AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಕೆಗೆ ಒಳ್ಳೆಯ ಬೆಲೆ: ಅಡಿಕೆ ನಾಡು ಚನ್ನಗಿರಿಯಲ್ಲಿ ಚುರುಕಾಯ್ತು ವ್ಯಾಪಾರ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಅಡಿಕೆ ವ್ಯಾಪಾರ ಭರ್ಜರಿ ಏರಿಕೆ ಕಂಡಿದೆ. ಒಳ್ಳೆಯ ಬೆಲೆ ಹಾಗೂ ಒಳ್ಳೆಯ ಫಸಲು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಅಡಿಕೆಗೆ ಒಳ್ಳೆಯ ಬೆಲೆ: ಅಡಿಕೆ ನಾಡು ಚನ್ನಗಿರಿಯಲ್ಲಿ ಚುರುಕಾಯ್ತು ವ್ಯಾಪಾರ
ಅಡಿಕೆ (ಸಾಂದರ್ಭಿಕ ಚಿತ್ರ)
TV9 Web
| Updated By: shivaprasad.hs|

Updated on: Jul 09, 2021 | 1:25 PM

Share

ರಾಜ್ಯದಲ್ಲಿ ಅಡಿಕೆ ನಾಡು ಎಂದೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಪ್ರಸಿದ್ಧ. ಕಾರಣ, ಇದು ರಾಜ್ಯದಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಯುವ ತಾಲೂಕು ಕೇಂದ್ರ. ಲಾಕ್​ಡೌನ್​ನಿಂದ ಬಾಡಿದ್ದ ಅಡಿಕೆ ಬೆಳೆಗಾರರ ಮುಖದಲ್ಲಿ ಈಗ ಮಂದಹಾಸವಿದೆ. ಕಾರಣ, ಮಾರುಕಟ್ಟೆಯಲ್ಲಿ ಅಡಿಕೆಗೆ ಈಗ ಒಳ್ಳೆಯ ದರ ಬಂದಿದೆ. ಆದ್ದರಿಂದಲೇ, ಚನ್ನಗಿರಿಯಲ್ಲಿ ಅಡಿಕೆ ವ್ಯಾಪಾರ ಭರ್ಜರಿ ಚೇತರಿಕೆ ಕಂಡಿದೆ.

ಚನ್ನಗಿರಿ ತಾಲೂಕಿನಲ್ಲಿ ಸುಮಾರು 30ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಿದೆ. ಕಳೆದ ವರ್ಷ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಪ್ರತಿ ಎಕರೆಗೆ 15ರಿಂದ 18 ಕ್ವಿಂಟಾಲ್ ಇಳುವರಿ ದೊರೆತಿದೆ. ಈ ಪ್ರಮಾಣದ ಇಳುವರಿಯಿಂದಾಗಿ ರೈತರ ಮುಖದಲ್ಲಿ ನಗು ಮೂಡಿದೆ. ಅಲ್ಲದೆ, ಈ ಬಾರಿ ಅಡಿಕೆ ಬೆಲೆಯೂ ಉತ್ತಮವಾಗಿದೆ. ಪ್ರತಿ ಕ್ವಿಂಟಾಲ್ ಅಡಿಕೆಗೆ 41,500ರೂ.ಗಳಿಂದ 42,500ರೂ.ಗಳವರೆಗೆ ಮಾರುಕಟ್ಟೆ ದರವಿದೆ. ಇದರಿಂದಾಗಿ ರೈತರು ಈಗ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ. ಪರಿಣಾಮವಾಗಿ, ರೈತರು ಚನ್ನಗಿರಿ ತುಮ್ಕೋಸ್ ಸಂಸ್ಥೆಗೆ ಒಂದೇ ದಿನದಲ್ಲಿ 20 ಸಾವಿರ ಚೀಲ ಅಡಿಕೆಯನ್ನು ಮಾರಾಟ ಮಾಡಿದ್ದಾರೆ. ಉತ್ತಮ ಬೆಲೆ ಹಾಗೂ ಉತ್ತಮ ಫಸಲಿನಿಂದಾಗಿ ಕರೊನಾ ಕಷ್ಟ ಕಾಲದಲ್ಲೂ ವಾಣಿಜ್ಯ ಬೆಳೆಗಾರರ ಮೊಗದಲ್ಲಿ ಹರ್ಷ ಮೂಡಿದೆ.

ಈ ಬಾರಿ ತಾಲೂಕಿನಲ್ಲಿ ಅಷ್ಟು ಉತ್ತಮವಾಗಿ ಮಳೆಯಾಗಿಲ್ಲ. ಆದ್ದರಿಂದ ಅಡಕೆ ಕೊಯ್ಲಿನ ಕಾರ್ಯ ಚುರುಕಾಗಿದೆ. ಪ್ರತೀ ವರ್ಷ ಮಳೆಯ ಕಾರಣದಿಂದಾಗಿ ಅಡಿಕೆ ಕೊಯ್ಲು ನಿಧಾನಕ್ಕೆ ಸಾಗುತ್ತಿತ್ತು. ಆದರೆ ಈ ಬಾರಿ ಹಾಗಾಗಿಲ್ಲ. ಚನ್ನಗಿರಿಯಲ್ಲಿ ಜುಲೈನಿಂದ ಬಹುತೇಕ ಮೂರು ತಿಂಗಳ ಕಾಲ ಅಡಿಕೆ ಕೊಯ್ಲು ಮುಂದುವರೆಯುತ್ತದೆ. ಈ ಬಾರಿ ಕರೊನಾ ಕಾರಣದಿಂದಾಗಿ ಅಡಕೆ ವ್ಯಾಪಾರ ಕುಂಠಿತಗೊಂಡಿತ್ತು. ಸರ್ಕಾರದ ನಿಯಮಾವಳಿಗಳಲ್ಲಿ ಬದಲಾವಣೆಯಾಗಿರುವುದರಿಂದ ವ್ಯಾಪಾರದಲ್ಲಿ ಒಳ್ಳೆಯ ಚೇತರಿಕೆ ಕಂಡಿದೆ.

ಇದನ್ನೂ ಓದಿ: ಅಪಘಾತವಾದ ಬಾಲಕನ ಜೀವ ಉಳಿಸಿತು ‘ಬಿಗಿಲ್​’ ಚಿತ್ರ; ಅಚ್ಚರಿಯ ರೀತಿಯಲ್ಲಿ ನಡೆಯಿತು ಆಪರೇಷನ್​

(Areca Nut Market is increasing in Channagiri, Davanagere district farmers are happy)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ