AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಜನ್ಮಭೂಮಿ ಹೋರಾಟಗಾರನ ಬಂಧನ: ಅಪರಾಧಿ ಅಪರಾಧಿಯೇ ಎಂದ ಸಿದ್ದರಾಮಯ್ಯ

ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತನನ್ನು ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ಬಂಧಿಸಿದ್ದು, ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಕಾಂಗ್ರೆಸ್ ಸರ್ಕಾರ ಗುರಿಯಾಗಿದೆ. ವಿಪಕ್ಷ ಬಿಜೆಪಿ ಕಾಂಗ್ರೆಸ್ ನಾಯಕರ ವಿರುದ್ಧ ಮುಗಿಬೀಳುತ್ತಿದೆ. ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಕರಣದಲ್ಲಿ ಸಮಯ ಆದ ತಕ್ಷಣ ಅಪರಾಧವೇ ಹೋಗಿ ಬಿಡುತ್ತಾ ಎಂದು ಪ್ರಶ್ನಿಸಿದ್ದಾರೆ.

ರಾಮ ಜನ್ಮಭೂಮಿ ಹೋರಾಟಗಾರನ ಬಂಧನ: ಅಪರಾಧಿ ಅಪರಾಧಿಯೇ ಎಂದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on: Jan 02, 2024 | 2:54 PM

Share

ವಿಜಯಪುರ, ಜ.2: ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತನನ್ನು ಬಂಧಿಸಿದ್ದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಪ್ರಕರಣದಲ್ಲಿ ಸಮಯ ಆದ ತಕ್ಷಣ ಅಪರಾಧವೇ ಹೋಗಿ ಬಿಡುತ್ತಾ ಎಂದು ಪ್ರಶ್ನಿಸಿದ್ದಾರೆ.

ವಿಜಯಪುರದ ಬಿಎಲ್​ಡಿಇ ಹೆಲಿಪ್ಯಾಡ್​ನಲ್ಲಿ ಮಾತನಾಡಿದ ಅವರು, ಯಾವತ್ತೂ ಅಪರಾಧಿ ಅಪರಾಧಿಯೇ ಆಗುತ್ತಾನೆ. ಹಳೆ ಪ್ರಕರಣವನ್ನು ಮುಗಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ. ಹಾಗಾಗಿ ಪ್ರಕರಣವನ್ನು ರೀಓಪನ್ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ಶಾಂತಿ ಸುವ್ಯವಸ್ಥೆ ಕದಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಕಾಂಗ್ರೆಸ್​ ನೀಚ ಸರ್ಕಾರ ಎಂಬ ಪ್ರಲ್ಹಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಅಪರಾಧಿಗಳಿಗೆ ಬೆಂಬಲ‌ ಕೊಡುವ ಕೇಂದ್ರ ಸಚಿವ ಜೋಶಿಯವರದ್ದು ನೀಚತನ. ಈಗ ಅರೆಸ್ಟ್ ಮಾಡಿದರೆ ಏನು ತಪ್ಪು, ಬಂಧಿಸಬಾರದು ಅಂತಾ ಇದೆಯಾ? ಜೋಶಿ ಏನು ಕೋರ್ಟಾ? ಜೋಶಿ ಹೇಳಿದ್ದೇ ಅಂತಿಮವೇ ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜಕೀಯವಾಗಿ ಮಾತನಾಡುತ್ತಿದ್ದಾರೆ. ಕಾನೂನಾತ್ಮಕವಾಗಿ ಮಾತನಾಡಲಿ. ಕಾನೂನು ಏನ್ ಹೇಳುತ್ತೋ ಅದನ್ನು ಸರ್ಕಾರ ಮಾಡುತ್ತೆ ಎಂದು ಹೇಳುವ ಮೂಲಕ ಶ್ರೀಕಾಂತ್ ಪೂಜಾರಿ ಬಂಧನವನ್ನು ಸಮರ್ಥಿಸಿಕೊಂಡರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ