AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಜನ್ಮಭೂಮಿ ಹೋರಾಟಗಾರನ ಬಂಧನ: ಅಪರಾಧಿ ಅಪರಾಧಿಯೇ ಎಂದ ಸಿದ್ದರಾಮಯ್ಯ

ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತನನ್ನು ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ಬಂಧಿಸಿದ್ದು, ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಕಾಂಗ್ರೆಸ್ ಸರ್ಕಾರ ಗುರಿಯಾಗಿದೆ. ವಿಪಕ್ಷ ಬಿಜೆಪಿ ಕಾಂಗ್ರೆಸ್ ನಾಯಕರ ವಿರುದ್ಧ ಮುಗಿಬೀಳುತ್ತಿದೆ. ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಕರಣದಲ್ಲಿ ಸಮಯ ಆದ ತಕ್ಷಣ ಅಪರಾಧವೇ ಹೋಗಿ ಬಿಡುತ್ತಾ ಎಂದು ಪ್ರಶ್ನಿಸಿದ್ದಾರೆ.

ರಾಮ ಜನ್ಮಭೂಮಿ ಹೋರಾಟಗಾರನ ಬಂಧನ: ಅಪರಾಧಿ ಅಪರಾಧಿಯೇ ಎಂದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on: Jan 02, 2024 | 2:54 PM

Share

ವಿಜಯಪುರ, ಜ.2: ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತನನ್ನು ಬಂಧಿಸಿದ್ದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಪ್ರಕರಣದಲ್ಲಿ ಸಮಯ ಆದ ತಕ್ಷಣ ಅಪರಾಧವೇ ಹೋಗಿ ಬಿಡುತ್ತಾ ಎಂದು ಪ್ರಶ್ನಿಸಿದ್ದಾರೆ.

ವಿಜಯಪುರದ ಬಿಎಲ್​ಡಿಇ ಹೆಲಿಪ್ಯಾಡ್​ನಲ್ಲಿ ಮಾತನಾಡಿದ ಅವರು, ಯಾವತ್ತೂ ಅಪರಾಧಿ ಅಪರಾಧಿಯೇ ಆಗುತ್ತಾನೆ. ಹಳೆ ಪ್ರಕರಣವನ್ನು ಮುಗಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ. ಹಾಗಾಗಿ ಪ್ರಕರಣವನ್ನು ರೀಓಪನ್ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ಶಾಂತಿ ಸುವ್ಯವಸ್ಥೆ ಕದಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಕಾಂಗ್ರೆಸ್​ ನೀಚ ಸರ್ಕಾರ ಎಂಬ ಪ್ರಲ್ಹಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಅಪರಾಧಿಗಳಿಗೆ ಬೆಂಬಲ‌ ಕೊಡುವ ಕೇಂದ್ರ ಸಚಿವ ಜೋಶಿಯವರದ್ದು ನೀಚತನ. ಈಗ ಅರೆಸ್ಟ್ ಮಾಡಿದರೆ ಏನು ತಪ್ಪು, ಬಂಧಿಸಬಾರದು ಅಂತಾ ಇದೆಯಾ? ಜೋಶಿ ಏನು ಕೋರ್ಟಾ? ಜೋಶಿ ಹೇಳಿದ್ದೇ ಅಂತಿಮವೇ ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜಕೀಯವಾಗಿ ಮಾತನಾಡುತ್ತಿದ್ದಾರೆ. ಕಾನೂನಾತ್ಮಕವಾಗಿ ಮಾತನಾಡಲಿ. ಕಾನೂನು ಏನ್ ಹೇಳುತ್ತೋ ಅದನ್ನು ಸರ್ಕಾರ ಮಾಡುತ್ತೆ ಎಂದು ಹೇಳುವ ಮೂಲಕ ಶ್ರೀಕಾಂತ್ ಪೂಜಾರಿ ಬಂಧನವನ್ನು ಸಮರ್ಥಿಸಿಕೊಂಡರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ