AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ

ಗೊಂಬೆ ಮಾಸ್ಕ್ ಧರಿಸಿಕೊಂಡು ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರು ಮತ್ತು ಬೈಕ್​ಗಳನ್ನು ಧ್ವಂಸ ಮಾಡಿದ್ದ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬೆಂಗಳೂರು ನಗರದ ರಾಜಗೋಪಾಲನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಲಗ್ಗೆರೆ ಬಳಿ 15 ಕಾರು, ಬೈಕ್​ಗಳನ್ನು ಪುಂಡರು ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದರು.

ಬೆಂಗಳೂರು: ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ
ಬೆಂಗಳೂರಿನ ಲಗ್ಗೆರೆ ಬಳಿ ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ (ಸಾಂದರ್ಭಿಕ ಚಿತ್ರ)
Follow us
Jagadisha B
| Updated By: Rakesh Nayak Manchi

Updated on:Nov 16, 2023 | 10:05 AM

ಬೆಂಗಳೂರು, ನ.16: ಗೊಂಬೆ ಮಾಸ್ಕ್ ಧರಿಸಿಕೊಂಡು ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರು ಮತ್ತು ಬೈಕ್​ಗಳನ್ನು ಧ್ವಂಸ ಮಾಡಿದ್ದ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬೆಂಗಳೂರು (Bengaluru) ನಗರದ ರಾಜಗೋಪಾಲನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಏರಿಯಾದಲ್ಲಿ ಹವಾ ಇಡಲು ಲಗ್ಗೆರೆ ಬಳಿ ಬೈಕ್​ನಲ್ಲಿ ಬಂದಿದ್ದ ಪುಂಡರ ಗ್ಯಾಂಗ್, 15 ಕಾರು ಹಾಗೂ ಬೈಕ್​ಗಳನ್ನು ಪೈಡಿಗೈದಿದ್ದರು. ಕಂಠ ಪೂರ್ತಿ ಕುಡಿದು ಬೈಕ್​ಗಳಲ್ಲಿ ಬಂದು ತೂರಾಡುತ್ತಾ ಮನಬಂದಂತೆ ರಾಡ್ ಮತ್ತು ಲಾಂಗ್​ಗಳಿಂದ ಕಾರುಗಳ ಗ್ಲಾಸ್ ಪುಡಿ ಮಾಡಿ ಪರಾರಿಯಾಗಿದ್ದರು.

ಸ್ಥಳಕ್ಕೆ ಶಾಸಕ ಮುನಿರತ್ನ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದರು. ಇತ್ತ, ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ರಾಜಗೋಪಾಲನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಸದ್ಯ, ಪಕ್ಕದ ಏರಿಯಾದಿಂದ ಲಗ್ಗೆರೆಗೆ ಬಂದು ಕೃತ್ಯ ಎಸಗಿ ಬೇರೆಬೇರೆ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಒಂದು ಚೊಂಬಿನ ಕಥೆ! ಕಳ್ಳತನದ ಕೇಸ್ ಅಂತ ಹೋದ ಹೊಯ್ಸಳ ಪೊಲೀಸರು ಕಕ್ಕಾಬಿಕ್ಕಿಯಾದರು!

ಬಾರ್​ ಶೆಟರ್​ ಮುರಿದು ಹಣ ಕಳ್ಳತನ

ಆನೇಕಲ್: ಶೆಟರ್​ ಮುರಿದು ಪ್ರಜ್ವಲ್ ಬಾರ್ ಒಳಗೆ ನುಗ್ಗಿದ ಕಳ್ಳರು, ಹಣ ದೋಚಿ ಪರಾರಿಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್​ ತಾಲೂಕಿನ ತಿರುಪಾಳ್ಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ಮೂರು ಜನ ಖದೀಮರು ಬಾರ್​ಗೆ ನುಗ್ಗಿ ಕಳ್ಳತನ ಮಾಡಿದ್ದಾರೆ.

ಕಳೆದ ರಾತ್ರಿ ಬಾರ್ ಬಳಿ ಬಂದಿದ್ದ ಮೂವರ ಪೈಕಿ ಇಬ್ಬರು ಹೊರಗಡೆ ಮಾಹಿತಿದಾರರಾಗಿ ನಿಂತುಕೊಂಡು ಮತ್ತೊಬ್ಬ ಬಾರ್ ಒಳಗೆ ನುಗ್ಗಿ ಹಣ ದೋಚಿ ಪರಾರಿಯಾಗಿದ್ದಾರೆ. ಬಾರ್​ನಲ್ಲಿ 6 ಲಕ್ಷಕ್ಕೂ ಹೆಚ್ಚು ನಗದು ಇತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ, ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 am, Thu, 16 November 23

ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್