AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯದಲ್ಲಿ ಒಟ್ಟು 200 ಅಫ್ಘಾನಿಸ್ತಾನದ ಪ್ರಜೆಗಳು ವಾಸವಿದ್ದಾರೆ; ಟಿವಿ9ಗೆ ಮಾಹಿತಿ ಲಭ್ಯ

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈ ವಶವಾದ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಆಫ್ಘನ್ ವಿದ್ಯಾರ್ಥಿಗಳಿಗೆ ಆತಂಕ ಆರಂಭವಾಗಿದೆ. ಹೀಗಾಗಿ ಅಫ್ಘಾನಿಸ್ತಾನ ತಾಲಿಬಾನರ ಕೈವಶವಾದ ಬೆನ್ನಲ್ಲೇ ಟಿವಿ 9 ಅಪ್ಘಾನಿಸ್ತಾನದ ವಿದ್ಯಾರ್ಥಿಗಳನ್ನು ಮಾತನಾಡಿಸಿತ್ತು.

ಕರ್ನಾಟಕ ರಾಜ್ಯದಲ್ಲಿ ಒಟ್ಟು 200 ಅಫ್ಘಾನಿಸ್ತಾನದ ಪ್ರಜೆಗಳು ವಾಸವಿದ್ದಾರೆ; ಟಿವಿ9ಗೆ ಮಾಹಿತಿ ಲಭ್ಯ
ಖಜಾನೆ ಬರಿದಾದ ದೇಶವೊಂದನ್ನು ಇಟ್ಟುಕೊಂಡು ಏನು ಆಡಳಿತ ಮಾಡುವುದಕ್ಕೆ ಸಾಧ್ಯ? ಸರಿ, ನೆರೆಹೊರೆಯವರ ಸಹಕಾರ ಇದೆಯಾ? ಆಡಳಿತಗಾರರ ಸಲುವಾಗಿ ಮನಸಾರೆ ತ್ಯಾಗ ಮಾಡುವುದಕ್ಕಾದರೂ ಅಲ್ಲಿನ ಪ್ರಜೆಗಳು ಸಿದ್ಧರಿದ್ದಾರಾ? ಈ ಪೈಕಿ ಯಾವುದಕ್ಕೂ ಸಕಾರಾತ್ಮಕ ಉತ್ತರ ಸಿಗಲ್ಲ. ಈಗ ಹೇಳಲು ಹೊರಟಿರುವುದು ಆರ್ಥಿಕ ಪತನದ ಅಂಚಿನಲ್ಲಿ ಭರವಸೆ ಕೂಡ ದಿವಾಳಿಯಾದ ಅಫ್ಘಾನಿಸ್ತಾನದ ಬಗ್ಗೆ. 20 ವರ್ಷಗಳ ಕಾಲ ಅಫ್ಘಾನಿಸ್ತಾನದಲ್ಲಿ ಸೇನೆಯನ್ನು ಬಿಟ್ಟಿದ್ದ ಅಮೆರಿಕಾ, ಅಲ್ಲಿಂದ ಹೊರಗೆ ಕಾಲಿಡುತ್ತಾ, ತಾಲಿಬಾನ್​ಗಳು ದೇಶದ ಆಡಳಿತದ ಚುಕ್ಕಾಣಿ ಕೈಗೆತ್ತಿಕೊಳ್ಳುವ ಹೊತ್ತಿಗೆ ಪರಿಸ್ಥಿತಿ ಏನು ಗೊತ್ತಾ? ವಿಶ್ವದ ಅತ್ಯಂತ ಬಡ ದೇಶಗಳಲ್ಲಿ ಅಫ್ಘಾನಿಸ್ತಾನವೂ ಒಂದು ಅಂತಾಗಿದೆ. ಇನ್ನು ವಿಶ್ವದ ಇತರ ದೇಶಗಳು ಸಹ ಅಫ್ಘಾನಿಸ್ತಾನಕ್ಕೆ ಹಣಕಾಸು ನೆರವು ಹಾಗೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿವೆ.
TV9 Web
| Edited By: |

Updated on: Aug 17, 2021 | 10:47 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಒಟ್ಟು 200 ಅಫ್ಘಾನಿಸ್ತಾನ (Afghanistan) ಪ್ರಜೆಗಳ ವಾಸ ಇದೆ ಎಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಮಾಹಿತಿ ನೀಡಿದೆ. ಶೈಕ್ಷಣಿಕ ವೀಸಾದಡಿ 192 ಆಫ್ಘನ್‌ ವಿದ್ಯಾರ್ಥಿಗಳು (Students) ವಾಸವಾಗಿ ಇದ್ದಾರೆ. ಮೆಡಿಕಲ್, ಬ್ಯುಸಿನೆಸ್ ಇತರೆ ವೀಸಾದಡಿ 8 ಜನರು ವಾಸವಾಗಿದ್ದಾರೆ ಎಂದು ಎಫ್​ಆರ್​ಆರ್​ಒ ಉನ್ನತ ಮೂಲಗಳಿಂದ ಟಿವಿ9ಗೆ ಮಾಹಿತಿ ಲಭ್ಯವಾಗಿದೆ.

ವೈದ್ಯಕೀಯ ಚಿಕಿತ್ಸೆಗೆಂದು ಬೆಂಗಳೂರಿಗೆ ಆಗಮಿಸಿ ವೀಸಾ ಅವಧಿ ಮುಗಿದರೂ ಮರಳಿ ತೆರಳದ 15 ಅಪ್ಘನ್ ಪ್ರಜೆಗಳು ಬೆಂಗಳೂರು ನಗರದಲ್ಲಿದ್ದಾರೆ ಎಂಬ ಮಾಹಿತಿ ಮಂಗಳವಾರ ತಿಳಿದುಬಂದಿದೆ. ವೀಸಾ ಅವಧಿ ಮುಗಿದರೂ ಅಪ್ಘಾನಿಸ್ತಾನದ 15 ಪ್ರಜೆಗಳು ಅಕ್ರಮ ವಾಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಪ್ಘಾನಿಸ್ತಾನದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈ ವಶವಾದ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಆಫ್ಘನ್ ವಿದ್ಯಾರ್ಥಿಗಳಿಗೆ ಆತಂಕ ಆರಂಭವಾಗಿದೆ. ಹೀಗಾಗಿ ಅಫ್ಘಾನಿಸ್ತಾನ ತಾಲಿಬಾನರ ಕೈವಶವಾದ ಬೆನ್ನಲ್ಲೇ ಟಿವಿ 9 ಅಪ್ಘಾನಿಸ್ತಾನದ ವಿದ್ಯಾರ್ಥಿಗಳನ್ನು ಮಾತನಾಡಿಸಿತ್ತು.

ಈ ಹಿಂದೆ ಇದ್ದ ತಾಲಿಬಾನರ ಸರ್ಕಾರ ಸಾಕಷ್ಟು ಕ್ರೌರ್ಯ ಮೆರೆದಿತ್ತು. ಈ ಹಿನ್ನೆಲೆ ಜೀವ ಉಳಿಸಿಕೊಳ್ಳಲು ಹೆದರಿ ದೇಶ ತೊರೆಯುತ್ತಿದ್ದಾರೆ. ನಾವು ನಮ್ಮ ಕುಟುಂಬದವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಅವರ ಪ್ರಕಾರ ಈ ಬಾರಿ ಕ್ರೌರ್ಯ, ಅಟ್ಟಹಾಸ ಮೆರೆಯದೆ ಅಫ್ಘಾನಿಸ್ತಾನ್ ಅನ್ನು ತಾಲಿಬಾನರು ವಶಪಡಿಸಿಕೊಂಡಿದ್ದಾರೆ. ಸದ್ಯಕ್ಕೆ ಇಲ್ಲಿ ಏನೂ ತೊಂದರೆ ಇಲ್ಲ ಅಂತ ಕುಟುಂಬಸ್ಥರು ಹೇಳಿದ್ದಾರೆ. ಆದರೂ ಅಲ್ಲಿನ ಪರಿಸ್ಥಿತಿ ನೋಡಿದ್ರೆ ನಮಗೆ ಭಯ ಆಗುತ್ತಿದೆ. ಮುಂದೆ ಏನಾಗುತ್ತೆ ಅಂತ ಹೇಳೋಕೆ ಸಾಧ್ಯ ಆಗುತ್ತಿಲ್ಲ. ಇಂದಿನವರೆಗೂ ಎಲ್ಲ ಸರಿಯಿದ್ದರೂ ಸಹ, ನಾಳೆ ಏನು ಬೇಕಾದರೂ ಆಗುವ ಸ್ಥಿತಿ ಅಲ್ಲಿದೆ ಎಂದು ವಿದ್ಯಾರ್ಥಿಗಳು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಯಾವುದೇ ದೇಶಕ್ಕೆ ಬೆದರಿಕೆಯಿಲ್ಲ: ಮೊದಲ ಸುದ್ದಿಗೋಷ್ಠಿಯಲ್ಲಿ ತಾಲಿಬಾನ್​ ಅಭಯ

ತಾಲಿಬಾನ್ ಆಡಳಿತದ 2ನೇ ದಿನ: ಅಫ್ಘಾನಿಸ್ತಾನದಲ್ಲಿ ಮನೆ ಮಾಡಿದೆ ಭಯ, ಆತಂಕ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ