AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯದಲ್ಲಿ ಒಟ್ಟು 200 ಅಫ್ಘಾನಿಸ್ತಾನದ ಪ್ರಜೆಗಳು ವಾಸವಿದ್ದಾರೆ; ಟಿವಿ9ಗೆ ಮಾಹಿತಿ ಲಭ್ಯ

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈ ವಶವಾದ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಆಫ್ಘನ್ ವಿದ್ಯಾರ್ಥಿಗಳಿಗೆ ಆತಂಕ ಆರಂಭವಾಗಿದೆ. ಹೀಗಾಗಿ ಅಫ್ಘಾನಿಸ್ತಾನ ತಾಲಿಬಾನರ ಕೈವಶವಾದ ಬೆನ್ನಲ್ಲೇ ಟಿವಿ 9 ಅಪ್ಘಾನಿಸ್ತಾನದ ವಿದ್ಯಾರ್ಥಿಗಳನ್ನು ಮಾತನಾಡಿಸಿತ್ತು.

ಕರ್ನಾಟಕ ರಾಜ್ಯದಲ್ಲಿ ಒಟ್ಟು 200 ಅಫ್ಘಾನಿಸ್ತಾನದ ಪ್ರಜೆಗಳು ವಾಸವಿದ್ದಾರೆ; ಟಿವಿ9ಗೆ ಮಾಹಿತಿ ಲಭ್ಯ
ಖಜಾನೆ ಬರಿದಾದ ದೇಶವೊಂದನ್ನು ಇಟ್ಟುಕೊಂಡು ಏನು ಆಡಳಿತ ಮಾಡುವುದಕ್ಕೆ ಸಾಧ್ಯ? ಸರಿ, ನೆರೆಹೊರೆಯವರ ಸಹಕಾರ ಇದೆಯಾ? ಆಡಳಿತಗಾರರ ಸಲುವಾಗಿ ಮನಸಾರೆ ತ್ಯಾಗ ಮಾಡುವುದಕ್ಕಾದರೂ ಅಲ್ಲಿನ ಪ್ರಜೆಗಳು ಸಿದ್ಧರಿದ್ದಾರಾ? ಈ ಪೈಕಿ ಯಾವುದಕ್ಕೂ ಸಕಾರಾತ್ಮಕ ಉತ್ತರ ಸಿಗಲ್ಲ. ಈಗ ಹೇಳಲು ಹೊರಟಿರುವುದು ಆರ್ಥಿಕ ಪತನದ ಅಂಚಿನಲ್ಲಿ ಭರವಸೆ ಕೂಡ ದಿವಾಳಿಯಾದ ಅಫ್ಘಾನಿಸ್ತಾನದ ಬಗ್ಗೆ. 20 ವರ್ಷಗಳ ಕಾಲ ಅಫ್ಘಾನಿಸ್ತಾನದಲ್ಲಿ ಸೇನೆಯನ್ನು ಬಿಟ್ಟಿದ್ದ ಅಮೆರಿಕಾ, ಅಲ್ಲಿಂದ ಹೊರಗೆ ಕಾಲಿಡುತ್ತಾ, ತಾಲಿಬಾನ್​ಗಳು ದೇಶದ ಆಡಳಿತದ ಚುಕ್ಕಾಣಿ ಕೈಗೆತ್ತಿಕೊಳ್ಳುವ ಹೊತ್ತಿಗೆ ಪರಿಸ್ಥಿತಿ ಏನು ಗೊತ್ತಾ? ವಿಶ್ವದ ಅತ್ಯಂತ ಬಡ ದೇಶಗಳಲ್ಲಿ ಅಫ್ಘಾನಿಸ್ತಾನವೂ ಒಂದು ಅಂತಾಗಿದೆ. ಇನ್ನು ವಿಶ್ವದ ಇತರ ದೇಶಗಳು ಸಹ ಅಫ್ಘಾನಿಸ್ತಾನಕ್ಕೆ ಹಣಕಾಸು ನೆರವು ಹಾಗೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿವೆ.
Follow us
TV9 Web
| Updated By: ganapathi bhat

Updated on: Aug 17, 2021 | 10:47 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಒಟ್ಟು 200 ಅಫ್ಘಾನಿಸ್ತಾನ (Afghanistan) ಪ್ರಜೆಗಳ ವಾಸ ಇದೆ ಎಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಮಾಹಿತಿ ನೀಡಿದೆ. ಶೈಕ್ಷಣಿಕ ವೀಸಾದಡಿ 192 ಆಫ್ಘನ್‌ ವಿದ್ಯಾರ್ಥಿಗಳು (Students) ವಾಸವಾಗಿ ಇದ್ದಾರೆ. ಮೆಡಿಕಲ್, ಬ್ಯುಸಿನೆಸ್ ಇತರೆ ವೀಸಾದಡಿ 8 ಜನರು ವಾಸವಾಗಿದ್ದಾರೆ ಎಂದು ಎಫ್​ಆರ್​ಆರ್​ಒ ಉನ್ನತ ಮೂಲಗಳಿಂದ ಟಿವಿ9ಗೆ ಮಾಹಿತಿ ಲಭ್ಯವಾಗಿದೆ.

ವೈದ್ಯಕೀಯ ಚಿಕಿತ್ಸೆಗೆಂದು ಬೆಂಗಳೂರಿಗೆ ಆಗಮಿಸಿ ವೀಸಾ ಅವಧಿ ಮುಗಿದರೂ ಮರಳಿ ತೆರಳದ 15 ಅಪ್ಘನ್ ಪ್ರಜೆಗಳು ಬೆಂಗಳೂರು ನಗರದಲ್ಲಿದ್ದಾರೆ ಎಂಬ ಮಾಹಿತಿ ಮಂಗಳವಾರ ತಿಳಿದುಬಂದಿದೆ. ವೀಸಾ ಅವಧಿ ಮುಗಿದರೂ ಅಪ್ಘಾನಿಸ್ತಾನದ 15 ಪ್ರಜೆಗಳು ಅಕ್ರಮ ವಾಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಪ್ಘಾನಿಸ್ತಾನದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈ ವಶವಾದ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಆಫ್ಘನ್ ವಿದ್ಯಾರ್ಥಿಗಳಿಗೆ ಆತಂಕ ಆರಂಭವಾಗಿದೆ. ಹೀಗಾಗಿ ಅಫ್ಘಾನಿಸ್ತಾನ ತಾಲಿಬಾನರ ಕೈವಶವಾದ ಬೆನ್ನಲ್ಲೇ ಟಿವಿ 9 ಅಪ್ಘಾನಿಸ್ತಾನದ ವಿದ್ಯಾರ್ಥಿಗಳನ್ನು ಮಾತನಾಡಿಸಿತ್ತು.

ಈ ಹಿಂದೆ ಇದ್ದ ತಾಲಿಬಾನರ ಸರ್ಕಾರ ಸಾಕಷ್ಟು ಕ್ರೌರ್ಯ ಮೆರೆದಿತ್ತು. ಈ ಹಿನ್ನೆಲೆ ಜೀವ ಉಳಿಸಿಕೊಳ್ಳಲು ಹೆದರಿ ದೇಶ ತೊರೆಯುತ್ತಿದ್ದಾರೆ. ನಾವು ನಮ್ಮ ಕುಟುಂಬದವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಅವರ ಪ್ರಕಾರ ಈ ಬಾರಿ ಕ್ರೌರ್ಯ, ಅಟ್ಟಹಾಸ ಮೆರೆಯದೆ ಅಫ್ಘಾನಿಸ್ತಾನ್ ಅನ್ನು ತಾಲಿಬಾನರು ವಶಪಡಿಸಿಕೊಂಡಿದ್ದಾರೆ. ಸದ್ಯಕ್ಕೆ ಇಲ್ಲಿ ಏನೂ ತೊಂದರೆ ಇಲ್ಲ ಅಂತ ಕುಟುಂಬಸ್ಥರು ಹೇಳಿದ್ದಾರೆ. ಆದರೂ ಅಲ್ಲಿನ ಪರಿಸ್ಥಿತಿ ನೋಡಿದ್ರೆ ನಮಗೆ ಭಯ ಆಗುತ್ತಿದೆ. ಮುಂದೆ ಏನಾಗುತ್ತೆ ಅಂತ ಹೇಳೋಕೆ ಸಾಧ್ಯ ಆಗುತ್ತಿಲ್ಲ. ಇಂದಿನವರೆಗೂ ಎಲ್ಲ ಸರಿಯಿದ್ದರೂ ಸಹ, ನಾಳೆ ಏನು ಬೇಕಾದರೂ ಆಗುವ ಸ್ಥಿತಿ ಅಲ್ಲಿದೆ ಎಂದು ವಿದ್ಯಾರ್ಥಿಗಳು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಯಾವುದೇ ದೇಶಕ್ಕೆ ಬೆದರಿಕೆಯಿಲ್ಲ: ಮೊದಲ ಸುದ್ದಿಗೋಷ್ಠಿಯಲ್ಲಿ ತಾಲಿಬಾನ್​ ಅಭಯ

ತಾಲಿಬಾನ್ ಆಡಳಿತದ 2ನೇ ದಿನ: ಅಫ್ಘಾನಿಸ್ತಾನದಲ್ಲಿ ಮನೆ ಮಾಡಿದೆ ಭಯ, ಆತಂಕ

‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ