AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಕೆಗೆ ಒಳ್ಳೆಯ ಬೆಲೆ: ಅಡಿಕೆ ನಾಡು ಚನ್ನಗಿರಿಯಲ್ಲಿ ಚುರುಕಾಯ್ತು ವ್ಯಾಪಾರ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಅಡಿಕೆ ವ್ಯಾಪಾರ ಭರ್ಜರಿ ಏರಿಕೆ ಕಂಡಿದೆ. ಒಳ್ಳೆಯ ಬೆಲೆ ಹಾಗೂ ಒಳ್ಳೆಯ ಫಸಲು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಅಡಿಕೆಗೆ ಒಳ್ಳೆಯ ಬೆಲೆ: ಅಡಿಕೆ ನಾಡು ಚನ್ನಗಿರಿಯಲ್ಲಿ ಚುರುಕಾಯ್ತು ವ್ಯಾಪಾರ
ಅಡಿಕೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jul 09, 2021 | 1:25 PM

Share

ರಾಜ್ಯದಲ್ಲಿ ಅಡಿಕೆ ನಾಡು ಎಂದೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಪ್ರಸಿದ್ಧ. ಕಾರಣ, ಇದು ರಾಜ್ಯದಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಯುವ ತಾಲೂಕು ಕೇಂದ್ರ. ಲಾಕ್​ಡೌನ್​ನಿಂದ ಬಾಡಿದ್ದ ಅಡಿಕೆ ಬೆಳೆಗಾರರ ಮುಖದಲ್ಲಿ ಈಗ ಮಂದಹಾಸವಿದೆ. ಕಾರಣ, ಮಾರುಕಟ್ಟೆಯಲ್ಲಿ ಅಡಿಕೆಗೆ ಈಗ ಒಳ್ಳೆಯ ದರ ಬಂದಿದೆ. ಆದ್ದರಿಂದಲೇ, ಚನ್ನಗಿರಿಯಲ್ಲಿ ಅಡಿಕೆ ವ್ಯಾಪಾರ ಭರ್ಜರಿ ಚೇತರಿಕೆ ಕಂಡಿದೆ.

ಚನ್ನಗಿರಿ ತಾಲೂಕಿನಲ್ಲಿ ಸುಮಾರು 30ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಿದೆ. ಕಳೆದ ವರ್ಷ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಪ್ರತಿ ಎಕರೆಗೆ 15ರಿಂದ 18 ಕ್ವಿಂಟಾಲ್ ಇಳುವರಿ ದೊರೆತಿದೆ. ಈ ಪ್ರಮಾಣದ ಇಳುವರಿಯಿಂದಾಗಿ ರೈತರ ಮುಖದಲ್ಲಿ ನಗು ಮೂಡಿದೆ. ಅಲ್ಲದೆ, ಈ ಬಾರಿ ಅಡಿಕೆ ಬೆಲೆಯೂ ಉತ್ತಮವಾಗಿದೆ. ಪ್ರತಿ ಕ್ವಿಂಟಾಲ್ ಅಡಿಕೆಗೆ 41,500ರೂ.ಗಳಿಂದ 42,500ರೂ.ಗಳವರೆಗೆ ಮಾರುಕಟ್ಟೆ ದರವಿದೆ. ಇದರಿಂದಾಗಿ ರೈತರು ಈಗ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ. ಪರಿಣಾಮವಾಗಿ, ರೈತರು ಚನ್ನಗಿರಿ ತುಮ್ಕೋಸ್ ಸಂಸ್ಥೆಗೆ ಒಂದೇ ದಿನದಲ್ಲಿ 20 ಸಾವಿರ ಚೀಲ ಅಡಿಕೆಯನ್ನು ಮಾರಾಟ ಮಾಡಿದ್ದಾರೆ. ಉತ್ತಮ ಬೆಲೆ ಹಾಗೂ ಉತ್ತಮ ಫಸಲಿನಿಂದಾಗಿ ಕರೊನಾ ಕಷ್ಟ ಕಾಲದಲ್ಲೂ ವಾಣಿಜ್ಯ ಬೆಳೆಗಾರರ ಮೊಗದಲ್ಲಿ ಹರ್ಷ ಮೂಡಿದೆ.

ಈ ಬಾರಿ ತಾಲೂಕಿನಲ್ಲಿ ಅಷ್ಟು ಉತ್ತಮವಾಗಿ ಮಳೆಯಾಗಿಲ್ಲ. ಆದ್ದರಿಂದ ಅಡಕೆ ಕೊಯ್ಲಿನ ಕಾರ್ಯ ಚುರುಕಾಗಿದೆ. ಪ್ರತೀ ವರ್ಷ ಮಳೆಯ ಕಾರಣದಿಂದಾಗಿ ಅಡಿಕೆ ಕೊಯ್ಲು ನಿಧಾನಕ್ಕೆ ಸಾಗುತ್ತಿತ್ತು. ಆದರೆ ಈ ಬಾರಿ ಹಾಗಾಗಿಲ್ಲ. ಚನ್ನಗಿರಿಯಲ್ಲಿ ಜುಲೈನಿಂದ ಬಹುತೇಕ ಮೂರು ತಿಂಗಳ ಕಾಲ ಅಡಿಕೆ ಕೊಯ್ಲು ಮುಂದುವರೆಯುತ್ತದೆ. ಈ ಬಾರಿ ಕರೊನಾ ಕಾರಣದಿಂದಾಗಿ ಅಡಕೆ ವ್ಯಾಪಾರ ಕುಂಠಿತಗೊಂಡಿತ್ತು. ಸರ್ಕಾರದ ನಿಯಮಾವಳಿಗಳಲ್ಲಿ ಬದಲಾವಣೆಯಾಗಿರುವುದರಿಂದ ವ್ಯಾಪಾರದಲ್ಲಿ ಒಳ್ಳೆಯ ಚೇತರಿಕೆ ಕಂಡಿದೆ.

ಇದನ್ನೂ ಓದಿ: ಅಪಘಾತವಾದ ಬಾಲಕನ ಜೀವ ಉಳಿಸಿತು ‘ಬಿಗಿಲ್​’ ಚಿತ್ರ; ಅಚ್ಚರಿಯ ರೀತಿಯಲ್ಲಿ ನಡೆಯಿತು ಆಪರೇಷನ್​

(Areca Nut Market is increasing in Channagiri, Davanagere district farmers are happy)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ