AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಜನ್ಮಭೂಮಿ ಹೋರಾಟಗಾರನ ಬಂಧನ: ಅಪರಾಧಿ ಅಪರಾಧಿಯೇ ಎಂದ ಸಿದ್ದರಾಮಯ್ಯ

ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತನನ್ನು ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ಬಂಧಿಸಿದ್ದು, ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಕಾಂಗ್ರೆಸ್ ಸರ್ಕಾರ ಗುರಿಯಾಗಿದೆ. ವಿಪಕ್ಷ ಬಿಜೆಪಿ ಕಾಂಗ್ರೆಸ್ ನಾಯಕರ ವಿರುದ್ಧ ಮುಗಿಬೀಳುತ್ತಿದೆ. ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಕರಣದಲ್ಲಿ ಸಮಯ ಆದ ತಕ್ಷಣ ಅಪರಾಧವೇ ಹೋಗಿ ಬಿಡುತ್ತಾ ಎಂದು ಪ್ರಶ್ನಿಸಿದ್ದಾರೆ.

ರಾಮ ಜನ್ಮಭೂಮಿ ಹೋರಾಟಗಾರನ ಬಂಧನ: ಅಪರಾಧಿ ಅಪರಾಧಿಯೇ ಎಂದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jan 02, 2024 | 2:54 PM

Share

ವಿಜಯಪುರ, ಜ.2: ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತನನ್ನು ಬಂಧಿಸಿದ್ದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಪ್ರಕರಣದಲ್ಲಿ ಸಮಯ ಆದ ತಕ್ಷಣ ಅಪರಾಧವೇ ಹೋಗಿ ಬಿಡುತ್ತಾ ಎಂದು ಪ್ರಶ್ನಿಸಿದ್ದಾರೆ.

ವಿಜಯಪುರದ ಬಿಎಲ್​ಡಿಇ ಹೆಲಿಪ್ಯಾಡ್​ನಲ್ಲಿ ಮಾತನಾಡಿದ ಅವರು, ಯಾವತ್ತೂ ಅಪರಾಧಿ ಅಪರಾಧಿಯೇ ಆಗುತ್ತಾನೆ. ಹಳೆ ಪ್ರಕರಣವನ್ನು ಮುಗಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ. ಹಾಗಾಗಿ ಪ್ರಕರಣವನ್ನು ರೀಓಪನ್ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ಶಾಂತಿ ಸುವ್ಯವಸ್ಥೆ ಕದಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಕಾಂಗ್ರೆಸ್​ ನೀಚ ಸರ್ಕಾರ ಎಂಬ ಪ್ರಲ್ಹಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಅಪರಾಧಿಗಳಿಗೆ ಬೆಂಬಲ‌ ಕೊಡುವ ಕೇಂದ್ರ ಸಚಿವ ಜೋಶಿಯವರದ್ದು ನೀಚತನ. ಈಗ ಅರೆಸ್ಟ್ ಮಾಡಿದರೆ ಏನು ತಪ್ಪು, ಬಂಧಿಸಬಾರದು ಅಂತಾ ಇದೆಯಾ? ಜೋಶಿ ಏನು ಕೋರ್ಟಾ? ಜೋಶಿ ಹೇಳಿದ್ದೇ ಅಂತಿಮವೇ ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜಕೀಯವಾಗಿ ಮಾತನಾಡುತ್ತಿದ್ದಾರೆ. ಕಾನೂನಾತ್ಮಕವಾಗಿ ಮಾತನಾಡಲಿ. ಕಾನೂನು ಏನ್ ಹೇಳುತ್ತೋ ಅದನ್ನು ಸರ್ಕಾರ ಮಾಡುತ್ತೆ ಎಂದು ಹೇಳುವ ಮೂಲಕ ಶ್ರೀಕಾಂತ್ ಪೂಜಾರಿ ಬಂಧನವನ್ನು ಸಮರ್ಥಿಸಿಕೊಂಡರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ