Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕ್​ ಆಫ್​ಗೂ ಮುನ್ನ ಹತ್ತಾರು ವಿಮಾನಗಳ ಸಂಚಾರ ಕ್ಯಾನ್ಸಲ್ ಆದವು ಯಾಕೆ?

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ನಿಂದ ಸುಮಾರು 2 ತಿಂಗಳು ಸ್ಥಗಿತವಾಗಿದ್ದ ದೇಶೀಯ ವಿಮಾನ ಸಂಚಾರ ಇಂದಿನಿಂದ ಆರಂಭವಾಗಿದೆ. ಆದ್ರೆ ವಿಮಾನಯಾನ ಆರಂಭದ ಮೊದಲ ದಿನವೇ ಸಾಕಷ್ಟು ವಿಮಾನಗಳ ಸಂಚಾರ ರದ್ದಾಗಿದೆ. ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳ ಹಾರಾಟ ರದ್ದಾಗಿದೆ. ಹೈದರಾಬಾದ್, ವಿಜಯವಾಡ, ಇಂದೋರ್, ಮುಂಬೈ, ಗೋವಾ, ವಿಶಾಖಪಟ್ಟಣಂ, ಅಹಮದಾಬಾದ್ ಮತ್ತು ಮಂಗಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ವಿಮಾನಗಳು ಕ್ಯಾನ್ಸಲ್ ಆಗಿವೆ. ಕೆಐಎಎಲ್‌ನಿಂದ ತೆರಳಬೇಕಿದ್ದ ಕೆಲ ವಿಮಾನಗಳ ಹಾರಾಟವೂ ಕ್ಯಾನ್ಸಲ್ ಆಗಿದೆ. ಸುಮಾರು 30ಕ್ಕೂ […]

ಟೇಕ್​ ಆಫ್​ಗೂ ಮುನ್ನ ಹತ್ತಾರು ವಿಮಾನಗಳ ಸಂಚಾರ ಕ್ಯಾನ್ಸಲ್ ಆದವು ಯಾಕೆ?
Follow us
ಸಾಧು ಶ್ರೀನಾಥ್​
| Updated By:

Updated on:May 25, 2020 | 10:56 AM

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ನಿಂದ ಸುಮಾರು 2 ತಿಂಗಳು ಸ್ಥಗಿತವಾಗಿದ್ದ ದೇಶೀಯ ವಿಮಾನ ಸಂಚಾರ ಇಂದಿನಿಂದ ಆರಂಭವಾಗಿದೆ. ಆದ್ರೆ ವಿಮಾನಯಾನ ಆರಂಭದ ಮೊದಲ ದಿನವೇ ಸಾಕಷ್ಟು ವಿಮಾನಗಳ ಸಂಚಾರ ರದ್ದಾಗಿದೆ.

ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳ ಹಾರಾಟ ರದ್ದಾಗಿದೆ. ಹೈದರಾಬಾದ್, ವಿಜಯವಾಡ, ಇಂದೋರ್, ಮುಂಬೈ, ಗೋವಾ, ವಿಶಾಖಪಟ್ಟಣಂ, ಅಹಮದಾಬಾದ್ ಮತ್ತು ಮಂಗಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ವಿಮಾನಗಳು ಕ್ಯಾನ್ಸಲ್ ಆಗಿವೆ. ಕೆಐಎಎಲ್‌ನಿಂದ ತೆರಳಬೇಕಿದ್ದ ಕೆಲ ವಿಮಾನಗಳ ಹಾರಾಟವೂ ಕ್ಯಾನ್ಸಲ್ ಆಗಿದೆ. ಸುಮಾರು 30ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ.

ಹೈದರಾಬಾದ್‌ಗೆ ತೆರಳಬೇಕಾಗಿದ್ದ ವಿಮಾನ ಕ್ಯಾನ್ಸಲ್: ತೆಲಂಗಾಣ ಸರ್ಕಾರದಿಂದ ಅನುಮತಿ ದೊರೆಯದ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆಗೆ ಕೆಐಎಎಲ್‌ನಿಂದ ತೆರಳಬೇಕಿದ್ದ ವಿಮಾನ ಕೊನೇ ಕ್ಷಣದಲ್ಲಿ ಕ್ಯಾನ್ಸಲ್ ಆಗಿದೆ. ಏಕಾಏಕಿ ವಿಮಾನ ಹಾರಾಟವನ್ನು ರದ್ದು ಮಾಡಿದ ಕಾರಣ ಏರ್‌ಪೋರ್ಟ್ ಸಿಬ್ಬಂದಿಯ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲೂ ಪ್ರಯಾಣಿಕರ ಅಲಭ್ಯತೆ: ಪ್ರಯಾಣಿಕರ ಅಲಭ್ಯತೆ‌ ಮತ್ತು ತಾಂತ್ರಿಕ ಕಾರಣಗಳಿಂದ ಮಂಗಳೂರು ಏರ್​ಪೋರ್ಟ್​ನಿಂದ ಮುಂಬೈ ಮತ್ತು ಚೆನ್ನೈಗೆ ವಿಮಾನ ಹಾರಾಟ ರದ್ದಾಗಿದೆ. ಹಗಲು ಹೊತ್ತಿನಲ್ಲಿ ಮಂಗಳೂರು-ಬೆಂಗಳೂರು ಮಧ್ಯೆ ವಿಮಾನ ಹಾರಾಟವಿಲ್ಲ. ರಾತ್ರಿ 7.35ಕ್ಕೆ ಬೆಂಗಳೂರಿಗೆ ಇಂಡಿಗೋ ವಿಮಾನ ತೆರಳಲಿದೆ. ರಾತ್ರಿ 9.50ಕ್ಕೆ ಬೆಂಗಳೂರಿಗೆ ಮತ್ತೊಂದು ಸ್ಪೈಸ್ ಜೆಟ್ ವಿಮಾನ ಪ್ರಯಾಣಿಸಲಿದೆ. ಇಂದು ನಿಗದಿಯಾಗಿದ್ದ 6 ವಿಮಾನಗಳ ಪೈಕಿ ನಾಲ್ಕು ವಿಮಾನ ಹಾರಾಟ ರದ್ದಾಗಿದೆ. ಇಂದು ಕೇವಲ ಬೆಂಗಳೂರು ಮಧ್ಯೆ 2 ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗಿದೆ.

ಹಾರುವ ಮೊದಲೇ ವಿಮಾನ ರದ್ದು: ಹಾರುವ ಮೊದಲೇ ಮೈಸೂರಿಗೆ ಆಗಮಿಸಬೇಕಿದ್ದ ಬೆಳಗಾವಿ ವಿಮಾನ ರದ್ದಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯಿಂದ TruJet ವಿಮಾನ ಹೊರಟು, ಸಂಜೆ 4.20ಕ್ಕೆ ಮೈಸೂರಿಗೆ ತಲುಪಬೇಕಿತ್ತು. ಮತ್ತೆ ಮೈಸೂರಿನಿಂದ ಬೆಳಗಾವಿಗೆ ಹಾರಾಟ ಮಾಡಬೇಕಿತ್ತು. ನಿಗದಿತ ಪ್ರಯಾಣಿಕರ ಸಂಖ್ಯೆಗಿಂತ ಕಡಿಮೆಯಾದ ಹಿನ್ನೆಲೆಯಲ್ಲಿ ವಿಮಾನ ಹಾರಟ ರದ್ದು ಮಾಡಿರುವುದಾಗಿ ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಮಂಜುನಾಥ್‌ ಮಾಹಿತಿ‌ ನೀಡಿದ್ದಾರೆ.

80 ವಿಮಾನಗಳ ಹಾರಾಟ ರದ್ದು:  ಯಾವುದೇ ಮುನ್ಸೂಚನೆ ನೀಡದೆ ದೆಹಲಿಯಿಂದ ವಿವಿಧ ನಗರಗಳಿಗೆ ತೆರಳಬೇಕಿದ್ದ 80 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ವಿಮಾನ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published On - 10:45 am, Mon, 25 May 20

ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ