AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ

ಗೊಂಬೆ ಮಾಸ್ಕ್ ಧರಿಸಿಕೊಂಡು ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರು ಮತ್ತು ಬೈಕ್​ಗಳನ್ನು ಧ್ವಂಸ ಮಾಡಿದ್ದ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬೆಂಗಳೂರು ನಗರದ ರಾಜಗೋಪಾಲನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಲಗ್ಗೆರೆ ಬಳಿ 15 ಕಾರು, ಬೈಕ್​ಗಳನ್ನು ಪುಂಡರು ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದರು.

ಬೆಂಗಳೂರು: ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ
ಬೆಂಗಳೂರಿನ ಲಗ್ಗೆರೆ ಬಳಿ ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ (ಸಾಂದರ್ಭಿಕ ಚಿತ್ರ)
Jagadisha B
| Edited By: |

Updated on:Nov 16, 2023 | 10:05 AM

Share

ಬೆಂಗಳೂರು, ನ.16: ಗೊಂಬೆ ಮಾಸ್ಕ್ ಧರಿಸಿಕೊಂಡು ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರು ಮತ್ತು ಬೈಕ್​ಗಳನ್ನು ಧ್ವಂಸ ಮಾಡಿದ್ದ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬೆಂಗಳೂರು (Bengaluru) ನಗರದ ರಾಜಗೋಪಾಲನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಏರಿಯಾದಲ್ಲಿ ಹವಾ ಇಡಲು ಲಗ್ಗೆರೆ ಬಳಿ ಬೈಕ್​ನಲ್ಲಿ ಬಂದಿದ್ದ ಪುಂಡರ ಗ್ಯಾಂಗ್, 15 ಕಾರು ಹಾಗೂ ಬೈಕ್​ಗಳನ್ನು ಪೈಡಿಗೈದಿದ್ದರು. ಕಂಠ ಪೂರ್ತಿ ಕುಡಿದು ಬೈಕ್​ಗಳಲ್ಲಿ ಬಂದು ತೂರಾಡುತ್ತಾ ಮನಬಂದಂತೆ ರಾಡ್ ಮತ್ತು ಲಾಂಗ್​ಗಳಿಂದ ಕಾರುಗಳ ಗ್ಲಾಸ್ ಪುಡಿ ಮಾಡಿ ಪರಾರಿಯಾಗಿದ್ದರು.

ಸ್ಥಳಕ್ಕೆ ಶಾಸಕ ಮುನಿರತ್ನ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದರು. ಇತ್ತ, ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ರಾಜಗೋಪಾಲನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಸದ್ಯ, ಪಕ್ಕದ ಏರಿಯಾದಿಂದ ಲಗ್ಗೆರೆಗೆ ಬಂದು ಕೃತ್ಯ ಎಸಗಿ ಬೇರೆಬೇರೆ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಒಂದು ಚೊಂಬಿನ ಕಥೆ! ಕಳ್ಳತನದ ಕೇಸ್ ಅಂತ ಹೋದ ಹೊಯ್ಸಳ ಪೊಲೀಸರು ಕಕ್ಕಾಬಿಕ್ಕಿಯಾದರು!

ಬಾರ್​ ಶೆಟರ್​ ಮುರಿದು ಹಣ ಕಳ್ಳತನ

ಆನೇಕಲ್: ಶೆಟರ್​ ಮುರಿದು ಪ್ರಜ್ವಲ್ ಬಾರ್ ಒಳಗೆ ನುಗ್ಗಿದ ಕಳ್ಳರು, ಹಣ ದೋಚಿ ಪರಾರಿಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್​ ತಾಲೂಕಿನ ತಿರುಪಾಳ್ಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ಮೂರು ಜನ ಖದೀಮರು ಬಾರ್​ಗೆ ನುಗ್ಗಿ ಕಳ್ಳತನ ಮಾಡಿದ್ದಾರೆ.

ಕಳೆದ ರಾತ್ರಿ ಬಾರ್ ಬಳಿ ಬಂದಿದ್ದ ಮೂವರ ಪೈಕಿ ಇಬ್ಬರು ಹೊರಗಡೆ ಮಾಹಿತಿದಾರರಾಗಿ ನಿಂತುಕೊಂಡು ಮತ್ತೊಬ್ಬ ಬಾರ್ ಒಳಗೆ ನುಗ್ಗಿ ಹಣ ದೋಚಿ ಪರಾರಿಯಾಗಿದ್ದಾರೆ. ಬಾರ್​ನಲ್ಲಿ 6 ಲಕ್ಷಕ್ಕೂ ಹೆಚ್ಚು ನಗದು ಇತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ, ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 am, Thu, 16 November 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ