021 | 1:22 PM

Share

ಬೆಳಗಾವಿ: ಕೊರೊನಾ ಆರ್ಭಟದ ನಡುವೆಯೂ ಅದ್ದೂರಿಯಾಗಿ ಜಾತ್ರೆಯೊಂದು ನಡೆದು ಹೋಗಿದೆ. ಸಾವಿರಾರು ಭಕ್ತರು ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ ಭಾಗಿಯಾಗಿ ಭಕ್ತಿಯ ಪರಾಕಾಷ್ಠೆ ಮೆರೆದಿದ್ದಾರೆ. ಆದರೆ ಇಲ್ಲಿ ಮೆರೆದ ಭಕ್ತಿಯ ಪರಾಕಾಷ್ಠೆ ಇದೀಗ ಕುಂದಾನಗರಿಗೆ ಕಂಟಕವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಭಂಡಾರ ಜಾತ್ರೆ ಅಂತಾನೇ ಪ್ರಸಿದ್ಧಿ ಆಗಿರುವ ಜಾತ್ರೆ ಇದೀಗ ಕೊರೊನಾ ಜಾತ್ರೆ ಆಯಿತಾ ಎನ್ನುವ ಸಂಶಯ ಶುರುವಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ನಡೆಯುವ ಬಂಡಾರ ಜಾತ್ರೆಯನ್ನು ಕಳೆದ ವರ್ಷ ಕೊರೊನಾ ಲಾಕ್​ಡೌನ್​ಗೂ ಮುನ್ನವೇ ಮಾಡಲಾಗಿತ್ತು. ಈ ಜಾತ್ರೆಯ ವಿಶೇಷ ಎಂದರೆ ದೇವರ ಪಲ್ಲಕ್ಕಿ ಉತ್ಸವದ ವೇಳೆ ಭಂಡಾರದೋಕುಳಿ ಮಾಡುತ್ತಾರೆ. ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲರೂ ಭಂಡಾರವನ್ನ ಪಲ್ಲಕ್ಕಿ ಮೇಲೆ ಎರಚಿ ತಮ್ಮ ಭಕ್ತಿಯ ಪರಾಕಾಷ್ಠೆಯನ್ನು ಮೆರೆಯುತ್ತಾರೆ. ಮಾರ್ಚ್ 22ಕ್ಕೆ ನಡೆದ ಈ ಜಾತ್ರೆಯಲ್ಲಿ ಒಂದೂವರೆ ಟನ್ನಷ್ಟು ಭಂಡಾರ ಎರಚಿದ್ದು, ಎಲ್ಲಿ ನೋಡಿದರೂ ಭಂಡಾರವೇ ಕಾಣಿಸುತ್ತದೆ. ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಇಲ್ಲಿ ಭಂಡಾರದೋಕುಳಿ ಆಡುತ್ತಾರೆ. ಐದು ದಿನಗಳ ಕಾಲ ನಡೆಯುವ ಈ ದೇವರ ಜಾತ್ರೆಯಂದು ವಿಶೇಷ ಪೂಜೆಗಳನ್ನು ನೆರವೇರಿಸಿ ಡೊಳ್ಳು ಕುಣಿತ ಮೂಲಕ ಪಲ್ಲಕ್ಕಿಯನ್ನು ಮೆರವಣಿಗೆ ಮಾಡುತ್ತಾರೆ. ಇದಾದ ಬಳಿಕ ವರ್ಷದ ನುಡಿಯಾಗುತ್ತದೆ. ಈ ಬಾರಿ ಕೂಡ ಕೆಲವು ಕಡೆಗಳಲ್ಲಿ ಹೆಚ್ಚು ಮಳೆಯಾಗುತ್ತದೆ. ಇನ್ನೂ ಕೆಲವು ಕಡೆಗಳಲ್ಲಿ ಮಳೆ ಕಡಿಮೆಯಾಗುತ್ತದೆ. ಕೆಲವು ಪ್ರದೇಶದಲ್ಲಿ ಭೂಕಂಪ ಕೂಡ ಆಗಲಿದೆ ಇದರ ಜೊತೆಗೆ ಮಹಾಮಾರಿ ಕೊರೊನಾ ಕೂಡ ತೊಲಗಲಿದೆ ಅಂತಾ ಭವಿಷ್ಯವಾಯಿತು.

ಬಕ್ತರು ಭಂಡಾರವನ್ನ ಪಲ್ಲಕ್ಕಿ ಮೇಲೆ ಎರಚಿ ತಮ್ಮ ಭಕ್ತಿಯ ಪರಾಕಾಷ್ಠೆಯನ್ನು ಮೆರೆಯುತ್ತಾರೆ

ಡೊಳ್ಳು ಕುಣಿತ ಮೂಲಕ ಪಲ್ಲಕ್ಕಿಯನ್ನು ಮೆರವಣಿಗೆ ಮಾಡುತ್ತಾರೆ

ಈ ವರ್ಷ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಅದ್ದೂರಿ ಜಾತ್ರೆಗಳಿಗೆ ಸರ್ಕಾರ ಬ್ರೇಕ್ ಹಾಕಿದೆ. ಒಂದು ವೇಳೆ ಜಾತ್ರೆ ಮಾಡಬೇಕು ಎಂದರೆ ಜಿಲ್ಲಾಡಳಿತದ ಅನುಮತಿ ಪಡೆಯಬೇಕು. ಜಿಲ್ಲಾಡಳಿತದ ಅನುಮತಿ ಪಡೆದು ಕೊರೊನಾ ಮಾರ್ಗಸೂಚಿಗಳನ್ನು ಪಾಲನೆ ಮಾಡಿ ಜಾತ್ರೆಯನ್ನು ಮಾಡುತ್ತೀವಿ ಎಂದಿದ್ದ ಜಾತ್ರಾ ಕಮೀಟಿಯವರು ನಿಯಮಗಳನ್ನು ಬ್ರೇಕ್ ಮಾಡಿ ಅದ್ದೂರಿಯಾಗಿ ಜಾತ್ರೆ ಮಾಡಿದ್ದಾರೆ.

ಕ್ರಮ ತೆಗೆದುಕೊಳ್ಳುವ ಸಾಧ್ಯತೆ ನೆರೆಯ ಮಹಾರಾಷ್ಟ್ರ ಸೇರಿದಂತೆ ಬೆಳಗಾವಿ ಮತ್ತು ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಜಾತ್ರೆ ಮಾಡಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಂತೂ ಕೊರೊನಾ ರಣಕೇಕೆ ಹಾಕುತ್ತಿದ್ದು, ಅಲ್ಲಿಂದಲೂ ಸಾವಿರಾರು ಜನ ಭಕ್ತರು ಬಂದು ಜಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಇಷ್ಟೊಂದು ದೊಡ್ಡ ಪ್ರಮಾಣದ ಜಾತ್ರೆಯನ್ನ ಮಾಡದಂತೆ ತಡೆಯಬೇಕಿದ್ದ ಜಿಲ್ಲಾಡಳಿತ ಕೂಡ ವಿಫಲ ಆಗಿದ್ದು, ಸದ್ಯ ಈ ಜಾತ್ರೆಯ ದೃಶ್ಯವನ್ನು ನೋಡಿದರೆ ಕೊರೊನಾ ಜಾತ್ರೆಯಾಗಿ ಇದು ಮಾರ್ಪಟ್ಟಿತ್ತಾ ಎನ್ನುವ ಅನುಮಾನ ಕೂಡ ಕಾಡುತ್ತಿದ್ದು, ಈಗ ಎಚ್ಚೇತ್ತುಕೊಂಡಿರುವ ತಾಲೂಕು ಆಡಳಿತ ಕಮೀಟಿಯವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಕಂಡುಬಂದಿದೆ.

ಮಕ್ಕಳು, ಮಹಿಳೆಯರು ಭಂಡಾರವನ್ನು ಪಲ್ಲಕ್ಕಿಯ ಮೇಲೆ ಎರಚುತ್ತಾರೆ

ವರ್ಷಕ್ಕೊಮ್ಮೆ ನಡೆಯುವ ಜಾತ್ರೆಗಳನ್ನು ಕಣ್ತುಂಬಿಕೊಂಡು ದೇವರ ದರ್ಶನ ಪಡೆದು ತಮ್ಮಲ್ಲೆ ಕಷ್ಟ ಕಾರ್ಪಣ್ಯಗಳನ್ನ ಕಳೆದುಕೊಳ್ಳಲು ಭಕ್ತರು ಬರುತ್ತಾರೆ. ಅದೇ ರೀತಿ ಅರಣ್ಯ ಸಿದ್ದೇಶ್ವರ ಜಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ಜಾತ್ರೆಯಲ್ಲಿ ಮಿಂದೆದ್ದಿದ್ದಾರೆ. ಆದರೆ ಕೊರೊನಾ ಸಂದರ್ಭದಲ್ಲಿ ಇಷ್ಟೊಂದು ಅದ್ದೂರಿ ಜಾತ್ರೆ ಬೇಕಿತ್ತಾ ಎಂಬ ಪ್ರಶ್ನೆಗಳು ಕಾಡುತ್ತಿದ್ದು, ಇದೇ ಜಾತ್ರೆ ಬಂದ ಭಕ್ತರಿಗೆ ಕಂಟಕವಾಗದಿದ್ದರೆ ಸಾಕು ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಇದನ್ನೂ ಓದಿ

Bangalore Covid-19 Case Updates: ಜುಲೈವರೆಗೂ ಕೊರೊನಾ ಸೋಂಕು ಕಾಡುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ತಜ್ಞರು

ಬಾಲಿವುಡ್​ ನಟ ಆಮೀರ್​ಖಾನ್​ಗೆ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್

Published On - 1:21 pm, Wed, 24 March 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್